Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...