Homeಮುಖಪುಟಬಿಜೆಪಿ ಸೇರಲು ಸಚಿನ್ ಪೈಲಟ್‌ರಿಂದ 35 ಕೋಟಿ ರೂ ಆಮಿಷ: ಕಾಂಗ್ರೆಸ್ ಶಾಸಕನ ಆರೋಪ

ಬಿಜೆಪಿ ಸೇರಲು ಸಚಿನ್ ಪೈಲಟ್‌ರಿಂದ 35 ಕೋಟಿ ರೂ ಆಮಿಷ: ಕಾಂಗ್ರೆಸ್ ಶಾಸಕನ ಆರೋಪ

ಮಾಲಿಂಗ ಅವರು ಪೈಲಟ್ ಅವರೊಂದಿಗೆ 2-3 ಬಾರಿ ಸಂಭಾಷಣೆ ನಡೆಸಿದ್ದಾರೆ. ಮೊದಲು ಡಿಸೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಮಯದಲ್ಲಿ ಮತ್ತು ನಂತರ ಕಳೆದ ತಿಂಗಳು ರಾಜ್ಯಸಭಾ ಚುನಾವಣೆಗೆ ಮೊದಲು ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನನ್ನು ಬೆಂಬಲಿಸುವಂತೆ ನನಗೆ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ 35 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂದು ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿರುವ ನಡುವೆಯೇ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಪತ್ರಕರ್ತರೊಡನೆ ಮಾತನಾಡಿ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ರಾಜಸ್ಥಾನದ ಬಾರಿ ಕ್ಷೇತ್ರವನ್ನು ಪ್ರತಿನಿಧಿಸುವ ಗಿರಿರಾಜ್ ಸಿಂಗ್ ಮಾಲಿಂಗ ಈ ಕುರಿತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ತೊರೆದು ತನ್ನೊಡನೆ ಬಿಜೆಪಿ ಸೇರುವಂತೆ ಸಚಿನ್ ಪೈಲಟ್ ನನಗೂ ಆಮಿಷವೊಡ್ಡಿದ್ದರು. ಅದನ್ನು ನಾನು ನಿರಾಕರಿಸಿದೆ. ಇದು ಒಳ್ಳೇಯದಲ್ಲ ಮತ್ತು ನಾನು ಹಣಕ್ಕಾಗಿ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದೆ. -ಸಿಂಗ್

ನಾನು ಬಿಎಸ್‌ಪಿ ಪಕ್ಷವನ್ನು 2008 ರಲ್ಲಿ ತೊರೆದೆ. ಏಕೆಂದರೆ ಅಲ್ಲಿ ಟಿಕೆಟ್ ಪಡೆಯಲು ಹಣ ನೀಡಬೇಕಾಗಿತ್ತು. ಆದರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆ ವ್ಯವಸ್ಥೆಯಿಲ್ಲ ಎಂದು ನಾನು ಕೇಳಿದ್ದೆ. ಸಚಿನ್ ನನಗೆ ಸಾಕಷ್ಟು ಹಣವನ್ನು ನೀಡುವುದಾಗಿ ತಿಳಿಸಿದರು. ಹಣದ ಬಗ್ಗೆ ಚಿಂತೆ ಬಿಡಿ ನಿಮಗೆಷ್ಟು ಬೇಕು ಹೇಳಿ, 35 ಕೋಟಿ ಅಥವಾ ಅದಕ್ಕಿಂತ ಹೆಚ್ಚು ಸಿಗುತ್ತದೆ ಎಂದು ಸಚಿನ್ ತಿಳಿಸಿದ್ದರು. ಆದರೆ ಅದು ತಪ್ಪು ಎಂದು ನಾನು ಹೇಳಿದೆ ಎಂದಿದ್ದಾರೆ.

ಮಾಲಿಂಗ ಅವರು ಪೈಲಟ್ ಅವರೊಂದಿಗೆ 2-3 ಬಾರಿ ಸಂಭಾಷಣೆ ನಡೆಸಿದ್ದಾರೆ. ಮೊದಲು ಡಿಸೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಮಯದಲ್ಲಿ ಮತ್ತು ನಂತರ ಕಳೆದ ತಿಂಗಳು ರಾಜ್ಯಸಭಾ ಚುನಾವಣೆಗೆ ಮೊದಲು ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಫೆರ್ ಮೌಂಟ್ ಹೋಟೆಲ್ ನಲ್ಲಿ ತಂಗಿದ್ದು ಹಾಡು-ಆಟದಲ್ಲಿ ತೊಡಗಿದ್ದಾರೆ. ಶಾಸಕರು ನಾವು ಗೆದ್ದೆ ಗೆಲ್ಲುವೆವು ಹಾಡು ಮತ್ತು ಅಂತ್ಯಾಕ್ಷರಿಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನೊಂದೆಡೆ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

19 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರು, ಇಬ್ಬರು ಪಕ್ಷೇತರರು ಸೇರಿದಂತೆ ಒಟ್ಟು 21 ಮಂದಿ ಶಾಸಕರು ಸಚಿನ್ ಪೈಲಟ್ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ವರಿದಿಗಳು ತಿಳಿಸಿವೆ.

ಈ ಮುಂಚೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಕಾಂಗ್ರೆಸ್ ಶಾಸಕನ ನಡುವಿನ ಕುದುರೆ ವ್ಯಾಪಾರದ ಆಡಿಯೋ ವೈರಲ್ ಆಗಿತ್ತು. ಆ ಕುರಿತು ಸಚಿವರು ಸೇರಿದಂತೆ ಎಲ್ಲರ ಹೇಳಿಕೆ ಪಡೆದು ವಿಚಾರಣೆ ನಡೆಯುತ್ತಿದೆ. ಈ ನಡುವೆಯೇ ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಹಣದ ಆಮಿಷವೊಡ್ಡಿರುವ ಸುದ್ದಿ ವೈರಲ್ ಆಗಿದೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಕೋರ್ಟ್ ಮಧ್ಯಪ್ರವೇಶಿಸುವಂತಿಲ್ಲ- ಅಭಿಷೇಕ್ ಸಿಂಗ್ವಿ ವಾದ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...