Homeಮುಖಪುಟಬಂಗಾಳವನ್ನು ಗುಜರಾತಿಗರು ಮುನ್ನಡೆಸಲು ಬಿಡುವುದಿಲ್ಲ: ಮಮತ ಬ್ಯಾನರ್ಜಿ

ಬಂಗಾಳವನ್ನು ಗುಜರಾತಿಗರು ಮುನ್ನಡೆಸಲು ಬಿಡುವುದಿಲ್ಲ: ಮಮತ ಬ್ಯಾನರ್ಜಿ

ಜನರಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಬಿಜೆಪಿಯಂತ ವಿನಾಶಕಾರಿ ಪಕ್ಷ ದೇಶದಲ್ಲಿ ಎಂದೂ ನೋಡಿಲ್ಲ ಎಂದು ಟೀಕಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ರಾಜ್ಯವನ್ನು ಸ್ಥಳೀಯರು ಮುನ್ನಡೆಸಬೇಕೇ ಹೊರತು ಹೊರಗಿನವರಲ್ಲ ಅಥವಾ ಗುಜರಾಜ್ ಜನರಲ್ಲ ಎಂದು ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಕ್ಷದ ಹುತಾತ್ಮರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಪಶ್ಚಿಮ ಬಂಗಾಳದ ಸಂಪನ್ಮೂಲವನ್ನು ಕೇಂದ್ರ ಸರ್ಕಾರ ಕಿತ್ತೊಕೊಳ್ಳುತ್ತಿದೆ. ಬಿಜೆಪಿ ರಾಜ್ಯಕ್ಕೆ ಅನ್ಯಾಯ ಬಗೆದಿದೆ. ಇದಕ್ಕೆ ಬಂಗಾಳದ ಜನ ಸೂಕ್ತ ಸಮಯದಲ್ಲಿ ತಿರುಗೇಟು ನೀಡಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಲಿದೆ. ಬಿಜೆಪಿ ಮಾಡಿರುವ ಅವಮಾನಕ್ಕೆ ನಾವು ಸೇಡು ತೀರಿಸಿಕೊಳ್ಳುತ್ತೇವೆ. ಹೊರಗಿನವರು ಬಂಗಾಳವನ್ನು ಮುನ್ನಡೆಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರ ಹೆಸರನ್ನು ಪ್ರಸ್ತಾಪಿಸದೆ ಟೀಕಿಸಿದರು.

ರಾಜಸ್ಥಾನದಲ್ಲಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಯತ್ನಿಸುತ್ತಿದೆ. ಕೇಂದ್ರದ ಸಂಸ್ಥೆಗಳನ್ನು ಮತ್ತು ಹಣ ಬಲವನ್ನು ಬಳಸಿಕೊಂಡು ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿದರು.

ಪಶ್ಚಿಮ ಬಂಗಾಲದಲ್ಲೂ ಜನರಿಂದ ಆಯ್ಕೆಯಾದ ಸರ್ಕಾರವನ್ನು ಕೇಂದ್ರ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಇದಕ್ಕೆ ಕೇಂದ್ರ ಸಂಸ್ಥೆಗಳನ್ನು ಮತ್ತು ಹಣ ಬಲವನ್ನು ಬಳಸುತ್ತಿದೆ. ಬಿಜೆಪಿಯಂತ ವಿನಾಶಕಾರಿ ಪಕ್ಷ ದೇಶದಲ್ಲಿ ಎಂದೂ ನೋಡಿಲ್ಲ ಎಂದು ಟೀಕಿಸಿದರು.

ದೇಶದ ಜನರು ಮತ್ತು ಕೊರೊನ ವಾರಿಯರ್‌ಗಳು ಕೊರೊನ ಸೋಂಕು ವಿರುದ್ಧದ ಹೋರಾಟದಲ್ಲಿ ನಿರತರಾಗಿದ್ದಾರೆ. ಆದರೆ ಬಿಜೆಪಿ ರಾಜಸ್ಥಾನ ಮತ್ತು ಪಶ್ಚಿಮಬಂಗಾಳ ಸರ್ಕಾರ ನಂತರ ಮಧ್ಯಪ್ರದೇಶ ಸರ್ಕಾರಗಳನ್ನು ಅಸ್ಥಿರಗೊಳಿಸುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ಗುಜರಾತ್ ಆಡಳಿತವನ್ನು ಎಲ್ಲಾ ರಾಜ್ಯಗಳಲ್ಲೂ ಮಾಡಬಾರದೇಕೆ? ಫೆಡರಲ್ ರಚನೆಯ ಅವಶ್ಯಕತೆ ಏನು? ಎಂದು ಪ್ರಶ್ನಿಸಿದ ಅವರು ಒಂದು ದೇಶ ಒಂದು ಪಕ್ಷ ವ್ಯವಸ್ಥೆ ರಚನೆ ಮಾಡಲು ಬಿಜೆಪಿ ಹೊರಟಿದೆ ಎಂದು ಟೀಕಿಸಿದರು.


ಓದಿ: ನಾವು 2021ರ ಜೂನ್ ವರೆಗೂ ಉಚಿತ ಪಡಿತರ ನೀಡುತ್ತೇವೆ: ಮೋದಿಗೆ ಟಾಂಗ್‌ ಕೊಟ್ಟ ಮಮತಾ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...