Homeಮುಖಪುಟಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ನಿಂದ ಗೋರಾಜಕೀಯ; ಬಿಜೆಪಿಯಿಂದ ತೀವ್ರ ವಿರೋಧ!

ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಲಿ ಎಂದು ಬಿಜೆಪಿಯ ಹಿರಿಯ ನಾಯಕ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಛತ್ತೀಸ್‌ಗಡದ ಕಾಂಗ್ರೆಸ್ ಸರ್ಕಾರವು ‘ಗೋಧನ್ ನ್ಯಾಯ’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೊಜನೆಯ ಅಡಿಯಲ್ಲಿ ಸಾವಯವ ಗೊಬ್ಬರ ತಯಾರಿಸಲು ರಾಜ್ಯವು ಜಾನುವಾರು ಮಾಲೀಕರಿಂದ ಗೋವಿನ ತ್ಯಾಜ್ಯವನ್ನು ಖರೀದಿಸುತ್ತಿದೆ.

ಪಕ್ಷದ ಸೈದ್ಧಾಂತಿಕ ಮಾತೃಸಂಘಟನೆ ಆರ್‌ಎಸ್‌ಎಸ್ ಈ ಯೋಜನೆಯನ್ನು ಸ್ವಾಗತಿಸಿದೆ. ಆದರೆ ಕೆಲವು ಬಿಜೆಪಿ ನಾಯಕರು ಅಪಹಾಸ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ತಮ್ಮ ಅಧಿಕೃತ ನಿವಾಸದಲ್ಲಿ ಜಾನುವಾರು ಮಾಲೀಕರಿಂದ ಗೋವಿನ ಸಗಣಿಯನ್ನು ಸಾಂಕೇತಿಕವಾಗಿ ಸಂಗ್ರಹಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದ್ದಾರೆ.

ವರ್ಮಿಕಾಂಪೋಸ್ಟ್ ಉತ್ಪಾದಿಸಲು ಡೈರಿ ರೈತರಿಂದ ದನಗಳ ತ್ಯಾಜ್ಯವನ್ನು ಪ್ರತಿ ಕೆ.ಜಿ.ಗೆ ₹ 2 ರಂತೆ ಸಂಗ್ರಹಿಸುವ ಯೋಜನೆ ಇದಾಗಿದೆ. ನಂತರ ಸರ್ಕಾರ ತಯಾರು ಮಾಡುವ ಸಾವಯವ ಗೊಬ್ಬರವನ್ನು ರೈತರಿಗೆ ಕೆಜಿಗೆ ₹ 8 ರಂತೆ ಮಾರಾಟ ಮಾಡಲಾಗುತ್ತದೆ. ರೈತರು ಮತ್ತು ಜಾನುವಾರು ಮಾಲೀಕರ ಮನೆ ಬಾಗಿಲಿಗೆ ಹೋಗಿ ಸೆಗಣಿ ಸಂಗ್ರಹ ಮಾಡಲಾಗುವುದು ಮತ್ತು ಯೋಜನೆಯ ವಿವರಗಳ ಪ್ರಕಾರ ಖರೀದಿಯ 15 ದಿನಗಳಲ್ಲಿ ಪಾವತಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

2018ರಲ್ಲಿ ಅಧಿಕಾರ ವಹಿಸಿಕೊಂಡ ಬಾಗೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸರಿ ಪಕ್ಷವನ್ನು ಎದುರಿಸಲು ಗೋವನ್ನು ತನ್ನ ರಾಜಕೀಯ ಲಾಭಕ್ಕೆ ಬಳಸಿ ಅದರ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಯೋಜನೆಗಳನ್ನು ಪ್ರಾರಂಭಿಸಿದೆ. ಇದು ಎಷ್ಟರಮಟ್ಟಿಗೆಂದರೆ ಬಿಜೆಪಿ ಈಗ ರಾಜ್ಯ ಸರ್ಕಾರದ ಹಸು-ಸಗಣಿ ಯೋಜನೆಯನ್ನು ಅಪಹಾಸ್ಯ ಮಾಡಿ ಟೀಕಿಸುತ್ತಿದೆ.

ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅಜಯ್ ಚಂದ್ರಕರ್ ಅವರು ರಾಜ್ಯ ಸರ್ಕಾರವು ಗೋವಿನ ಸಗಣಿಯನ್ನು ರಾಜ್ಯದ ಲಾಂಛನವನ್ನಾಗಿ ಮಾಡಬೇಕು ಎಂದು ವ್ಯಂಗ್ಯವಾಡುವ ಮೂಲಕ ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮನ್ ಸಿಂಗ್ ಈ ಯೋಜನೆಯನ್ನು “ಕಲಗಚ್ಚು” ಎಂದು ಕರೆದಿದ್ದಾರೆ. ರೈತರಿಂದ ಭತ್ತವನ್ನು ಖರೀದಿಸಲು ಸಾಧ್ಯವಾಗದ ಸರ್ಕಾರ ಈಗ ಅವರಿಂದ ಹಸುವಿನ ಸಗಣಿ ಖರೀದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘವು ಈ ಕ್ರಮವನ್ನು ಶ್ಲಾಘಿಸಿದೆ. ದರವನ್ನು ಪ್ರತಿ ಕೆಜಿಗೆ ₹ 1.5 ರಿಂದ ₹ 2 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿತ್ತು. ಆರ್‌ಎಸ್‌ಎಸ್ ನಿಯೋಗವೊಂದು ಇತ್ತೀಚೆಗೆ ಮುಖ್ಯಮಂತ್ರಿಗೆ ಮೆಚ್ಚುಗೆಯ ಪತ್ರವನ್ನು ಹಸ್ತಾಂತರಿಸಿದ್ದು, ಅದಕ್ಕೆ ಸಂಘಟನೆಯ ಪ್ರಾದೇಶಿಕ ಸಂಚಾಲಕರಾದ ಬಿಸ್ರಾರಾಮ್ ಯಾದವ್ ಅವರು ಸಹಿ ಮಾಡಿದ್ದಾರೆ.

ಸರ್ಕಾರವು ಈ ಹಿಂದೆ ಸೆಗಣಿಗೆ ಕನಿಷ್ಠ ಬೆಂಬಲ ದರವನ್ನು ಪ್ರತಿ ಕೆಜಿಗೆ ₹ 1.5 ಎಂದು ನಿಗದಿಪಡಿಸಲು ನಿರ್ಧರಿಸಿತ್ತು, ಆದರೆ ಆರ್‌ಎಸ್‌ಎಸ್ ಸದಸ್ಯರ ಕೋರಿಕೆಯ ಮೇರೆಗೆ ಬೆಲೆಯನ್ನು 50 ಪೈಸೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಈ ಯೋಜನೆ ಗೋರಾಜಕೀಯ ಮಾಡುತ್ತಿದ್ದ ಬಿಜೆಪಿ ದೊಡ್ಡ ತಲೆನೋವಾಗಿದೆ. ಅದನ್ನು ಬೆಂಬಲಿಸಲು ಆಗದೇ, ವಿರೋಧಿಸಲು ಆಗದೇ ಒದ್ದಾಡುತ್ತಿದೆ.


ಓದಿ: ಛತ್ತೀಸ್‌ಗಡ ಸಿಎಂ ಬಾಗೆಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...