Homeಕರ್ನಾಟಕಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

ಕಾರವಾರ: ಕಿಮ್ಸ್‌ನಲ್ಲಿ ವಿಡಿಯೋ-ಆಡಿಯೋ ಗುದುಮುರಿಗೆ!!

- Advertisement -
- Advertisement -

ಕಾರವಾರದ ಮೆಡಿಕಲ್ ಕಾಲೇಜು ಉರುಫ್ ಕಿಮ್ಸ್ ಗಲೀಜು-ಗಲಾಟೆ-ಗುಳುಂಗಳಿಂದ ಗಬ್ಬೆದ್ದು ನಾರುತ್ತಿದೆ. ಈ ಕಿಮ್ಸ್ ಶುರುವಾದಾಗಿಂದಲೂ ಅಲ್ಲಿ ಆಡಳಿತದಲ್ಲಿ ‘ಕಾರವಾರ ರಿಪಬ್ಲಿಕ್’ ಕಿಂಗ್‍ಗಳು ಕೈಯಾಡಿಸುತ್ತಲೇ ಬಂದಿದ್ದಾರೆ. ಆರಂಭದಲ್ಲಿ ತಮ್ಮೊಂದಿಗೆ ಹೊಂದಿಕೊಂಡಿದ್ದ, ನಂತರ ಸೆಟೆದು ನಿಂತಿದ್ದ ಡೀನ್ ಕಮ್ ಡೈರೆಕ್ಟರ್ ಡಾ| ದೊಡ್ಮನಿಯನ್ನು ಎತ್ತಗಂಡಿ ಮಾಡಿಸಿ ಅನರ್ಹ ಡಾ| ಗಜಾನನ ನಾಯಕ್‍ನನ್ನು ಇದೇ ಕಾರವಾರ್ ರಿಪಬ್ಲಿಕ್ ಪ್ರತಿಷ್ಠಾಪಿಸಿಕೊಂಡಿತ್ತು. ಆತನಿಂದ ಜಿಲ್ಲಾ ಆಸ್ಪತ್ರೆ ನಂದನವನವಾಗುತ್ತದೆ; ರೋಗಿಗಳಿಗೆ ತೊಂದರೆ-ಕೊರತೆಯೆಂಬುದೇ ಆಗುವುದಿಲ್ಲ ಎಂಬಂತೆ ರಿಪಬ್ಲಿಕ್ ಮಾಫಿಯಾ ಬಿಂಬಿಸಿತ್ತು. ಆದರೆ ಎಂದೂ ಕ್ಲಿನಿಕಲ್ ಪ್ರಾಕ್ಟೀಸ್ ಮಾಡದ ಡಾ| ಗಜಾನನ ವಕ್ಕರಿಸಿದ್ದೇ ತಡ, ಕಿಮ್ಸ್‍ನಲ್ಲಿ ಸರಣಿ ಅವಾಂತರ-ಅನಾಹುತ-ಆಧ್ವಾನ ಆಗಹತ್ತಿದೆ……..

ಕಿಮ್ಸ್‍ನ ಕೋವಿಡ್-19 ವಾರ್ಡ್‍ಂತೂ ರೌರವ ನರಕ. ವಾರ್ಡ್ ತುಂಬ ಕಸ-ಕೊಚ್ಚೆ ಶುದ್ಧ ಕುಡಿಯುವ ನೀರಿಗೂ ಗತಿಯಿಲ್ಲ. ಹೈಜೀನಿಕ್ ಊಟ-ತಿಂಡಿ ಕೇಳಲೇಬೇಡಿ. ಡಾಕ್ಟರ್-ದಾದಿಯರು ಬಂದರೆ ಬಂದರು, ಇಲ್ಲದಿದ್ದರೆ ಇಲ್ಲ. ಸ್ವಚ್ಛತಾ ಕರ್ಮಚಾರಿಗಳಂತೂ ಕಾಣುವುದೇ ಇಲ್ಲ. ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ವೈದ್ಯಕೀಯ ಅಧೀಕ್ಷರು, ಡಾ| ಕುಡ್ತರ್‍ಕರ್ ಪಿಪಿಇ ಕಿಟ್ ಧರಿಸಿ ವಾರ್ಡಿಗೆ ಹೋದದ್ದೇ ಇಲ್ಲ!! ರೋಗ ನಿರೋಧಕ ಶಕ್ತಿಯಿದ್ದ ರೋಗಿ ಕಿಮ್ಸ್‍ನಿಂದ ಬಚಾವಾಗಿ ಬರಬೇಕೇ ಹೊರತು ಇಲ್ಲಿಯ ಶುಶ್ರೂಷೆಯಿಂದ ಬದುಕಲು ಸಾಧ್ಯವೇ ಇಲ್ಲ. ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಉತ್ಸಾಹಿ ಐಎಎಸ್ ಅಧಿಕಾರಿ ಮಹಮ್ಮದ್ ರೋಷನ್ ಕೋವಿಡ್ ಕೇಂದ್ರದ ಉಸ್ತುವಾರಿ ನೋಡಿಕೊಂಡಷ್ಟು ದಿನ ಯಾವುದೇ ಸಮಸ್ಯೆಯಿರಲಿಲ್ಲ.

