Homeಮುಖಪುಟಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ರಕ್ತದಲ್ಲಿ ತೊಯ್ದಿರುವ ಮಹಿಳೆಯೋರ್ವಳು ಮಾತನಾಡಿರುವ ವೀಡಿಯೋವೊಂದು ಸಾಂಆಜಿಕ ಜಾಲತಾಣದಲ್ಲಿ ವೈರಲಾಗಿದ್ದು ಅದರಲ್ಲಿ, RSS ಕಾರ್ಯಕರ್ತರು ಮುಸ್ಲಿಂ ವೈಧ್ಯೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಈ ಬಗ್ಗೆ, ದಿ ಕ್ವಿಂಟ್‌ ಫ್ಯಾಕ್ಟ್‌ ಚೆಕ್‌ ಮಾಡಿದ್ದು, ವಿಡಿಯೋದಲ್ಲಿರುವ ಮಹಿಳೆ ಮತ್ತು ಅವರ ತಂಡವು ನಾಯಿಗಳನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಅದು ತಿಳಿಸಿದೆ.

ಈ ಬಗ್ಗೆ ವಿಡಿಯೊದಲ್ಲಿರುವ ಮಹಿಳೆಯೆ ಮಹಿತಿ ನೀಡಿದ್ದಾರೆ. ಮಹಿಳೆಯು ದೆಹಲಿ ಮೂಲದ ‘ನೈಬರ್ ವೂಫ್’ ಸಂಸ್ಥಾಪಕಿ ಆಯೆಷಾ ಕ್ರಿಸ್ಟಿನಾ ಎಂಬವರಾಗಿದ್ದಾರೆ. ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲವೆಂದು ಸ್ವತಃ ಮಹಿಳೆಯೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಆಡಳಿತ ಪಕ್ಷದ ಬೆಂಬಲವನ್ನು ಹೊಂದಿರುವ ಹಿಂದೂ ಉಗ್ರಗಾಮಿ ಸಂಘಟನೆ ಆರ್‌ಎಸ್‌ಎಸ್‌, ಮುಸ್ಲಿಮರು ಕೊರೊನಾ ವೈರಸ್‌ ಹರಡುತ್ತಿದ್ದಾರೆಂಬ ಆರೋಪ ಹೊರಿಸಿ ಮುಸ್ಲಿಂ ವೈದ್ಯೆ ಆಯೆಷಾ ಅವರ ಮೇಲೆ ಹಲ್ಲೆ ನಡೆಸಿದೆ. ಇದು ಭಾರತವು ಮುಸ್ಲಿಮರ ವಿರುದ್ಧ ನಡೆಸುತ್ತಿರುವ ತೀವ್ರತರದ ಧ್ವೇಷ ಅಭಿಯಾನಕ್ಕೆ ಸಾಕ್ಷಿಯಾಗಿದೆ” ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನು ಹಲವಾರು ಟ್ವಿಟ್ಟರ್ ಬಳಕೆದಾರರು ಇದೇ ರೀತಿಯ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಫ್ಯಾಕ್ಟ್‌‌ಚೆಕ್:

ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ Neighbourhood Woof ಎಂಬ ಎನ್‌ಜಿಒ ಸದಸ್ಯರು ಜುಲೈ 3 ರಂದು ದೆಹಲಿಯ ರಾಣಿ ಬಾಗ್‌ನ ರಾಶಿ ನಗರದ ಕೆಲವು ನಿವಾಸಿಗಳಿಂದ ಹಲ್ಲೆಗೆ ಒಳಗಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ಈ ಘಟನೆಯ ನಂತರ, ಈ ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

ಎನ್‌ಜಿಒ ಸದಸ್ಯರು ಈ ಹಿಂದೆ ಘಟನೆಯ ವಿವರಗಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಆದರೆ, ಧಾರ್ಮಿಕ ಕಾರಣದಿಂದಾಗಿ ದಾಳಿಗೆ ಒಳಗಾಗಿರುವುದಾಗಿ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಈ ಘಟನೆಯ ವಿಚಾರವಾಗಿ ಆಯೆಷಾ ಕ್ರಿಸ್ಟಿನಾ ಅವರನ್ನು ಸಂಪರ್ಕಿಸಿದಾಗ, ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅವರು ಯಾರೇ ಆಗಿರಬಹುದು, ಇದನ್ನು ಧಾರ್ಮಿಕ ಉದ್ದೇಶದಿಂದ ಹರಡುತ್ತಿದ್ದಾರೆ. ಅವರ ಆಲೋಚನೆ ಮತ್ತು ಕಾರ್ಯಸೂಚಿ ಬಹಳ ಸ್ಪಷ್ಟವಾಗಿದೆ. ಆದ್ದರಿಂದ, ನಾನು ಅಂತಹ ಜನರೊಂದಿಗೆ ತೊಡಗಿಸಿಕೊಳ್ಳಲು ಸಹ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದರ ನಡುವೆ, ಹಲ್ಲೆನಡೆಸಿದ ನಿವಾಸಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 341 (ತಪ್ಪಾದ ಸಂಯಮ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜುಲೈ 4 ರ ಪತ್ರಿಕಾ ಪ್ರಕಟಣೆಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

“ತಡರಾತ್ರಿಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್‌ಜಿಓದವರ ಗುರುತಿನ ಚೀಟಿಗಳನ್ನು ಸ್ಥಳೀಯ ನಿವಾಸಿಗಳು ಕೇಳಿದ್ದು, ನಂತರ ಎನ್‌ಜಿಒ ಮತ್ತು ಸ್ಥಳೀಯರ ನಡುವಿನ ವಾಗ್ವಾದ ತಾರಕ್ಕೇರಿದೆ. ಇದರ ನಂತರ, ಎನ್‌ಜಿಒ ಸದಸ್ಯರು ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡಲು ಅನುವಾದಾಗ 3 ಸ್ಥಳೀಯ ನಿವಾಸಿಗಳು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಅವರಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ರಿಷಿ ನಗರದಲ್ಲಿ ಈ ಘಟನೆ ನಡೆದಿರುವುದು ನಿಜವಾಗಿದ್ದರೂ, ಅದನ್ನು ಪ್ರಸಾರ ಮಾಡಿರುವ ಉದ್ದೇಶ ಮತ್ತು ನೀಡಿರುವ ಕಾರಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...