Homeಮುಖಪುಟದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದ ದೂರುಗಳಲ್ಲಿ ದೆಹಲಿ ಪೊಲೀಸರು ಬಿಜೆಪಿ ನಾಯಕರ ವಿರುದ್ದ ಆರೋಪಗಳಿರುವ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ತನಿಖಾ ವರದಿ ಮಾಡಿದೆ.

ಬಿಜೆಪಿ ನಾಯಕರು ಜನರನ್ನು ಉದ್ರೇಕಗೊಳಿಸಿದ್ದಾರೆ ಹಾಗೂ ಗಲಭೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ದೂರುಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಅದು ಹೇಳಿದೆ.

ಈ ದೂರಿನಲ್ಲಿ ಆರೋಪಿಗಳಾಗಿ ಬಿಜೆಪಿಯ ನಾಯಕರು, ಶಾಸಕರು, ಕೌನ್ಸಿಲರ್ ಮತ್ತು ಬಿಜೆಪಿಯ ಸಂಸದರು ಇದ್ದಾರೆ. ಬಿಜೆಪಿ ಮುಖಂಡ ಕಪಿಲ್ ಮಿಶ್ರಾ, ಕರಾವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಬಾಗಪತ್ ಸಂಸದ ಸತ್ಯ ಪಾಲ್ ಸಿಂಗ್ ಮತ್ತು ಜೋಹ್ರಿಪುರ್ ಕನ್ಹಯ್ಯ ಲಾಲ್ ಮುಂತಾದವರ ಹೆಸರುಗಳನ್ನು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ನಡೆದ ಈ ಗಲಭೆಯಿಂದ ಸುಮಾರು 50 ಜನರು ಸಾವನ್ನಪ್ಪಿದರು. ಹತ್ಯೆಯಾದವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು ಅನೇಕರು ಗಾಯಗೊಂಡಿದ್ದರು. ನೂರಾರು ಮನೆಗಳು ಮತ್ತು ಅಂಗಡಿಗಳು ನಾಶವಾದವು.

ಗಲಭೆ ನಡೆದು 100 ದಿನ ಕಳೆದರೂ ಕನಿಷ್ಠ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಅವುಗಳಲ್ಲಿ ಒಂದು ದೂರನ್ನು ಕಪಿಲ್ ಮಿಶ್ರಾ ವಿರುದ್ದ ಫೆಬ್ರವರಿ 24 ರಂದು ಮೊಹಮ್ಮದ್ ಜಾಮಿ ರಿಜ್ವಿ ಸಲ್ಲಿಸಿದ್ದರು.

ಫೆಬ್ರವರಿ 23 ರಂದು ಕಪಿಲ್ ಮಿಶ್ರಾ ಈಶಾನ್ಯ ದೆಹಲಿಯ ಕಾರ್ಡಂಪೂರಿಯ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರದೇಶಕ್ಕೆ ಬಂದಿದ್ದರು. ಬಂದೂಕುಗಳು, ಕತ್ತಿಗಳು, ತ್ರಿಶೂಲಗಳು, ಕೋಲುಗಳು, ಕಲ್ಲುಗಳು, ಬಾಟಲಿಗಳು ಇತ್ಯಾದಿಗಳನ್ನು ಹೊತ್ತ ಜನರು ಅವರೊಂದಿಗೆ ಇದ್ದರು ಎಂದು ಈ ದೂರು ಹೇಳಿದೆ.

“ಪ್ರತಿಭಟನಾಕಾರರಿಗೆ ಈಗ ಪಾಠ ಕಲಿಸಬೇಕಾಗುತ್ತದೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅವರ ಬೆಂಬಲಿಗರು ಕಾರುಗಳನ್ನು ನಿಲ್ಲಿಸಿ, ಮುಸ್ಲಿಮರನ್ನು ಮತ್ತು ಪರಿಶಿಷ್ಟ ಜಾತಿಯ ಜನರನ್ನು ಗುರುತಿಸಿ ಅವರ ಮೇಲೆ ಹಲ್ಲೆ ಹಾಗೂ ಕಾರುಗಳಿಗೆ ಪೊಲೀಸರ ಸಮ್ಮುಖದಲ್ಲೇ ಹಾನಿ ಮಾಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 17 ರಂದು ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ ಮತ್ತೊಂದು ದೂರಿನಲ್ಲಿ ಕಪಿಲ್ ಮಿಶ್ರಾ ಮತ್ತು ಅವರ ಸಹಚರರು ಫೆಬ್ರವರಿ 23 ರಂದು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಈ ದೂರಿನಲ್ಲಿ ಬಜೆಪಿ ಸಂಸದ ಹಾಗೂ ಪೊಲೀಸರನ್ನು ಕೂಡಾ ಉಲ್ಲೇಖಿಸಿದ್ದಾರೆ.