ಕಿಮ್ಸ್ ಡೈರೆಕ್ಟರ್ ಡಾ| ಗಜಾನನ ಮತ್ತು ಸುಪರಿಂಡೆಂಟೆಂಟ್ ಡಾ| ಕುಡ್ತರ್‍ಕರ್ ಕೋವಿಡ್ ಕೇಂದ್ರದ ಯಜಮಾನಿಕೆಗಾಗಿ ಲಾಬಿ ಮಾಡುತ್ತಿದ್ದಂತೆಯೇ ಜಿಲ್ಲಾಡಳಿತ ಅಂತರ ಕಾಯ್ದುಕೊಂಡಿತು. ಕೋವಿಡ್ ಕೇಂದ್ರ ಕಬ್ಜಾ ಮಾಡಿಕೊಂಡ ಡಾ| ಗಜಾನನ ಸಿಇಓ ರೊಷನ್‍ರ ಸಾಧನೆ ಶ್ರಮವೆಲ್ಲ ತನ್ನ ಸಾಹಸವೆಂಬಂತೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಕಾರವಾರದ ಅವರ ಜಾತಿವಂತರ ಪತ್ರಿಕೆಯಂತೂ ‘ಮೃತ್ಯುಂಜಯ’ ಎಂಬ ಹಾಸ್ಯಾಸ್ಪದ ಬಿರುದು ಕೊಟ್ಟುಬಿಟ್ಟಿತು.

