Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...