Homeಮುಖಪುಟಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

- Advertisement -
- Advertisement -

ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಜಗಳವಾಡಿದ ಕಾರಣಕ್ಕೆ ಆಂಧ್ರ ಪ್ರದೇಶ ಪೊಲೀಸರು ದಲಿತ ಯುವಕನ ಮೇಲೆ ಅಮಾನುಷವಾಗಿ ಥಳಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಯು ಸೀತಾನಗರಂ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ವೇದುಲ್ಲಪಲ್ಲಿ ಗ್ರಾಮದ ಸಂತ್ರಸ್ತ ಐ ವರ ಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ವೇದುಲ್ಲಪಲ್ಲಿ ಗ್ರಾಮದಲ್ಲಿ ಐ ವರಪ್ರಸಾದ್‌ ವಾಸಿಸುತ್ತಿದ್ದ ರಸ್ತೆಯಲ್ಲಿ ಭಾನುವಾರ ಸಂಜೆ ಒಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದತೆಗಳು ನಡೆಯುತ್ತಿದ್ದ ಕಾರಣಕ್ಕೆ ಆ ರಸ್ತೆಯನ್ನು ಕೆಲ ಸಮಯ ನಿರ್ಬಂಧಿಸಲಾಗಿತ್ತು. ಈ ಕಾರಣಕ್ಕೆ ಜಗಳ ಆರಂಭವಾಗಿದೆ.

“ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಬಂದು ಮರಳು ಲಾರಿಗಳನ್ನು ನಿಲ್ಲಿಸಿದ್ದಕ್ಕಾಗಿ ನಮ್ಮನ್ನು ಪ್ರಶ್ನಿಸಿದರು. ನಾವು ಸ್ವಲ್ಪ ಸಮಯ ಕಾಯಿರಿ ಶವ ತೆಗೆದುಕೊಂಡ ಹೋದ ಕೂಡಲೇ ತೆರವುಗೊಳಿಸುತ್ತೇವೆ ಎಂದು ಹೇಳಿದೆವು. ಇದು ವಾದಕ್ಕೆ ಕಾರಣವಾಯಿತು. ಸೋಮವಾರ ಬೆಳಿಗ್ಗೆ, ಸೀತಾನಗರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪೊಲೀಸ್ ಶೇಕ್ ಫಿರೋಜ್ ಶಾ ಮತ್ತು ಇತರ ಇಬ್ಬರು ಕಾನ್‌ಸ್ಟೆಬಲ್‌ಗಳು ಗ್ರಾಮಕ್ಕೆ ಬಂದು ನನ್ನನ್ನು ಮತ್ತು ಇತರ ಇಬ್ಬರನ್ನು ತನಿಖೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಸಂತ್ರಸ್ತ ವರಪ್ರಸಾದ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ನಮ್ಮ ಮೇಲೆ ಎಸ್‌ಐ ಬೆಲ್ಟ್‌ನಿಂದ ತೀವ್ರವಾಗಿ ಹೊಡೆದು ಒದೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಅವರು ನಂತರ ಕ್ಷೌರಿಕನನ್ನು ಕರೆದರ ನನ್ನ ತಲೆಗೆ ಹೊಡೆದು ನನ್ನ ಮೀಸೆಗಳನ್ನು ಬಲವಂತವಾಗಿ ಬೋಳಿಸಲಾಯಿತು ಎಂದು ಅವರು ಹೇಳಿದ್ದಾರೆ

ಈ ಘಟನೆಯನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ದಲಿತ ಯುವಕರನ್ನು ಥಳಿಸುವ ಮೂಲಕ ಆಂಧ್ರಪ್ರದೇಶ ಮತ್ತೆ ಜಂಗಲ್ ರಾಜ್‌ಗೆ ಮರಳಿದೆ, ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಲಿತನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದಿದ್ದಾರೆ. ದಲಿತ ವ್ಯಕ್ತಿಯ ಮೀಸೆ ಬೋಳಿಸುವ ಮೂಲಕ ಅವರ ಸ್ವಾಭಿಮಾನವನ್ನು ಹಾಳುಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ಪ್ರಶ್ನಿಸುವುದು ಅವರ ಏಕೈಕ ತಪ್ಪು. ಪೊಲೀಸರಿಗೆ ಏನಾಗಿದೆ? ಭ್ರಷ್ಟ ಆಡಳಿತ ಪಕ್ಷದ ಕೈಯಲ್ಲಿ ಅವರು ಆಟಿಕೆಗಳಾಗಿರುವುದು ಏಕೆ? ಇದು ಅವರ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಘಟನೆಯನ್ನು ಖಂಡಿಸಿ ಸ್ಥಳೀಯ ದಲಿತ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್.ಎನ್ ರಾವ್ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಫಿರೋಜ್ ಶಾ ಮತ್ತು ಇನ್ನೊಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 323 ಮತ್ತು 506 ರ ಅಡಿಯಲ್ಲಿ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆಯಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

“ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

ದಲಿತ ಯುವಕರನ್ನು ಅವಮಾನಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಅಮಲಪುರಂ ಸಂಸದ ಜಿ.ವಿ.ಹರ್ಷ ಕುಮಾರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...