Homeಕರೋನಾ ತಲ್ಲಣಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

ಕೊರೊನಾ ಸೋಂಕಿತರ ಪ್ರಮಾಣವನ್ನು 5% ಕ್ಕೆ ಇಳಿಸುವುದೇ ಅಂತಿಮ ಗುರಿ: ಆರೋಗ್ಯ ಸಚಿವಾಲಯ

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣವನ್ನು ಶೇಕಡಾ 5 ಕ್ಕೆ ಇಳಿಸುವುದು ಮತ್ತು ಸೋಂಕು ಪರೀಕ್ಷಾ ಮಟ್ಟವನ್ನು ಕಾಯ್ದುಕೊಳ್ಳುವುದು ಸರ್ಕಾರದ “ಅಂತಿಮ ಗುರಿ” ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಅಂಕಿಗಳನ್ನು ಹೊಂದಿವೆ ಎಂದು ಅದು ಹೇಳಿದೆ.

ಪರೀಕ್ಷಿಸಿದವರಲ್ಲಿ ಶೇಕಡಾವಾರು ಸೋಂಕಿಗೆ ಒಳಗಾದವರ ರಾಷ್ಟ್ರೀಯ ಸಕಾರಾತ್ಮಕ ದರವು ಮಂಗಳವಾರ ಬೆಳಿಗ್ಗೆ ಶೇಕಡಾ 11.14 ರಷ್ಟಿತ್ತು. ಇದು ವಾರದ ಹಿಂದೆ ಶೇ 10 ಇತ್ತ. ಎರಡು ವಾರಗಳ ಹಿಂದೆ ಶೇ 9.7 ಮತ್ತು ನಾಲ್ಕು ವಾರಗಳ ಹಿಂದಿನ ಪ್ರಮಾಣ ಶೇಕಡಾ 8 ಇತ್ತು. ಏಪ್ರಿಲ್ 23 ರಿಂದ ಒಟ್ಟಾರೆ ಸರಾಸರಿ ಶೇಕಡ 8 ಇದೆ ಎಂದು ಸಚಿವಾಲಯ ತಿಳಿಸಿದೆ.

ಮಂಗಳವಾರ ಬೆಳಿಗ್ಗೆಯ ವೇಳೆಗೆ ಕಳೆದ 24 ಗಂಟೆಗಳಲ್ಲಿ 3.34 ಲಕ್ಷ ಕೊರೊನಾವೈರಸ್ ಪರೀಕ್ಷೆಗಳನ್ನು ನಡೆಸಲಾಯಿತು. ಇದು ವಾರದ ಹಿಂದೆ 2.87, ಎರಡು ವಾರಗಳ ಹಿಂದೆ 2.41 ಮತ್ತು ನಾಲ್ಕು ವಾರಗಳ ಹಿಂದೆ 1.87 ಇತ್ತು ಎಂದು ಹೇಳಿದೆ.

ಪರೀಕ್ಷೆಯ ಮಟ್ಟ ಹೆಚ್ಚಿದ್ದರಿಂದ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 37,148 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಮಂಗಳವಾರ ಬೆಳಿಗ್ಗೆ ಸರ್ಕಾರ ಹೇಳಿದೆ; ಅದಕ್ಕೂ ಮೊದಲು 24 ಗಂಟೆಗಳಲ್ಲಿ 40,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಭಾರತದಲ್ಲಿ ಇದುವರೆಗೆ 11.55 ಲಕ್ಷ ಕೊರೊನಾ ಪ್ರಕರಣಗಳಿದ್ದು, 28,084 ಸಾವುಗಳು ಸಂಭವಿಸಿವೆ. ಭಾರತವು ಏಳು ಲಕ್ಷ ಗಡಿ ದಾಟಿದ ಜುಲೈ 6 ರಿಂದ ಒಟ್ಟು ಪ್ರಕರಣಗಳ ಸಂಖ್ಯೆ 4.5 ಲಕ್ಷಕ್ಕೂ ಹೆಚ್ಚಾಗಿದೆ.

“ದೇಶವು ಕೊರೊನಾ ಬಿಕ್ಕಟ್ಟನ್ನು ತುಲನಾತ್ಮಕವಾಗಿ, ಚೆನ್ನಾಗಿ ನಿಭಾಯಿಸಿದೆ. ಕೇಂದ್ರವು ರಾಜ್ಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ತಂಡಗಳು ರಾಜ್ಯಗಳಿಗೆ ಸಲಹೆ ನೀಡುತ್ತಿವೆ ಮತ್ತು ಅವರ ಪ್ರಯತ್ನಗಳನ್ನು ಬೆಂಬಲಿಸಲು ಅವರನ್ನು ಭೇಟಿ ಮಾಡುತ್ತಿವೆ” ಎಂದು ಸರ್ಕಾರ ಇಂದು ಹೇಳಿದೆ.

“ಸೀಮಿತ ಸಂಪನ್ಮೂಲಗಳ ಹೊರತಾಗಿಯೂ ನಾವು ಸಾವಿನ ಪ್ರಮಾಣವನ್ನು ಶೇಕಡಾ 2.43 ಕ್ಕೆ ತಂದಿದ್ದೇವೆ” ಎಂದು ಸರ್ಕಾರ ಹೇಳಿದೆ. ಈ ಹಿರಿಮೆಯು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲುಪುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಮರಣ ಪ್ರಮಾಣ – ಅಥವಾ ಒಟ್ಟು ಪ್ರಕರಣಗಳಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಭಾರತದಲ್ಲಿ ವಿಶ್ವಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಸಚಿವಾಲಯ ಹೇಳಿದೆ.

ಕಳೆದ ನಾಲ್ಕು ವಾರಗಳಲ್ಲಿ ಪ್ರಕರಣಗಳ ಸಾವಿನ ಪ್ರಮಾಣ ಕಡಿಮೆಯಾಗಿದೆ; ಎರಡು ವಾರಗಳ ಹಿಂದೆ ಅದು ಶೇಕಡಾ 2.8 ಕ್ಕೆ ಇಳಿಯುವ ಮೊದಲು ಅದು ಶೇಕಡಾ 3.2 ರಷ್ಟಿತ್ತು. ಕಳೆದ ವಾರ ಅದು ಶೇಕಡಾ 2.6 ರಷ್ಟಿತ್ತು ಎಂದು ತಿಳಿಸಿದೆ.


ಇದನ್ನೂ ಓದಿ: ಹಳ್ಳಿಗೆ ಬಿಟ್ಟುಕೊಳ್ಳದ ಗ್ರಾಮಸ್ಥರು: ಮರದ ಕೆಳಗೆ ವಾಸಿಸುತ್ತಿರುವ ಕೊರೊನಾ ಸೋಂಕಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...