Homeಮುಖಪುಟಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್...

ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್ ವಿವಾದ

ಖಟ್ಟರ್‌ಜಿ ಮತ್ತು ದುಶ್ಯಂತ್ ಚೌತಲಾ ಏಕೆ ಸುಮ್ಮನಿದ್ದೀರಿ? ಮೋದಿ ಜಿ ಮತ್ತು ನಾಡ್ಡಜಿ ಎಲ್ಲಿದ್ದೀರಿ? ಕ್ಷಮೆಯಾಚಿಸಿ, ಕ್ರಮ ತೆಗೆದುಕೊಳ್ಳಿ ಎಂದು ರಣದೀಪ್‌ ಸಿಂಗ್ ಆಗ್ರಹಿಸಿದ್ದಾರೆ.

- Advertisement -
- Advertisement -

“ಎಲ್ಲರಿಗೂ ಗೊತ್ತಿರುವಂತೆ ಬಂಗಾಳಿಗಳು ಅತಿ ಬುದ್ಧಿವಂತರು. ಪಂಜಾಬಿಗಳು ಮತ್ತು ಜಾಟ್‌ಗಳು ಕೇವಲ ದೈಹಿಕವಾಗಿ ಮಾತ್ರ ಶಕ್ತರು, ಅವರಿಗೆ ಮಿದುಳಿಲ್ಲ” ಎಂದು ತ್ರಿಪುರದ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಅಗರ್ತಲಾದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿನ ಪ್ರತಿಯೊಂದು ಸಮುದಾಯವೂ ಸಹ ತನ್ನದೇ ಆದ ವಿಶೇಷ ಲಕ್ಷಣಗಳನ್ನು ಹೊಂದಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಹೇಳಿಕೆಯಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

‘ಬುದ್ಧಿವಂತಿಕೆಯ ವಿಚಾರದಲ್ಲಿ ಬಂಗಾಳಿಗಳಿಗೆ ಯಾರೂ ಸಾಟಿಯಾಗಲಾರರು. ಎಲ್ಲರಿಗೂ ತಿಳಿದಿರುವಂತೆ ಬಂಗಾಳಿಗಳು ಅತೀ ಬುದ್ಧಿವಂತರು. ಇದೇ ಅವರ ಗುರುತಾಗಿದೆ, ಆದರೆ ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಸಮರ್ಥರು’ ಎಂದು ವೀಡಿಯೋದಲ್ಲಿ ಹೇಳಲಾಗಿದೆ.

ಸಾಮಾನ್ಯವಾಗಿ ಮಾತನಾಡುವಾಗ ಪಂಜಾಬ್‌ ಜನರನ್ನು ಪಂಜಾಬಿ, ಸರ್ದಾರ್ ಎಂದು ಹೇಳುತ್ತೇವೆ. ಅವರನ್ನು ದೈಹಿಕ ಸಾಮರ್ಥ್ಯದಿಂದ ಯಾರೊಬ್ಬರೂ ಗೆಲ್ಲಲಾಗುವುದಿಲ್ಲ. ಆದರೆ ಅವರು ಬುದ್ಧಿಹೀನರು. ಹರಿಯಾಣದಲ್ಲಿ ಜಾಟ್‌ಗಳು ಹೆಚ್ಚಾಗಿದ್ದಾರೆ. ಅಲ್ಲಿನ ಜನರು ಅವರ ಕುರಿತು ‘ಇವರು ದೈಹಿಕವಾಗಿ ಆರೋಗ್ಯವಂತರು. ಆದರೆ ಬುದ್ಧಿಹೀನರು’ ಎನ್ನುತ್ತಾರೆ. ಯಾರಾದರೂ ಜಾಟ್‌ರನ್ನು ಎದುರಿಸಬೇಕಾದರೆ ಅವರ ಮನೆಯಿಂದ ಗನ್ ತರಬೇಕಾಗುತ್ತದೆ ಎಂದು ಬಿಪ್ಲಬ್ ಹೇಳಿದ್ದಾರೆ.

ಬಿಪ್ಲಬ್‌ ದೇಬ್‌ರವರ ಈ ವಿವಾದಾತ್ಮಕ ಹೇಳಿಕೆಗೆ ಪ್ರಬಲ ವಿರೋಧ ವ್ಯಕ್ತವಾಗಿದೆ. ಈ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆ ನಾಚಿಕೆ ಮತ್ತು ದುರದೃಷ್ಟಕರವಾಗಿದೆ. ತ್ರಿಪುರದ ಬಿಜೆಪಿ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರು ಪಂಜಾಬ್‌ನ ಸಿಖ್ ಸಹೋದರರನ್ನು ಮತ್ತು ಹರಿಯಾಣದ ಜಾಟ್ ಸಮುದಾಯವನ್ನು ಅವಮಾನಿಸಿ, ಅವರನ್ನು ಬುದ್ದಿ ಇಲ್ಲದವರು ಎಂದು ಕರೆದಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯಾಗಿದೆ.

ಖಟ್ಟರ್‌ಜಿ ಮತ್ತು ದುಶ್ಯಂತ್ ಚೌತಲಾ ಏಕೆ ಸುಮ್ಮನಿದ್ದೀರಿ?
ಮೋದಿ ಜಿ ಮತ್ತು ನಾಡ್ಡಜಿ ಎಲ್ಲಿದ್ದೀರಿ?
ಕ್ಷಮೆಯಾಚಿಸಿ, ಕ್ರಮ ತೆಗೆದುಕೊಳ್ಳಿ ಎಂದು ರಣದೀಪ್‌ ಸಿಂಗ್ ಆಗ್ರಹಿಸಿದ್ದಾರೆ.

ಬಿಪ್ಲಬ್ ಕುಮಾರ್ ಈ ಹಿಂದೆಯೂ ‘ಮಹಾಭಾರತ ಕಾಲದಲ್ಲಿ ಉಪಗ್ರಹ ಮತ್ತು  ದೂರದರ್ಶನವಿತ್ತು ಎಂದು ಹೇಳಿಕೆ ನೀಡಿ ಇತ್ತೀಚೆಗೆ ವಿವಾದಕ್ಕೆ ಸಿಲುಕಿದ್ದರು.


ಇದನ್ನೂ ಓದಿ: ಕೊರೊನಾದಿಂದ ಒಂದೂ ಸಾವು ಕಾಣದ ಭಾರತದ ಅದೃಷ್ಠಶಾಲಿ ರಾಜ್ಯಗಳಿವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...