ಸೋಂಕಿತರು ಗುಣವಾಗಿ ಹೋಗುವಾಗ ಹೂವು ಕೊಟ್ಟು ಚಪ್ಪಾಳೆ ಹೊಡೆದು ಫೋಟೋ ಸೆಷನ್ ನಡೆಸಿ ಕಾಳಜಿಯ ವೈದ್ಯಾಗ್ರೇಸನ ಪೋಸು ಕೊಡುತ್ತಿದ್ದವರ ಬಣ್ಣ ಕಳೆದ 10-7-2020ರಂದು ಬಯಲಾಗಿ ಹೋಯಿತು. ಬೆಂಗಳೂರಲ್ಲಿ ಚಾರ್ಟ್‍ಟೆಡ್ ಅಕೌಂಟೆಂಟ್ ಉದ್ಯೋಗ ಮಾಡಿಕೊಂಡಿದ್ದ ಕಾರವಾರದ ನಿತಿನ್ ನಾಯಕ್ ಎಂಬ ತರುಣ ಮೂರು ದಿನಗಳ ಹಿಂದೆ ಈ ಕೋವಿಡ್ ಕೇಂದ್ರಕ್ಕೆ ದಾಖಲಾಗಿದ್ದ. ಅಲ್ಲಿದ್ದ ಸೋಂಕಿತರೆಲ್ಲ ಹೀನಾಯ ಸ್ಥಿತಿಯಲ್ಲಿದ್ದರು; ಮೂರು ದಿನ ನಿತಿನ್ ಸಹ ಹಿಂಸೆ ಅನುಭವಿಸಿದ್ದಾನೆ. ಈತ ಇಡೀ ಉದ್ದಗಲಕ್ಕೆ ಓಡಾಡುತ್ತ ಅಲ್ಲಿಯ ಅವ್ಯವಸ್ಥೆ-ಅನೈರ್ಮಲ್ಯ-ಲೋಪ-ದೋಷ ಲೈವ್ ಕಮೆಂಟರಿ ಮೂಲಕ ತೋರಿಸುತ್ತ ವಿಡಿಯೋ ಮಾಡಿಸಿಕೊಂಡಿದ್ದಾನೆ. ಆತನಿಗೆ ವಾರ್ಡ್‍ನ ಇತರ ಸೋಂಕಿತರು ಶೂಟಿಂಗ್‍ಗೆ ನೆರವಾಗಿದ್ದಾರೆ. ವಾರ್ಡಿಗೆ ಡಾಕ್ಟರ್ಸ್-ದಾದಿಯರು ಮತ್ತ ಸ್ವಚ್ಛತಾ ಕರ್ಮಚಾರಿಗಳ್ಯಾರು ಬರುತ್ತಿಲ್ಲ; ರೋಗಿಗಳ ಮೇಲೆ ಯಾರಿಗೂ ನಿಗಾಇಲ್ಲ ಎಂದಿರುವ ನಿತಿನ್ ವಾರ್ಡ್ ತುಂಬ ತುಂಬಿರುವ ಬಯೋಲಾಜಿಕಲ್ ತ್ಯಾಜ್ಯ, ನೀರು ನಿಂತು ಕೊಚ್ಚೆ ನಿರ್ಮಾಣವಾಗಿರುವುದು, ಬಿಸಿ ನೀರಿಗೂ ಗತಿಯಿಲ್ಲದಿರುವುದು, ಶೌಚಾಲಯದ ದುರವಸ್ಥೆ-ಅಸಹ್ಯ, ಅತಿ ಅವಶ್ಯವಾದ ನೀರೂ ಸರಬರಾಜಾಗದಿರುವುದು, ಸ್ವಚ್ಛತೆಯಿಲ್ಲದ ಊಟ-ಉಪಹಾರದ ಕತೆ ಹೇಳುತ್ತ ಹೊರಜಗತ್ತಿಗೆ ಕಳುಹಿಸಿದ್ದಾನೆ. ಇದಕ್ಕಿಂತ ಮುಖ್ಯವಾಗಿ 4 ದಿನಗಳ ಹಿಂದೆ ಅಸುನೀಗಿದ್ದ ಶಿರಸಿಯ ವ್ಯಕ್ತಿಗೆ ಸೇರಿದ ಹಾಸಿಗೆ-ಸಾಮಾನುಗಳು ಆತ ಜೀವ ಬಿಟ್ಟಲ್ಲೇ ಬಿದ್ದಿರುವುದು ತೋರಿಸಿದ್ದಾನೆ. ಆತ ಈ ವೀಡಿಯೋ ಶೇರ್ ಮಾಡಿದ ಹತ್ತೇ ನಿಮಿಷದಲ್ಲಿ ವೈರಲ್ ಆಗಿದೆ.

ಅಲ್ಲಿಗೆ ಡೀನ್ ಡಾ|ಗಜಾನನರ ಗ್ಯಾಂಗಿನ ಕರ್ಮಕಾಂಡ ಜಗಜ್ಜಾಹೀರಾಗಿ ಹೋಗಿದೆ. ಇದರಿಂದ ಕಂಗಾಲಾದ ಅವರ ಮರುದಿನವೇ ಗುಣಪಟ್ಟು ಬಿಡುಗಡೆಯಾದ ಸೋಂಕಿತರಿಂದ ಆಸ್ಪತ್ರೆಯಲ್ಲಿ ಅತ್ಯುತ್ತಮ ವ್ಯವಸ್ಥೆಯಿದೆ…. ಹಣ್ಣು.. ಮೊಟ್ಟೆ… ಭರ್ಜರಿ ಊಟ ಕೊಡಲಾಗುತ್ತದೆ.. ವೈದ್ಯರು-ದಾದಿಯರು ಕಾಳಜಿ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ.. ಎಂದೆಲ್ಲಾ ಹೇಳಿಸಿ ವೀಡಿಯೋ ಮಾಡಿಸಿದ್ದಾರೆ. ಈ ವಿಡಿಯೋದಲ್ಲಿ ಬೇಡವೆಂದರೂ ಡಾ| ಗಜಾನನ ಮತ್ತು ಡಾ| ಕುಡ್ತರ್ಕರ್ ಕಾಣಿಸುತ್ತಾರೆ. ಪ್ರತಿದಿನ ಸಂಜೆ ನಾಲ್ಕು ಗಂಟೆಗೆ ತ್ಯಾಜ್ಯ ಹೊರಸಾಗಿಸಲಾಗುತ್ತದೆಂದು ಡಾ| ಗಜಾನನ ಹೇಳಿದ್ದಾರೆ. ಆದರೆ ವಾರ್ಡ್‍ನ ಮೂಲೆ ಮೂಲೆಯಲ್ಲಿ ನಾಲ್ಕೈದು ದಿನ ಸಂಗ್ರಹವಾಗುವಷ್ಟು ತ್ಯಾಜ್ಯ ತುಂಬಿರುವುದು ಅವರು ಹಸೀ ಸುಳ್ಳು ಹೇಳುತ್ತಿದ್ದಾರೆಂಬುದನ್ನು ಸಾಬೀತುಪಡಿಸುತ್ತದೆ.

