Homeಕರೋನಾ ತಲ್ಲಣಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

ಕಾಶ್ಮೀರ, ಅಸ್ಸಾಂನ ಎರಡು ಜೈಲುಗಳಲ್ಲಿ ಅರ್ಧದಷ್ಟು ಖೈದಿಗಳಿಗೆ ಕೊರೊನಾ ಸೋಂಕು!

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ.

- Advertisement -
- Advertisement -

ಕಳೆದ ವಾರ, ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲಾ ಜೈಲಿನಲ್ಲಿರುವ 86 ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರಲ್ಲಿ ಜೈಲಿಗೆ ಸಾಮಗ್ರಿಗಳನ್ನು ತರುವ ಜೈಲಿನ ಸಿಬ್ಬಂದಿ ಮತ್ತು ಒಬ್ಬ ಕಾರ್ಮಿಕ ಸೇರಿದ್ದಾರೆ ಎಂದು ಅನಂತ್‌ನಾಗ್ ಜೈಲಿನ ಅಧೀಕ್ಷಕ ಸಿರೋಜ್ ಅಹ್ಮದ್ ಭಟ್ ಹೇಳಿದ್ದಾರೆ.

60 ಖೈದಿಗಳನ್ನು ಇರಿಸುವ ಸಾಮರ್ಥ್ಯವಿರುವ ಕಾಶ್ಮೀರದ ಜೈಲಿನಲ್ಲಿ ಪ್ರಸ್ತುತ 193 ಖೈದಿಗಳು ಇದ್ದಾರೆ. ಅದರಲ್ಲಿ 86 ಖೈದಿಗಳಿಗೆ ಸೋಂಕು ದೃಢಪಟ್ಟಿದೆ. “ಅವರಲ್ಲಿ 48 ಜನರಿಗೆ ಬೇರೆ ಕಡೆ ಸೌಲಭ್ಯ ಒದಗಿಸಿ ಕ್ವಾರಂಟೈನ್ ಮಾಡಲಾಗಿದೆ. 38 ಜನರನ್ನು ಜೈಲಿನೊಳಗೆ ಕ್ವಾರಂಟೈನ್ ಮಾಡಲಾಗಿದೆ” ಎಂದು ಭಟ್ ಹೇಳಿದರು.

ಅಸ್ಸಾಂನ ಗೌಹಾಟಿಯ ಕೇಂದ್ರ ಕಾರಾಗೃಹದಲ್ಲಿರುವ, ಡಿಸೆಂಬರ್‌ನಲ್ಲಿ ನಡೆದ ಸಿಎಎ ಕಾಯ್ದೆ ವಿರೋಧಿ ಪ್ರತಿಭಟನೆಗಾಗಿ ಬಂಧಿಸಲ್ಪಟ್ಟ ಕಾರ್ಯಕರ್ತರಲ್ಲಿ ಒಬ್ಬರಾದ ರೈತ ಮುಖಂಡ ಅಖಿಲ್ ಗೊಗೊಯ್ ಅವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಈ ವಾರಾಂತ್ಯದಲ್ಲಿ ಗುವಾಹಟಿ ಕೇಂದ್ರ ಕಾರಾಗೃಹದಲ್ಲಿರುವ ಕೊರೊನಾ ಸೋಂಕಿತರ ಸಂಖ್ಯೆ 438 ಕ್ಕೆ ಏರಿತು. ಅವರಲ್ಲಿ ಮೂವರು ಜೈಲು ಸಿಬ್ಬಂದಿ ಎಂದು ಅಸ್ಸಾಂನ ಜೈಲುಗಳ ಇನ್ಸ್‌ಪೆಕ್ಟರ್ ಜನರಲ್ ದಶರಥ್ ದಾಸ್ ಹೇಳಿದ್ದಾರೆ. ಜೈಲಿನಲ್ಲಿ ಸುಮಾರು 1,000 ಖೈದಿಗಳು ಇದ್ದಾರೆ. ಅವರಲ್ಲಿ ಸುಮಾರು 43% ರಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ಎಲ್ಲಾ ಖೈದಿಗಳನ್ನು ಪರೀಕ್ಷಿಸಲಾಯಿತು ಎಂದು ದಾಸ್ ಹೇಳಿದರು.

