Homeಮುಖಪುಟಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ.

- Advertisement -
- Advertisement -

ಜೂನ್ 20 ರಂದು ಗಾಝಿಯಾಬಾದ್‌ನ ತಮ್ಮ ನಿವಾಸದ ಬಳಿ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆಯ ಸಾಕ್ಷ್ಯ ಸಂಗ್ರಹಿಸಿ ಈ ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಹಾಗೂ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಜೋಶಿಯನ್ನು ಮೇಲ್ವಿಚಾರಣೆ ಮಾಡುವ ವೈದ್ಯರು, ಬುಲೆಟ್ ಗಾಯದಿಂದಾಗಿ ತಲೆಯಲ್ಲಿರುವ ರಕ್ತನಾಳಗಳು ತೀವ್ರವಾಗಿ ಹಾನಿಗೊಳಗಾಗಿದ್ದವು ಎಂದು ಹೇಳಿದ್ದಾರೆ. ಗಾಯಗೊಂಡ ನಂತರ ಗಾಜಿಯಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು.

ಸೋಮವಾರ ರಾತ್ರಿ 10.30 ರ ಸುಮಾರಿಗೆ ಜೋಶಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿತ್ತು.

ಉತ್ತರ ಪ್ರದೇಶದ ಗಾಝಿಯಾಬಾದ್‌ನ ವಿಜಯ್ ನಗರ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಜೋಶಿ ತನ್ನ ಹೆಣ್ಣುಮಕ್ಕಳೊಂದಿಗೆ ಬೈಕನ್ನು ಓಡಿಸುತ್ತಿರುವುದನ್ನು ಕಾಣಬಹುದು.

ಜುಲೈ 16 ರಂದು ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ದೂರಿನಲ್ಲಿ ಜೋಶಿ ಅವರ ಕುಟುಂಬ ಛೋಟು, ರವಿ ಮತ್ತು ಆಕಾಶ್ ಬಿಹಾರಿ ಎಂಬ ಮೂರು ಜನರನ್ನು ಹೆಸರಿಸಿದೆ. ಮೂವರು ಆರೋಪಿಗಳು ಪತ್ರಕರ್ತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಪಾದಿತ ಎಫ್‌ಐಆರ್ ತಿಳಿಸಿದೆ.

ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಈ ಮೂವರನ್ನು ಹೆಸರಿಸಲಾಗಿದೆ.

ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಬುಧವಾರ ಬೆಳಿಗ್ಗೆ ಈ ಘಟನೆಯನ್ನು ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ. “ಗಾಜಿಯಾಬಾದ್ ಪ್ರದೇಶದಲ್ಲಿ ಆಘಾತಕಾರಿ ಜಂಗಲ್ ರಾಜ್. ಪತ್ರಕರ್ತ ಜೋಶಿ ದೂರು ನೀಡಿರುವ ವ್ಯಕ್ತಿಯ ಮೇಲೆ ಈಗಾಗಲೇ ಎಫ್‌ಐಆರ್ ದಾಖಲಾಗಿತ್ತು. ತನ್ನ ಹೆಣ್ಣುಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಹೋಗುವಾಗ ಗುಂಡಿಗೆ ಬಲಿಯಾಗಿದ್ದಾರೆ. ಹೆಣ್ಣುಮಕ್ಕಳಿಗೆ ಗುಂಡು ಬೀಳದ್ದಿಲ್ಲ” ಎಂದು ಅವರು ತನ್ನ ಟ್ವೀಟ್‌‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದವನದನು ಟೀಕಿಸಿದ್ದಾರೆ. ಈ ಘಟನೆಯು “ಜಂಗಲ್ ರಾಜ್” ನಲ್ಲಿ ಸಾಮಾನ್ಯ ಜನರಿಗೆ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ ಎಂದಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...