ಇಷ್ಟಕ್ಕೇ ಅವರ ಹತಾಶೆ-ಆಕ್ರೋಶ ನಿಂತಿಲ್ಲ. ಅವ್ಯವಸ್ಥೆಯ ವಿಡಿಯೋ ಮಾಡಿದ ತರುಣ ಮತ್ತವನಿಗೆ ಸಹಾಯ ಮಾಡಿದ ಸೋಂಕಿತರನ್ನು ಆಸ್ಪತ್ರೆಯ ಬಾಗಿಲಿಗೆ ಕರೆಸಿಕೊಂಡಿದ್ದಾರೆ. ಗಾಜಿನ ಗೋಡೆಯ ಆಚೆ ನಿಂತು ಪಕ್ಕ ರೌಡಿಯಂತೆ ಹಾರಾಡಿ, ಸೋಂಕಿತರೊಂದಿಗೆ ಜಗಳವಾಡಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಕೂಡ ಕ್ಷಣಾರ್ಧದಲ್ಲಿ ವೈರಲ್ ಆಗಿಹೋಗಿದೆ. ಈ ಎಲ್ಲಾ ವಿಡಿಯೋಗಳು, ಫೋಟೋಗಳು ನಮಗೆ ಲಭ್ಯವಾಗಿವೆ. ಈ ಪುರಾವೆಗಳಿಂದ ಡೀನ್ ಸಾಹೇಬರ ‘ಯೋಗ್ಯತೆ’ ಊರಿಗೆಲ್ಲ ಪಕ್ಕ ಆಗಿದೆ!! ಅವರ ಪರವಾಗಿ ಪತ್ರಕರ್ತ ಮಾಧವ ನಾಯ್ಕರೇಕೆ ವಕಾಲತ್ತು ವಹಿಸುತ್ತಿದ್ದಾರೆ ಎಂಬುದೇ ಸೋಜಿಗದ ಸಂಗತಿ.

