Homeಮುಖಪುಟಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ರಕ್ತದಲ್ಲಿ ತೊಯ್ದಿರುವ ಮಹಿಳೆಯೋರ್ವಳು ಮಾತನಾಡಿರುವ ವೀಡಿಯೋವೊಂದು ಸಾಂಆಜಿಕ ಜಾಲತಾಣದಲ್ಲಿ ವೈರಲಾಗಿದ್ದು ಅದರಲ್ಲಿ, RSS ಕಾರ್ಯಕರ್ತರು ಮುಸ್ಲಿಂ ವೈಧ್ಯೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಈ ಬಗ್ಗೆ, ದಿ ಕ್ವಿಂಟ್‌ ಫ್ಯಾಕ್ಟ್‌ ಚೆಕ್‌ ಮಾಡಿದ್ದು, ವಿಡಿಯೋದಲ್ಲಿರುವ ಮಹಿಳೆ ಮತ್ತು ಅವರ ತಂಡವು ನಾಯಿಗಳನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಅದು ತಿಳಿಸಿದೆ.

ಈ ಬಗ್ಗೆ ವಿಡಿಯೊದಲ್ಲಿರುವ ಮಹಿಳೆಯೆ ಮಹಿತಿ ನೀಡಿದ್ದಾರೆ. ಮಹಿಳೆಯು ದೆಹಲಿ ಮೂಲದ ‘ನೈಬರ್ ವೂಫ್’ ಸಂಸ್ಥಾಪಕಿ ಆಯೆಷಾ ಕ್ರಿಸ್ಟಿನಾ ಎಂಬವರಾಗಿದ್ದಾರೆ. ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲವೆಂದು ಸ್ವತಃ ಮಹಿಳೆಯೆ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಆಡಳಿತ ಪಕ್ಷದ ಬೆಂಬಲವನ್ನು ಹೊಂದಿರುವ ಹಿಂದೂ ಉಗ್ರಗಾಮಿ ಸಂಘಟನೆ ಆರ್‌ಎಸ್‌ಎಸ್‌, ಮುಸ್ಲಿಮರು ಕೊರೊನಾ ವೈರಸ್‌ ಹರಡುತ್ತಿದ್ದಾರೆಂಬ ಆರೋಪ ಹೊರಿಸಿ ಮುಸ್ಲಿಂ ವೈದ್ಯೆ ಆಯೆಷಾ ಅವರ ಮೇಲೆ ಹಲ್ಲೆ ನಡೆಸಿದೆ. ಇದು ಭಾರತವು ಮುಸ್ಲಿಮರ ವಿರುದ್ಧ ನಡೆಸುತ್ತಿರುವ ತೀವ್ರತರದ ಧ್ವೇಷ ಅಭಿಯಾನಕ್ಕೆ ಸಾಕ್ಷಿಯಾಗಿದೆ” ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನು ಹಲವಾರು ಟ್ವಿಟ್ಟರ್ ಬಳಕೆದಾರರು ಇದೇ ರೀತಿಯ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ದೆಹಲಿ ಮುಸ್ಲಿಂ ವೈಧ್ಯೆಯ ಮೇಲೆ ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿಲ್ಲ

ಫ್ಯಾಕ್ಟ್‌‌ಚೆಕ್:

ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ Neighbourhood Woof ಎಂಬ ಎನ್‌ಜಿಒ ಸದಸ್ಯರು ಜುಲೈ 3 ರಂದು ದೆಹಲಿಯ ರಾಣಿ ಬಾಗ್‌ನ ರಾಶಿ ನಗರದ ಕೆಲವು ನಿವಾಸಿಗಳಿಂದ ಹಲ್ಲೆಗೆ ಒಳಗಾಗಿದ್ದೇವೆ ಎಂದು ಆರೋಪಿಸಿದ್ದಾರೆ.

ಈ ಘಟನೆಯ ನಂತರ, ಈ ವಿಡಿಯೋವನ್ನು ಆರ್‌ಎಸ್‌ಎಸ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಹಂಚಿಕೊಳ್ಳಲಾಗುತ್ತಿದೆ.

ಎನ್‌ಜಿಒ ಸದಸ್ಯರು ಈ ಹಿಂದೆ ಘಟನೆಯ ವಿವರಗಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಆದರೆ, ಧಾರ್ಮಿಕ ಕಾರಣದಿಂದಾಗಿ ದಾಳಿಗೆ ಒಳಗಾಗಿರುವುದಾಗಿ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ.

ಈ ಘಟನೆಯ ವಿಚಾರವಾಗಿ ಆಯೆಷಾ ಕ್ರಿಸ್ಟಿನಾ ಅವರನ್ನು ಸಂಪರ್ಕಿಸಿದಾಗ, ಈ ಘಟನೆಗೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅವರು ಯಾರೇ ಆಗಿರಬಹುದು, ಇದನ್ನು ಧಾರ್ಮಿಕ ಉದ್ದೇಶದಿಂದ ಹರಡುತ್ತಿದ್ದಾರೆ. ಅವರ ಆಲೋಚನೆ ಮತ್ತು ಕಾರ್ಯಸೂಚಿ ಬಹಳ ಸ್ಪಷ್ಟವಾಗಿದೆ. ಆದ್ದರಿಂದ, ನಾನು ಅಂತಹ ಜನರೊಂದಿಗೆ ತೊಡಗಿಸಿಕೊಳ್ಳಲು ಸಹ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದರ ನಡುವೆ, ಹಲ್ಲೆನಡೆಸಿದ ನಿವಾಸಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 341 (ತಪ್ಪಾದ ಸಂಯಮ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಜುಲೈ 4 ರ ಪತ್ರಿಕಾ ಪ್ರಕಟಣೆಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

“ತಡರಾತ್ರಿಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್‌ಜಿಓದವರ ಗುರುತಿನ ಚೀಟಿಗಳನ್ನು ಸ್ಥಳೀಯ ನಿವಾಸಿಗಳು ಕೇಳಿದ್ದು, ನಂತರ ಎನ್‌ಜಿಒ ಮತ್ತು ಸ್ಥಳೀಯರ ನಡುವಿನ ವಾಗ್ವಾದ ತಾರಕ್ಕೇರಿದೆ. ಇದರ ನಂತರ, ಎನ್‌ಜಿಒ ಸದಸ್ಯರು ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡಲು ಅನುವಾದಾಗ 3 ಸ್ಥಳೀಯ ನಿವಾಸಿಗಳು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಅವರಿಗೆ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ರಿಷಿ ನಗರದಲ್ಲಿ ಈ ಘಟನೆ ನಡೆದಿರುವುದು ನಿಜವಾಗಿದ್ದರೂ, ಅದನ್ನು ಪ್ರಸಾರ ಮಾಡಿರುವ ಉದ್ದೇಶ ಮತ್ತು ನೀಡಿರುವ ಕಾರಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...