Homeಮುಖಪುಟಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

- Advertisement -
- Advertisement -

ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಜಗಳವಾಡಿದ ಕಾರಣಕ್ಕೆ ಆಂಧ್ರ ಪ್ರದೇಶ ಪೊಲೀಸರು ದಲಿತ ಯುವಕನ ಮೇಲೆ ಅಮಾನುಷವಾಗಿ ಥಳಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಯು ಸೀತಾನಗರಂ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ವೇದುಲ್ಲಪಲ್ಲಿ ಗ್ರಾಮದ ಸಂತ್ರಸ್ತ ಐ ವರ ಪ್ರಸಾದ್ ಅವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ವೇದುಲ್ಲಪಲ್ಲಿ ಗ್ರಾಮದಲ್ಲಿ ಐ ವರಪ್ರಸಾದ್‌ ವಾಸಿಸುತ್ತಿದ್ದ ರಸ್ತೆಯಲ್ಲಿ ಭಾನುವಾರ ಸಂಜೆ ಒಬ್ಬರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದತೆಗಳು ನಡೆಯುತ್ತಿದ್ದ ಕಾರಣಕ್ಕೆ ಆ ರಸ್ತೆಯನ್ನು ಕೆಲ ಸಮಯ ನಿರ್ಬಂಧಿಸಲಾಗಿತ್ತು. ಈ ಕಾರಣಕ್ಕೆ ಜಗಳ ಆರಂಭವಾಗಿದೆ.

“ಸ್ಥಳೀಯ ವೈಎಸ್‌ಆರ್ ಕಾಂಗ್ರೆಸ್ ಮುಖಂಡರು ಅಲ್ಲಿಗೆ ಬಂದು ಮರಳು ಲಾರಿಗಳನ್ನು ನಿಲ್ಲಿಸಿದ್ದಕ್ಕಾಗಿ ನಮ್ಮನ್ನು ಪ್ರಶ್ನಿಸಿದರು. ನಾವು ಸ್ವಲ್ಪ ಸಮಯ ಕಾಯಿರಿ ಶವ ತೆಗೆದುಕೊಂಡ ಹೋದ ಕೂಡಲೇ ತೆರವುಗೊಳಿಸುತ್ತೇವೆ ಎಂದು ಹೇಳಿದೆವು. ಇದು ವಾದಕ್ಕೆ ಕಾರಣವಾಯಿತು. ಸೋಮವಾರ ಬೆಳಿಗ್ಗೆ, ಸೀತಾನಗರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪೊಲೀಸ್ ಶೇಕ್ ಫಿರೋಜ್ ಶಾ ಮತ್ತು ಇತರ ಇಬ್ಬರು ಕಾನ್‌ಸ್ಟೆಬಲ್‌ಗಳು ಗ್ರಾಮಕ್ಕೆ ಬಂದು ನನ್ನನ್ನು ಮತ್ತು ಇತರ ಇಬ್ಬರನ್ನು ತನಿಖೆಯ ಹೆಸರಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಸಂತ್ರಸ್ತ ವರಪ್ರಸಾದ್ ಹೇಳಿದ್ದಾರೆ.

ಕಸ್ಟಡಿಯಲ್ಲಿ ನಮ್ಮ ಮೇಲೆ ಎಸ್‌ಐ ಬೆಲ್ಟ್‌ನಿಂದ ತೀವ್ರವಾಗಿ ಹೊಡೆದು ಒದೆದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಅವರು ನಂತರ ಕ್ಷೌರಿಕನನ್ನು ಕರೆದರ ನನ್ನ ತಲೆಗೆ ಹೊಡೆದು ನನ್ನ ಮೀಸೆಗಳನ್ನು ಬಲವಂತವಾಗಿ ಬೋಳಿಸಲಾಯಿತು ಎಂದು ಅವರು ಹೇಳಿದ್ದಾರೆ

ಈ ಘಟನೆಯನ್ನು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ. ದಲಿತ ಯುವಕರನ್ನು ಥಳಿಸುವ ಮೂಲಕ ಆಂಧ್ರಪ್ರದೇಶ ಮತ್ತೆ ಜಂಗಲ್ ರಾಜ್‌ಗೆ ಮರಳಿದೆ, ವೈಎಸ್‌ಆರ್ ಕಾಂಗ್ರೆಸ್ ಕಾರ್ಯಕರ್ತರು ದಲಿತನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ದಲಿತ ವ್ಯಕ್ತಿಯನ್ನು ಹೊಡೆದಿದ್ದಾರೆ. ದಲಿತ ವ್ಯಕ್ತಿಯ ಮೀಸೆ ಬೋಳಿಸುವ ಮೂಲಕ ಅವರ ಸ್ವಾಭಿಮಾನವನ್ನು ಹಾಳುಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ಪ್ರಶ್ನಿಸುವುದು ಅವರ ಏಕೈಕ ತಪ್ಪು. ಪೊಲೀಸರಿಗೆ ಏನಾಗಿದೆ? ಭ್ರಷ್ಟ ಆಡಳಿತ ಪಕ್ಷದ ಕೈಯಲ್ಲಿ ಅವರು ಆಟಿಕೆಗಳಾಗಿರುವುದು ಏಕೆ? ಇದು ಅವರ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಘಟನೆಯನ್ನು ಖಂಡಿಸಿ ಸ್ಥಳೀಯ ದಲಿತ ಸಂಘಟನೆಗಳ ತೀವ್ರ ಪ್ರತಿಭಟನೆಯ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎಸ್.ಎನ್ ರಾವ್ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಫಿರೋಜ್ ಶಾ ಮತ್ತು ಇನ್ನೊಬ್ಬ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 324, 323 ಮತ್ತು 506 ರ ಅಡಿಯಲ್ಲಿ ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ (ತಡೆಗಟ್ಟುವಿಕೆ) ಕಾಯ್ದೆಯಡಿ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಕೆ.ವಿ.ಮೋಹನ್ ರಾವ್ ಹೇಳಿದ್ದಾರೆ.

“ಸೀತಾನಗರಂ ಪೊಲೀಸರು ದಲಿತ ಯುವಕನನ್ನು ಅವಮಾನಿಸಿದ ಘಟನೆಗೆ ನಾವು ವಿಷಾದಿಸುತ್ತೇವೆ. ಆರೋಪಿ ಪೊಲೀಸರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಅಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ”ಎಂದು ಡಿಐಜಿ ಹೇಳಿದ್ದಾರೆ.

ದಲಿತ ಯುವಕರನ್ನು ಅವಮಾನಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಅಮಲಪುರಂ ಸಂಸದ ಜಿ.ವಿ.ಹರ್ಷ ಕುಮಾರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...