ಸೋಂಕಿತರಲ್ಲಿ, 154 ಖೈದಿಗಳು ಪ್ರಸ್ತುತ ನಗರದ ಮತ್ತು ಸುತ್ತಮುತ್ತಲಿನ ವಿವಿಧ ವೈದ್ಯಕೀಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಉಳಿದವರು ಚೇತರಿಸಿಕೊಂಡು ಮತ್ತೆ ಜೈಲಿಗೆ ಮರಳಿದ್ದಾರೆ” ಎಂದು ದಾಸ್ ಹೇಳಿದರು.

ಗುವಾಹಟಿ ಮತ್ತು ದಕ್ಷಿಣ ಕಾಶ್ಮೀರ ಜೈಲುಗಳು, ದೇಶದ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ ಕೆಲವು ಪ್ರಕರಣಗಳಲ್ಲಿನ ಖೈದಿಗಳನ್ನು ಇರಿಸಿಕೊಂಡಿವೆ. ಅವರಲ್ಲಿ ಹಲವರು ರಾಜ್ಯದ ವಿರುದ್ಧದ ಅಪರಾಧದ ಆರೋಪಗಳನ್ನು ಹೊಂದಿದ್ದಾರೆ. ಸಾಂಕ್ರಾಮಿಕ ರೋಗವು ದೇಶವನ್ನು ಅಪ್ಪಳಿಸುತ್ತಿದ್ದಂತೆ ಭಾರತದಾದ್ಯಂತ ಜೈಲುಗಳು ಭಾಗಶಃ ಖಾಲಿಯಾಗಿದ್ದರೂ, ಇಲ್ಲಿನ ಖೈದಿಗಳಿಗೆ ಈ ಭಾಗ್ಯ ದೊರಕಿಲ್ಲ.

ಕೊರೊನಾ ಸೋಂಕು ಭಾರತದ ಕಿಕ್ಕಿರಿದ, ಆರೋಗ್ಯಕರವಲ್ಲದ ಕಾರಾಗೃಹಗಳನ್ನು ತಲುಪಿದ ನಂತರ, ಖೈದಿಗಳಲ್ಲಿ ಕಾಡ್ಗಿಚ್ಚಿನಂತೆ ಹರಡುವ ವೈರಸ್ ಅನ್ನು ತಡೆಯುವುದು ಕಷ್ಟಕರವಾಗಿತ್ತು. ಇದಕ್ಕೆ ಹೆದರಿ ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್‌ನಲ್ಲಿ ಜೈಲುಗಳನ್ನು ಆದಷ್ಟು ಖಾಲಿ ಮಾಡುವಂತೆ ಆದೇಶಿಸಿತ್ತು.

ಅಂದಿನಿಂದ, ಜೂನ್ 20ರ ವೇಳೆಗೆ ದೆಹಲಿಯ ಮೂರು ಜೈಲುಗಳಿಂದ 4,129 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೂನ್ 26ರ ಹೊತ್ತಿಗೆ 18,000 ಖೈದಿಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಉತ್ತರ ಪ್ರದೇಶ ಹೇಳಿಕೊಂಡಿದೆ.

ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಅಸ್ಸಾಂ 3,550 ಖೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಮೇ ತಿಂಗಳಿನಲ್ಲಿ ವರದಿಯಾಗಿದೆ. ಇದರಲ್ಲಿ ಅಸ್ಸಾಂನ ವಿದೇಶಿ ನ್ಯಾಯಮಂಡಳಿಗಳು, ಅರೆ-ನ್ಯಾಯಾಂಗ ಸಂಸ್ಥೆಗಳು ಘೋಷಿಸಿದ ವಿದೇಶಿಯರ ಬಂಧನ ಕೇಂದ್ರಗಳಲ್ಲಿ ದಾಖಲಾದ 300 ಜನರನ್ನು ಒಳಗೊಂಡಿದೆ.

ಏಪ್ರಿಲ್ 23 ರ ಹೊತ್ತಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಕನಿಷ್ಠ 288 ಖೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಅನೇಕರ ಬಂಧನ ಆದೇಶಗಳನ್ನು ಈಗ ಸರ್ಕಾರ ರದ್ದುಪಡಿಸಿದೆ. ಅದರಲ್ಲಿ ಪೆರೋಲ್ ಅಥವಾ ಬಿಡುಗಡೆಗೆ ಅರ್ಹರಲ್ಲದವರಲ್ಲಿ ಉಗ್ರಗಾಮಿತ್ವ ಸಂಬಂಧಿತ ಆರೋಪಗಳ ಮೇಲೆ ಅಥವಾ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಬಂಧಿತ ಖೈದಿಗಳು ಸೇರಿದ್ದಾರೆ.

