Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...