Homeಮುಖಪುಟಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಕಳೆದ ಎಂಟು ತಿಂಗಳಿನಿಂದ ಅನಿಲ ಸೋರಿಕೆ ಸಂತ್ರಸ್ಥರಾದ 4500 ವಿಧವೆಯರಿಗೆ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ.

- Advertisement -
- Advertisement -

ಕಳೆದ ಎಂಟು ತಿಂಗಳಿಂದ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದ್ದರಿಂದ ಸುಮಾರು 4,500 ಭೋಪಾಲ್ ಅನಿಲ ಸೋರಿಕೆಯ ಸಂತ್ರಸ್ಥ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು, ಪ್ರಸ್ತುತ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಮಾರ್ಚ್‌ನಲ್ಲಿ ಅಧಿಕಾರಕ್ಕೆ ಬಂದಿದೆಯಾರೂ ಪರಿಸ್ಥಿತಿ ಬದಲಾಗಿಲ್ಲ ಎನ್ನಲಾಗಿದೆ.

ಸಂತ್ರಸ್ತ ಅನಿಲ ಪೀಡಿತರಿಗೆ ಸಾಮಾಜಿಕ ಪುನರ್ವಸತಿ ಅಡಿಯಲ್ಲಿ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಪ್ರತಿ ತಿಂಗಳು 1,000 ರೂ. ನೀಡಲು, ಈ ಯೋಜನೆಗಾಗಿ ಕೇಂದ್ರ ಸರ್ಕಾರ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2011 ರ ಮೇ ತಿಂಗಳಲ್ಲಿ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ತಮ್ಮ ಪಿಂಚಣಿಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ, ವಿಧವೆಯರ ಒಂದು ಸಣ್ಣ ಗುಂಪು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮನೆಯ ಬಳಿ ಜುಲೈ 17 ರಂದು ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತ್ತು.

ಫೋಟೋ ಕೃಪೆ: ನ್ಯೂಸ್ ಕ್ಲಿಕ್

ವಯಸ್ಸು ಮತ್ತು ಕಾಯಿಲೆಗಳಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಪಿಂಚಣಿ ಮಾತ್ರವೇ ಬದುಕುಳಿಯುವ ಏಕೈಕ ಜೀವಸೆಲೆ ಎಂದು 60 ವರ್ಷದ ಈ ವಿಧವೆಯರು ಹೇಳಿದ್ದಾರೆ.

1984 ರ ಡಿಸೆಂಬರ್ 2-3 ರಂದು ವಿಷಕಾರಿ ಮೀಥೈಲ್ ಐಸೊಸೈನೈಡ್‌ಗೆ ಸೋರಿಕೆಯಾಗಿ ಹೆಚ್ಚಿನ ವಿಧವೆಯರು ರೋಗಗಳಿಂದ ಬಳಲುತ್ತಿದ್ದಾರೆ.

“ನಾನು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಮತ್ತು ದಶಕಗಳಿಂದ ನಿರಂತರ ಚಿಕಿತ್ಸೆಯಲ್ಲಿದ್ದೇನೆ. ನಾನು ಬಟ್ಟೆಗಳನ್ನು ಹೊಲಿಯುತ್ತಿದ್ದೆ, ಆದರೆ ಈಗ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಪಿಂಚಣಿ ಮತ್ತು ಮಾಸಿಕ ಪಡಿತರವು ಬದುಕುಳಿಯುವ ಏಕೈಕ ಆಶಯವಾಗಿದೆ, ಆದರೆ 2019 ರ ಡಿಸೆಂಬರ್‌ನಿಂದ ನನಗೆ ಯಾವುದೇ ಹಣ ಬಂದಿಲ್ಲ” ಎಂದು 65 ವರ್ಷದ ಸಂತ್ರಸ್ತೆ ಸಾವಿತ್ರಿ ಬಾಯಿ ಹೇಳಿದ್ದಾರೆ.

2010 ರಲ್ಲಿ ಸಿಎಂ ಚೌಹಾನ್ ಮತ್ತು 2018 ರಲ್ಲಿ ಅನಿಲ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಸ್ ಸಾರಂಗ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಿಂಚಣಿ ಜೀವಿತಾವಧಿಯವರೆಗೂ ಮುಂದುವರಿಯುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಸ್ಥಗಿತಗೊಳಿಸಲಾಗಿದೆ ಎಂದು 67 ವರ್ಷದ ಇಂದಿರಾ ಹೇಳಿದ್ದಾರೆ.

ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಇದರ ಅಧ್ಯಕ್ಷ, ಬಾಲಕ್ರಿಶನ್ ನಾಮ್ಡಿಯೊ, ಬೀಜೆಪಿ ನೇತೃತ್ವದ ಸರ್ಕಾರ ಕೊರೊನಾ ಸಾಂಕ್ರಮಿಕ್ಕ ಹಣಕಾಸಿನ ನೆರವು ಉಚಿತ ಆಹಾರ ಪೂರೈಸುತ್ತಿರುವಾಗ ಅನಿಲ ಪೀಡಿತ ವಿಧವೆಯರತ್ತ ಗಮನ ಹರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಅನೇಕ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ, ಏಕೆಂದರೆ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವ ಬದಲು ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ” ಎಂದು ನಾಮ್ಡಿಯೊ ಹೇಳಿದ್ದಾರೆ.

“ನಾವು ಸಿಎಂ ಚೌಹಾನ್ ಅವರ ಖಾಸಗಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶರ್ಮಾ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಿಎಂಗೆ ರವಾನಿಸುವುದಾಗಿ ಅವರು ಭರವಸೆ ನೀಡಿದರು” ಎಂದು ಅವರು ಹೇಳಿದ್ದಾರೆ.

2016 ರಿಂದ 2017 ರ ನಡುವೆ, ಇಲಾಖೆಯು ಸುಮಾರು ಒಂದು ವರ್ಷದಿಂದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು, ಆದರೆ ಪ್ರತಿಭಟನೆಯ ನಂತರ ಅದನ್ನು ಪುನರಾರಂಭಿಸಲಾಯಿತು.

ಅನಿಲ ಪರಿಹಾರ ಮತ್ತು ಪುನರ್ವಸತಿ ವಿಭಾಗದ ನಿರ್ದೇಶಕ ಬಸಂತ್ ಕುರ್ರೆ ಅವರನ್ನು ಸಂಪರ್ಕಿಸಿದಾಗ, “ಪಿಂಚಣಿ ಯೋಜನೆಯ ಅವಧಿ ಐದು ವರ್ಷಗಳಾಗಿದೆ. ಆದರೆ ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ಅದರ ಅನುದಾನದ ಹಣ ಮುಗಿದು ಹೋಗಿದೆ” ಎಂದು ಅವರು ಹೇಳಿದರು.

“ನಾವು ಪ್ರಸ್ತಾವನೆಯನ್ನು ಮುಖ್ಯಂತ್ರಿಯ ಅನುಮೋದನೆಗಾಗಿ ಸಿದ್ಧಪಡಿಸಿ ಕಳುಹಿಸುತ್ತೇವೆ. ಮುಖ್ಯಮಂತ್ರಿ ಅದಕ್ಕೆ ಅನುಮೋದನೆ ನೀಡಿ ನಿಧಿಯನ್ನು ಹಂಚಿದರೆ, ನಾವು ಪಿಂಚಣಿಯನ್ನು ಪುನರಾರಂಭಿಸುತ್ತೇವೆ” ಎಂದು ಅವರು ಹೇಳಿದ್ದಾರೆ.


ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ-ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...