ಕಿಕ್ಕಿರಿದ ಜೈಲುಗಳಲ್ಲಿ ಉಳಿದವರು ಸೋಂಕಿನ ತೀವ್ರತೆಯನ್ನು ಎದುರಿಸಬೇಕಾಗಿದೆ.

ಕಾಶ್ಮೀರದ ಕಿಕ್ಕಿರಿದ ಜೈಲುಗಳು

“ನಾವು ಮಾರ್ಚ್‌ನಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು ಜೈಲು ಅಧೀಕ್ಷಕ ಸಿರೋಜ್ ಭಟ್ ಹೇಳಿದ್ದಾರೆ. “ಜಮ್ಮು ಕಾಶ್ಮೀರದಲ್ಲಿಯೇ ಮೊದಲಿಗೆ ಅನಂತ್ ನಾಗ್ ಜಿಲ್ಲಾ ಜೈಲು ಕೊರೊನಾ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಿತು. ಅದರ ನಂತರ ನಾವು ನಿಯಮಿತವಾಗಿ ಜೈಲು ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸುವುದನ್ನು ಮುಂದುವರಿಸಿದ್ದೇವೆ” ಎಂದಿದ್ದಾರೆ.

ಸೋಂಕು ಹರಡುವುದನ್ನು ತಡೆಗಟ್ಟಲು ಜೈಲು ಸಂದರ್ಶಕರಿಗೆ ಮತ್ತು ಕೈದಿಗಳಿಗೆ ಮನೆಯಲ್ಲಿ ಬೇಯಿಸಿದ ಆಹಾರ ನೀಡುವುದನ್ನು ನಿರ್ಬಂಧಿಸಲಾಯಿತು ಎಂದು ಅವರು ಹೇಳಿದರು. “ಆದರೆ ಜೈಲು ಕಿಕ್ಕಿರಿದ ಕಾರಣ ಸಾಮಾಜಿಕ ಅಂತರ ಸಾಧ್ಯವಾಗಲಿಲ್ಲ” ಎಂದು ಅವರು ಒಪ್ಪಿಕೊಂಡರು.

ಗುವಾಹಟಿ ಕೇಂದ್ರ ಕಾರಾಗೃಹದಲ್ಲಿ, ಜೂನ್ 4 ರಂದು ಮೊದಲ ಪ್ರಕರಣ ಪತ್ತೆಯಾಗಿದೆ ಮತ್ತು ಜೈಲನ್ನು ತಕ್ಷಣವೇ ನಿಯಂತ್ರಣ ವಲಯವೆಂದು ಘೋಷಿಸಲಾಗಿದೆ ಎಂದು ದಾಸ್ ಹೇಳಿದರು.

“ಸೋಂಕಿತ ವ್ಯಕ್ತಿಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದಲ್ಲಿದ್ದ ಪ್ರತಿಯೊಬ್ಬರ ಸ್ವ್ಯಾಬ್ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಪರೀಕ್ಷಾ ಫಲಿತಾಂಶಗಳನ್ನು ಘೋಷಿಸುವವರೆಗೆ ಅವರೆಲ್ಲರನ್ನೂ ಪ್ರತ್ಯೇಕವಾಗಿ ಇಡಲಾಗಿದೆ” ಎಂದು ದಾಸ್ ಹೇಳಿದರು. ಎಲ್ಲಾ ಸಂಪರ್ಕಿತರಿಗೂ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದರು.

14 ದಿನಗಳ ನಂತರ ಜೈಲಿನ ನಿಯಂತ್ರಣ ವಲಯದ ಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಗುತ್ತಿದ್ದಂತೆ, ಹಲವಾರು ಹೊಸ ಖೈದಿಗಳನ್ನು ಕೊರೊನಾ ಚಿಕಿತ್ಸೆಗೆ ದಾಖಲಿಸಲಾಯಿತು. “ಸೋಂಕು ಹೊಸ ಖೈದಿಗಳಲ್ಲೇ ಹೆಚ್ಚಾಗಿರಬಹುದು” ಎಂದು ದಾಸ್ ಹೇಳಿದರು.


ಇದನ್ನೂ ಓದಿ: ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...