Homeಮುಖಪುಟಫ್ಯಾಕ್ಟ್‌ಚೆಕ್‌: ದೆಹಲಿಯ ರಘುಬೀರ್ ನಗರದ ಪ್ರಕರಣ ಕೋಮು ದ್ವೇಷವೇ?

ಫ್ಯಾಕ್ಟ್‌ಚೆಕ್‌: ದೆಹಲಿಯ ರಘುಬೀರ್ ನಗರದ ಪ್ರಕರಣ ಕೋಮು ದ್ವೇಷವೇ?

ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಅಮಿತ್ ದೀಕ್ಷಿತ್ ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಟ್ವೀಟ್ ಲೇಖನವನ್ನು ಪ್ರಕಟಿಸುವ ಸಮಯದಲ್ಲಿ 3,600 ರಿಟ್ವೀಟ್ ಗಳಿಸಿದೆ.

- Advertisement -
- Advertisement -

ಪಶ್ಚಿಮ ದೆಹಲಿಯ ರಘುಬೀರ್ ನಗರದಲ್ಲಿ ಇಬ್ಬರು ಹುಡುಗರು ಒಬ್ಬ ವ್ಯಕ್ತಿಯನ್ನು ಇರಿದಿದ್ದಾರೆ ಎಂದು ತೋರಿಸುವ ವಿಡಿಯೋ ವೈರಲ್ ಆಗಿದೆ. ಈ ಪ್ರಕರಣದ ಆರೋಪಿ ಬಾಲಾಪರಾಧಿಗಳು, ಮುಸ್ಲಿಮರು ಎಂಬ ಕೋಮು ಸಾಮರಸ್ಯವನ್ನು ಹಾಳುಗೆಡಹುವ ಸುಳ್ಳು ಹೇಳಿಕೆಯೊಂದಿಗೆ ವೈರಲ್ ಆಗಿದೆ.

ಆದರೆ ದಿ ಕ್ವಿಂಟ್ ಜೊತೆ ಮಾತನಾಡಿದ ದೆಹಲಿ ಪೊಲೀಸ್ ಹೆಚ್ಚುವರಿ ಪಿ ಆರ್ ಒ ಅನಿಲ್ ಮಿತ್ತಲ್ ಈ ಘಟನೆಗೆ, ಕೋಮು ದ್ವೇಷವನ್ನು ಹೆಣೆಯಲಾಗುತ್ತಿದೆ. ಆರೋಪಿ ಮತ್ತು ಬಲಿಪಶು ಒಂದೇ ಸಮುದಾಯಕ್ಕೆ ಸೇರಿದವರು ಎಂದು ದೃಢಪಡಿಸಿದ್ದಾರೆ.

ವೈರಲ್ ವೀಡಿಯೋದಲ್ಲಿ “ದೆಹಲಿಯ ಮಡಿಪುರದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮೂವರು ಬಾಲಾಪರಾಧಿ ಜಿಹಾದಿಗಳು ಒಬ್ಬ ವ್ಯಕ್ತಿಯನ್ನು ಇರಿದು ಕೊಂದಿದ್ದಾರೆ. ಜಾತಿವಾದದಿಂದಾಗಿ ನಾವು ಸಾಯುತ್ತಿದ್ದೇವೆ, ಅಲ್ಲಿ ಈ ‘ಶಾಂತಿ ಧೂತರು’ ಉತ್ತಮ ತರಬೇತಿ ಪಡೆಯುತ್ತಿದ್ದಾರೆ” ಎಂದು ಬರೆಯಲಾಗಿದೆ.

ಬಿಜೆಪಿ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಅಮಿತ್ ದೀಕ್ಷಿತ್ ಇದೇ ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಟ್ವೀಟ್ ಲೇಖನವನ್ನು ಪ್ರಕಟಿಸುವ ಸಮಯದಲ್ಲಿ 3,600 ರಿಟ್ವೀಟ್ ಗಳಿಸಿದೆ.

ಹಲವಾರು ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಆದರೆ ಇಲ್ಲಿ ಆರೋಪಿಗಳು ಮತ್ತು ಸಂತ್ರಸ್ತ್ರ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮುದ್ವೇಷ ಹರಡಬಾರದು ಎಂದು ಎಚ್ಚರಿಕೆ ಸಹ ನೀಡಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಬಿಜೆಪಿ ಧ್ವಜವನ್ನು ಬ್ರಾಹ್ಮಣರು ಸುಟ್ಟು ಹಾಕಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಫ್ಯಾಕ್ಟ ಚೆಕ್ ನಲ್ಲಿ ಬರುವ ಸುದ್ದಿಗಳು ಪ್ರಸ್ತುತ ಈಗಿನ ಘಟನೆಗಳಲ್ಲ, ಬಹಳ ಹಿಂದೆ ನಡೆದಿರುವ ಬೇರೆ ಬೇರೆ ಘಟನೆಗಳಿಗೆ ಸಂಬಂಧ ಪಟ್ಟಿದ್ದು ಎಂದು ತಿಳಿದಾಗ್ಯು ಏಕೆ ಈ ತಪ್ಪು ವಿಷಯ ಹರಡಿದವರ ಮೇಲೆ ಕ್ರಮ ಜರುಗಿಸುವುದಿಲ್ಲ. ಕೆಲವೊಮ್ಮೆ ಕೊಮುಸೌಹಾರ್ದತೆಯನ್ನು ಕೆಡಿಸುವ ಉದ್ಧೆಶದಿಂದಲೂ ಇಂತಹ ಕಾರ್ಯಗಳೂ ನಡೆಯುತ್ತವೆ ಅನಿಸುತ್ತದೆ.
    ಒಂದು ವೇಳೆ ಫ್ಯಾಕ್ಟ ಚೆಕ್ ಇಲ್ಲದೇ ಇದ್ದ ಪಕ್ಷದಲ್ಲಿ ಸಾಮಾನ್ಯರು ಜನರು ಅದನ್ನೇ ನಿಜವೆಂದು ನಂಬುವುದಿಲ್ಲವೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...