Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...