Homeಅಂಕಣಗಳುಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು...

ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

- Advertisement -
- Advertisement -

ಸೋನಿಯಾ ಎಂಬ ಸ್ತ್ರೀ ಕಾರಂಜಿ
“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ, ಜೈಲಲ್ಲಿ ಕೊಳೆಯುತ್ತಿರಬೇಕಾದ ಇಂಥವರು ಇವತ್ತು ಈ ರಾಷ್ಟ್ರದ ಆಡಳಿತ ಸೂತ್ರಗಳನ್ನು ಹಿಡಿದುಕೊಳ್ಳುವ ಮಾತಾಡುತ್ತಿರುವುದು ಭಾರತ ತಲುಪಿರುವ ಕರುಣಾಜನಕ ಸ್ಥಿತಿಯನ್ನು ತೋರುತ್ತದೆ. ಕೇಡಿಗಳನ್ನು ಹಿಡಿದು ಶಿಕ್ಷಿಸುವ ಬದಲು ಅವರು ದಿಗ್ವಿಜಯ ಸಾಧಿಸಿದಂತೆ ಆರತಿ ಬೆಳಗುತ್ತಿರುವುದು ವಿಚಿತ್ರವಾಗಿದೆ. ಯಾರೂ ಯಾವ ದೇಶವನ್ನು ನೋಡಕೂಡದು, ಕೋಶವನ್ನು ಓದಕೂಡದು, ಮೌಢ್ಯದಿಂದ ಹೊರಬರಕೂಡದು ಎಂದು ಇವತ್ತಿಗೂ ಹೇಳುತ್ತಿರುವ ಈ ಸಮಾಜದ್ರೋಹಿ, ಜೀವದ್ರೋಹಿಗಳು ಸಾವಿರಾರು ವರ್ಷಗಳಿಂದ ಈ ದೇಶವನ್ನು ಜಾತಿಪದ್ಧತಿಯಲ್ಲಿ ಹೂತುಹಾಕಿದ್ದು ಕಣ್ಣಿದ್ದು ನೋಡಬಲ್ಲವರಿಗೆ ಗೊತ್ತಿದೆ. ಇಂಥ ವಂಚಕರು ಸೋನಿಯಾ ತರಹದ ಮಹಿಳೆಯನ್ನು ವಿದೇಶದವಳೆಂದು ಹೀಯಾಳಿಸುವುದು ಇವರ ಪರಂಪರೆಗೆ ತಕ್ಕಂತಿದೆ.”
“ಈ ದೇಶದಲ್ಲಿಯೇ ಇದ್ದು ಇಲ್ಲಿಯ ಜನಸಮುದಾಯದ ದುರಂತ, ಸೋಲು, ಸಾವು ಎಲ್ಲವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ, ಇಲ್ಲಿಯ ಜನರ ಅಸಹಾಯಕ ಸ್ಥಿತಿಯನ್ನೇ ತಮ್ಮ ಏಳ್ಗೆಗೆ ಉಪಯೋಗಿಸಿಕೊಂಡ ಪೂರ್ಣಯ್ಯಗಳೆಂಬ ದುಷ್ಟರು ನಿಜವಾಗಿಯೂ ಪರದೇಶಿಗಳು; ಇಲ್ಲಿಯ ಒಬ್ಬ ವಿಮಾನ ಚಾಲಕನನ್ನು ವರಿಸಿ ಆತನನ್ನು ರಾಜಕೀಯದಿಂದ ಹೊರಗಿಡಲು ಯತ್ನಿಸಿ ವಿಫಲವಾಗಿ ಸಾವು, ನೋವು, ದುಃಖದಲ್ಲಿ ಬೆಂದು ಹೋಗಿ ಇವತ್ತು ಗಾಂಧೀಜಿಯ ಮಾನವೀಯತೆಯನ್ನು ಸಾರ್ವಜನಿಕ ಜೀವನಕ್ಕೆ ತರಲು ಯತ್ನಿಸುತ್ತಿರುವ ಸೋನಿಯಾ ಈ ನಾಡಿನ ಸೊಸೆ, ಇಲ್ಲಿಯ ಹೆಮ್ಮೆಯ ಹೆಣ್ಣುಮಗಳು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಈ ಸೋನಿಯಾ ಅತ್ತೆ ಇಂದಿರಾಗಿಂತ, ಪತಿ ರಾಜೀವ್‍ಗಿಂತ ಜಾಣೆ; ಅವರಿಬ್ಬರೂ ಕೆಟ್ಟದಾಗಿ ಅರಚಬಹುದಾಗಿದ್ದ ಸಂದರ್ಭದಲ್ಲಿ ಪಶ್ಚಿಮದ ಖಚಿತತೆ, ಕುಶಲತೆ, ತೀವ್ರತೆ ತೋರುತ್ತಿರುವ ಸೋನಿಯಾ ನಿಜವಾದ ನಾಯಕಿಯಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಕೆ ಕೇವಲ ಹತ್ತು ದಿನದಲ್ಲಿ ಭಾರತದ ರಾಜಕೀಯಕ್ಕೆ ಮಿಂಚಿನ ಸಂಚಾರ ಮೂಡಿಸಿರುವುದು ಬಿಜೆಪಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.”
ಫೆಬ್ರವರಿ 11, 1998

