Homeಕರೋನಾ ತಲ್ಲಣಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

- Advertisement -
- Advertisement -

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಪ್ರಯೋಗ ನಡೆಸಲು ಭಾರತೀಯ ನಿಯಂತ್ರಕರಿಗೆ ಮುಂದಿನ ಒಂದು ವಾರದೊಳಗೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿಸಿದೆ.

ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಲಸಿಕೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ್ಲಾ, “ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ತೋರಿಸಿವೆ ಮತ್ತು ಅದರ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ. ನಾವು ಭಾರತೀಯ ನಿಯಂತ್ರಕರಿಗೆ ಪರವಾನಗಿ ಪ್ರಯೋಗಗಳಿಗೆ ವಾರಗಳೊಳಗೆ ಅರ್ಜಿ ಸಲ್ಲಿಸುತ್ತೇವೆ. ಅವರು ನಮಗೆ ಅನುಮತಿ ನೀಡಿದ ಕೂಡಲೇ, ನಾವು ಭಾರತದಲ್ಲಿ ಲಸಿಕೆಗಾಗಿ ಪ್ರಯೋಗಗಳನ್ನು ಪ್ರಾರಂಭಿಸುತ್ತೇವೆ. ಇದಲ್ಲದೆ, ಶೀಘ್ರದಲ್ಲೇ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ಪ್ರಾರಂಭಿಸುತ್ತೇವೆ.” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

ವರ್ಷಾಂತ್ಯಕ್ಕೆ ಲಸಿಕೆ ಸಿದ್ಧವಾಗಬಹುದು ಎಂದು ಸಂಶೋಧಕರು ಸೂಚಿಸುತ್ತಿದ್ದಾರೆ. ಚುಚ್ಚುಮದ್ದಿನಿಂದ ಶೇಕಡಾ 91 ಕ್ಕಿಂತ ಹೆಚ್ಚು ಸ್ವಯಂಸೇವಕರು ಕೊರೊನಾ ವೈರಸ್ ವಿರುದ್ಧ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದ್ದಾರೆ ಎಂದು ಫಲಿತಾಂಶಗಳು ತೋರಿಸಿದವು.

ಈ ಪ್ರಯೋಗವು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ನಡೆಯಿತು. ಪ್ರತಿರಕ್ಷಣಾ (ಇಮ್ಯೂನಿಟೆ) ಪ್ರತಿಕ್ರಿಯೆಗಳು ಕನಿಷ್ಠ 56 ದಿನಗಳವರೆಗೆ ಪ್ರಬಲವಾಗಿದ್ದವು ಎಂದಿದ್ದಾರೆ.

AZD1222 ಎಂದು ಕರೆಯಲ್ಪಡುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆಯನ್ನು ಪ್ರಮುಖ ಔಷಧೀಯ ಸಂಸ್ಥೆ ಅಸ್ಟ್ರಾಜೆನೆಕಾ ತಯಾರಿಸುತ್ತಿದೆ. ಯುಕೆ ಸರ್ಕಾರವು ಈಗಾಗಲೇ 100 ಮಿಲಿಯನ್ ಡೋಸ್‌ಗಳನ್ನು ಆದೇಶಿಸಿದೆ.

ಫಲಿತಾಂಶಗಳ ಪ್ರಕಾರ, ಲಸಿಕೆಯು ಟಿ ಸೆಲ್ ಮತ್ತು ಆಂಟಿಬಾಡಿ ಇಮ್ಯುನಿಟಿಯನ್ನು ಹೆಚ್ಚಿಸಿದೆ. ಈ ಎರಡೂ ವಿಷಯದಲ್ಲಿ ಲಸಿಕೆಯು ಹೆಚ್ಚಿನ ಪ್ರತಿಕ್ರಿಯೆ ನೀಡಿದೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಟಿ ಕೋಶಗಳ ಇಮ್ಯೂನಿಟಿಯು ಎರಡು ವಾರಗಳ ನಂತರ ಉತ್ತುಂಗಕ್ಕೇರಿತು ನಂತರ 56 ನೇ ದಿನಕ್ಕೆ ಸ್ವಲ್ಪ ಇಳಿಯಿತು ಎಂದು ಅಧ್ಯಯವು ಹೇಳಿದೆ.

ಮತ್ತೊಂದೆಡೆ, ಆಂಟಿಬಾಡಿ ಇಮ್ಯೂನಿಟಿಯು ನಾಲ್ಕು ವಾರಗಳ ನಂತರ ಉತ್ತುಂಗಕ್ಕೇರಿತು ಹಾಗೂ 56 ನೇ ದಿನಗಳವರೆಗೆ ಉಳಿಯಿತು ಎಂದು ಅಧ್ಯಯನ ಹೇಳಿದೆ. ಇದು ಇನ್ನೂ ಹೆಚ್ಚು ಕಾಲ ಉಳಿಯಬಹುದು ಎಂದು ಅದು ಸೂಚಿಸುತ್ತದೆ.


ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...