ಮೂರನೇ ದೂರು ಮಾರ್ಚ್ 19 ರಂದು ರೂಬಿನಾ ಬಾನೊ ನೀಡಿದರಲ್ಲಿ ಕೂಡಾ ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಚುನಾವಣೆಯ ಸಮಯದಲ್ಲಿ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್ ಚಾಂದ್ ಬಾಗ್‌ನ ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು, ಅವರೊಂದಿಗೆ ಭಾರಿ ಶಸ್ತ್ರಸಜ್ಜಿತ ಜನರು ಇದ್ದರು ಎಂದು ಅವರು ಆರೋಪಿಸಿದ್ದಾರೆ.

ಇತರ ನಾಲ್ಕು ಪ್ರಕರಣಗಳಲ್ಲಿ ಅವರ ದೂರನ್ನು ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ ಎಂದು ದೂರುದಾರರಿಗೆ ತಿಳಿಸಲಾಯಿತು. ಈ ದೂರುಗಳು ಕಪಿಲ್ ಮಿಶ್ರಾ, ಮಾಜಿ ಮುಸ್ತಾಬಾದ್ ಶಾಸಕ ಜಗದೀಶ್ ಪ್ರಧಾನ್ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸಂಬಂಧಿಸಿದೆ.

ಕಪಿಲ್ ಮಿಶ್ರಾ ಅವರ ಗೂಂಡಾಗಳು ತಮ್ಮ ಅಂಗಡಿಯನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜಕೀರ್ ಮಲಿಕ್ ಫೆಬ್ರವರಿ 25 ರಂದು ದೂರು ನೀಡಿದ್ದರು. “ಕಪಿಲ್ ಮಿಶ್ರಾ ಲೂಟಿ ಮಾಡುವಲ್ಲಿ ಭಾಗಿಯಾಗಿದ್ದಾನೆ” ಎಂದು ದೂರಿನಲ್ಲಿ ನಿರ್ದಿಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ದೂರನ್ನು ಇನ್ನೊಂದು ಅಂಗಡಿ ಲೂಟಿಗೆ ಸಂಬಂಧಿಸಿ ಕಪಿಲ್ ಮಿಶ್ರಾ ಹೆಸರಿರದ ಮತ್ತೊಂದು ಎಫ್‌ಐಆರ್‌ಗೆ ಲಗತ್ತಿಸಲಾಗಿದೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಫೆಬ್ರವರಿ 24 ರಂದು ಮುಖೇಶ್ ಎಂಬ ವ್ಯಕ್ತಿಯೊಂದಿಗೆ ಪ್ರಚೋದನಕಾರಿ ಭಾಷಣಗಳು ಮಾಡಿದ್ದನ್ನು ನೋಡಿದ್ದಾಗಿ ಆರೋಪಿಸಿ ನಿಸಾರ್ ಅಹ್ಮದ್ ಮಾರ್ಚ್ 19 ರಂದು ದೂರು ದಾಖಲಿಸಿದ್ದರು.

ನಿಸಾರ್ ಅಹ್ಮದ್ ಅವರ ದೂರನ್ನು ಸಹ ಮತ್ತೊಂದು ಎಫ್ಐಆರ್‌ಗೆ ಲಗತ್ತಿಸಲಾಗಿದೆ, ಅದಲ್ಲಿ ಯಾರ ಹೆಸರನ್ನು ಕೂಡಾ ಉಲ್ಲೇಖಿಸಲಾಗಿಲ್ಲ.

ಈ ಕುರಿತು ಕಪಿಲ್ ಮಿಶ್ರಾ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಎನ್‌ಡಿಟಿವಿ ಹೇಳಿದೆ.

ಜಗದೀಶ್ ಪ್ರಧಾನ್, ಮೋಹನ್ ಸಿಂಗ್ ಬಿಶ್ತ್, ಕನ್ಹಯ್ಯ ಲಾಲ್ ಮತ್ತು ಸತ್ಯಪಾಲ್ ಸಿಂಗ್ ಮುಂತಾದವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆಂದು ಅದು ಹೇಳಿದೆ.


ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...