ಪರಕೀಯ ವಾಜಪೇಯಿ ನಮ್ಮ ಹೆಣ್ಣುಮಗಳು ಸೋನಿಯಾ
“ಮಾಸ್ತಿಯವರು ತುಂಬ ಸುಶಿಕ್ಷಿತರಾಗಿದ್ದರು. ಆದರೆ ಅವರಿಗೆ ಭಾರತೀಯ ಸಮಾಜದಲ್ಲಿರುವ ಅನ್ಯಾಯಗಳು, ಶೋಷಣೆ, ಜಾತಿಪದ್ಧತಿ, ಪ್ರಚ್ಛನ್ನ ದಬ್ಬಾಳಿಕೆ- ಯಾವುದೂ ಕಾಣಿಸುತ್ತಿರಲಿಲ್ಲ. ಹಾಗೆಯೇ ಬ್ರಾಹ್ಮಣೇತರರ ಮೌಢ್ಯದ ಸೂಕ್ಷ್ಮಗಳು, ಅಪಾಯಗಳೂ ತಿಳಿಯುತ್ತಿರಲಿಲ್ಲ. ಅವರ ಪ್ರಕಾರ ವಸ್ತುನಿಷ್ಠೆ ಯಾವುದೆಂದರೆ, ಈಗಿರುವ ವ್ಯವಸ್ಥೆಯನ್ನು ಕಿಂಚಿತ್ತೂ ಕೆಡದಂತೆ ಕಾಪಾಡಿಕೊಂಡು ಬರುವುದು. ಮಾಸ್ತಿಯವರ ವಸ್ತುನಿಷ್ಠೆಯ ಸಿದ್ಧಾಂತವನ್ನು ಒಪ್ಪಿಕೊಂಡರೆ ಮಾತ್ರ ಅವರು ಭಗವದ್ಗೀತೆಗೆ ನೀಡುವ ಅರ್ಥವನ್ನು ಒಪ್ಪಬಹುದು. ಅವರ ಪ್ರಕಾರ ಧರ್ಮ, ಸ್ವಧರ್ಮ, ಆತ್ಮ, ಪರಮಾತ್ಮ ಮುಂತಾದವೆಲ್ಲ ಎಂದೂ ಬದಲಾಗದ ವಸ್ತುಗಳು; ಧರ್ಮ ಜಾತಿಯಾಗಿಯೂ ವರ್ಗವಾಗಿಯೂ ಧರ್ಮವಾಗಿಯೂ ಬರುತ್ತದೆ. ಹಾಗಾಗಿಯೇ ಇಲ್ಲಿ ಕಂದಾಚಾರಿಯೊಬ್ಬನನ್ನು ಧರ್ಮವಂತ ಎಂದು ಕರೆಯುವುದು ಸುಲಭವಾಗುತ್ತದೆ. ಹಾಗೆಯೇ ಸೋನಿಯಾ ಇಟಾಲಿಯನ್ ಹೆಣ್ಣುಮಗಳು ಎಂಬ ಕಾರಣಕ್ಕೆ ನಮ್ಮ ಧರ್ಮಕ್ಕೆ ಸೇರಿದವಳಲ್ಲ, ನಮ್ಮ ಜೀವನಕ್ರಮದಿಂದ ಬಂದವಳಲ್ಲ ಎಂದು ವಾದಿಸುವುದು ಸುಲಭವಾಗುತ್ತದೆ. ಇದು ಶೋಷಕರ ಮಾರ್ಗ, ಸುಳ್ಳರ ದಾರಿ. ಯಾರೂ ಸಮುದ್ರವನ್ನು ದಾಟಿ ಹೊರದೇಶಗಳಿಗೆ ಹೋಗದಿದ್ದರೆ, ಯಾರೂ ಹೊರದೇಶದಿಂದ ಇಲ್ಲಿಗೆ ಬರದಿದ್ದರೆ ಇಲ್ಲಿ ತಾಳೆಗರಿಯ ಮೂಲಕ ವಂಚಿಸುತ್ತಾ ಹೋಗಬಹುದು. ಈ ಪರಕೀಯ ಎಂಬ ಮಾತನ್ನೇ ತೆಗೆದುಕೋ. ನನ್ನ ಪ್ರಕಾರ ಇಲ್ಲಿಯ ಪ್ರಕೃತಿ, ಜನ, ಸಂಪತ್ತು, ಆತ್ಮಗೌರವ ಇವೆಲ್ಲವುಗಳ ಬಗ್ಗೆ ಯಾವುದೇ ಪ್ರೀತಿ, ಗೌರವ ಇಲ್ಲದವನು ಪರಕೀಯ. ಇಂಥ ಪರಕೀಯತೆಗೆ ಉದಾಹರಣೆಯಾಗಿ ನಾನು ದಿವಾನ್ ಪೂರ್ಣಯ್ಯನವರ ಬಗ್ಗೆ ಹೇಳುತ್ತಿರುತ್ತೇನೆ. ಮೈಸೂರು ರಾಜ್ಯದ ಸೋಲು, ಟಿಪ್ಪುವಿನ ಸಾವು, ಇಂಗ್ಲಿಷರ ದಬ್ಬಾಳಿಕೆ ಎಲ್ಲವೂ ಈ ದೇಶದ ಚೈತನ್ಯವನ್ನು ಮುರಿಯುತ್ತಿದ್ದಾಗ ಪೂರ್ಣಯ್ಯನವರು ದಿವಾನ ಸ್ಥಾನದಲ್ಲಿ ನೆಮ್ಮದಿಯಾಗಿದ್ದರು; ಆದರೆ ಫ್ರೆಂಚರ ದೂಬಾಯಿ ಪಾದ್ರಿ ಸಾವಿರಾರು ಜನರಿಗೆ ನೆರವಾದ; ಸಿಡುಬು ಬಂದಾಗ ಲಸಿಕೆ ಹಾಕಿಸಿ ಜೀವ ಉಳಿಸಿದ. ಇಲ್ಲಿಯ ಅನಕ್ಷರತೆ, ಅಸಹಾಯಕತೆಯನ್ನು ತಮ್ಮ ವೈಭವಕ್ಕಾಗಿ ಬಳಸಿಕೊಂಡ ಪೂರ್ಣಯ್ಯ ಈ ದೇಶದವರು, ಇಲ್ಲಿಯ ಜನರನ್ನು ಪ್ರೀತಿಸಿ ಪೊರೆದ ದೂಬಾಯಿ ಪಾದ್ರಿ ಪರಕೀಯ ಎಂದು ನಾನು ನಂಬುವುದಿಲ್ಲ. ಆದ್ದರಿಂದಲೇ ನನ್ನ ದೃಷ್ಟಿಯಲ್ಲಿ ಪೂರ್ಣಯ್ಯ ಪರಕೀಯ, ವಿಶ್ವೇಶ್ವರಯ್ಯ ಸ್ವಕೀಯ, ಅನ್ಯಜಾತಿಯ ದೇವಾಲಯ ಬೀಳಿಸುವ ಅಡ್ವಾಣಿ, ವಾಜಪೇಯಿಗಳು ಪರಕೀಯ, ಸೋನಿಯಾ ಈ ದೇಶದ ಹೆಣ್ಣುಮಗಳು. ನಮ್ಮ ಜನಕ್ಕೆ ಎಲ್ಲ ದೇಶಗಳಿಂದ, ಎಲ್ಲ ಬಗೆಯ ಜನರಿಂದ ಆರ್ಥಿಕ ನೆರವು, ಬೆಚ್ಚನೆಯ ಪ್ರೀತಿ, ವೈಜ್ಞಾನಿಕ ದೃಷ್ಟಿ, ಆಧುನಿಕ ಧೋರಣೆ ಬೇಕಾಗಿದೆ.”
ಮಾರ್ಚ್ 4, 1998

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...