ವಿಡಿಯೋ ಧೀರ ನಿತಿನ್ ಮಾಧವನಾಯ್ಕ್‍ರ ಜಾತಿ ಬಂಧು. ಆತನ ತಂದೆ ಕಾರವಾರದ ಪ್ರಮುಖ ರಾಜಕಾರಣಿ. ಹೀಗಾಗಿ ನಿತಿನ್‍ಗೆ ಪೂಸಿ ಹೊಡೆಯಬೇಕಾಗಿ ಬಂತು. ಮಾಧವನಾಯ್ಕ್ ನಿನಗೆ ಸಪೋರ್ಟ್ ಮಾಡ್ತೇನೆ ಎಂದು ನಿತಿನ್‍ಗೆ ಹೇಳಿದ್ದಂತೆ ಕಾಣುತ್ತಿದೆ. ಆದರೆ ಅವರೇ ಮರುದಿನ ನಿತಿನ್ ವಿಡಿಯೋ ಮಾಡಿದ್ದು ತಪ್ಪು ಎಂದು ಹೇಳಿಕೆ ಬದಲಾಯಿಸಿದ್ದರು. ಇದರಿಂದ ಕೆರಳಿದ ನಿತಿನ್ ಮಾಧವನಾಯ್ಕ್‍ರಿಗೆ ಫೋನಾಯಿಸಿ “ಇದೆಂಥ ವಿಶ್ವಾಸ ದ್ರೋಹ ಸಾರ್” ಎಂದಿದ್ದಾನೆ. ಕಕ್ಕಾಬಿಕ್ಕಿಯಾದ ಮಾಧವ ಏನೋ ಸಮಜಾಯಿಷಿ ಕೊಟ್ಟಿದ್ದಾರೆ. ನಿತಿನ್ ತನ್ನನ್ನು ನಾಲ್ಕು ದಿನದಿಂದ ಒಬ್ಬೇ ಒಬ್ಬ ಡಾಕ್ಟರ್ ಅಥವಾ ನರ್ಸ್ ಮಾತಾಡಿಸಿಲ್ಲ, ತಾನು ಕೊಳಚೆಯಲ್ಲಿದ್ದೇನೆ ಎಂದಿದ್ದಾನೆ. ಹಾಗಿದ್ದರೆ ಡಾ.ಗಜಾನನರಿಗೆ ಫೋನ್ ಸಂಪರ್ಕ ಮಡುತ್ತೇನೆ ನೀನೇ ಮಾತಾಡು ಎಂದಿದ್ದಾನೆ. ಮೂವರ ನಡುವೆ ಬರೋಬ್ಬರಿ ಮುವ್ವತ್ತಾ ಮೂರುವರೆ ನಿಮಿಷ ಕಾನ್ಫರೆನ್ಸ್ ಸಂಭಾಷಣೆ ನಡೆದಿದೆ.

ನಿತಿನ್‍ನ ಒಂದು ಪ್ರಶ್ನೆಗೂ ಉತ್ತರಿಸಲಾಗದೆ ಡಾ| ಗಜಾನನ ಮತ್ತು ಮಾಧವ ನಾಯ್ಕ್ ತಡವರಿಸಿದ್ದಾರೆ! ಈ ಆಡಿಯೋ ಸಹ ಜಿಲ್ಲೆಯಲ್ಲಿ ಹಿಟ್ ಆಗಿದೆ! ಈ ವಿಡಿಯೋ ಮತ್ತು ಆಡಿಯೋ ವಾರ್ ಜಿಲ್ಲಾಧಿಕಾರಿ ಡಾ| ಹರೀಶ್‍ಕುಮಾರ್ ಮತ್ತು ಶಾಸಕಿ ರೂಪಾಲಿ ನಾಯ್ಕ್ “ಸುಮ್ಮನೆ” ನೋಡಿದ್ದು ಅನೇಕ ಅನುಮಾನ ಮೂಡಿಸಿದೆ. ‘ಕೊರೊನಾ ಸಂಹಾರ ಸೈನ್ಯ’ದ ಸುಪ್ರೀಂ ಕಮಾಂಡರ್ ಆಗಿರುವ ಜಿಲ್ಲಾಧಿಕಾರಿ ಕಿಮ್ಸ್‍ನ ಕರ್ಮಕಾಂಡ ಕಂಡೂ ಕಾಣದಂತಿರುವುದೇಕೆ? ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡ್ತೇನೆಂದು ಭರವಸೆ ನೀಡುವ ಶಾಸಕಿ ರೂಪಾಲಿಯಮ್ಮ ಕೋವಿಡ್ ರೋಗಿಗಳಿಗೆ ಕೊಡಬೇಕಾದ ಮೊಟ್ಟೆ ಸಿಗದಿದ್ದರೂ ಕೇಳುತ್ತಿಲ್ಲ! ಹೀಗಿರುವಾಗ ಅದ್ಹೇಗೆ ಕಿಮ್ಸ್‍ನ ಅವ್ಯವಹಾರ-ಅವಾಂತರ ಪ್ರಶ್ನಿಸಿಯಾರು? ಒಟ್ಟಿನಲ್ಲಿ ಸಾವಿರಾರು ರೂಪಾಯಿ ಅನುದಾನದ ಕಿಮ್ಸ್‍ನ ಕೋವಿಡ್ ವಾರ್ಡ್‍ನಲ್ಲಿ ಬೇಲಿಯೇ ಹೊಲ ಮೇಯುತ್ತಿದೆ.


ಇದನ್ನು ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...