Homeಮುಖಪುಟಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಕಳೆದ ಎಂಟು ತಿಂಗಳಿನಿಂದ ಅನಿಲ ಸೋರಿಕೆ ಸಂತ್ರಸ್ಥರಾದ 4500 ವಿಧವೆಯರಿಗೆ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ.

- Advertisement -
- Advertisement -

ಕಳೆದ ಎಂಟು ತಿಂಗಳಿಂದ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದ್ದರಿಂದ ಸುಮಾರು 4,500 ಭೋಪಾಲ್ ಅನಿಲ ಸೋರಿಕೆಯ ಸಂತ್ರಸ್ಥ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು, ಪ್ರಸ್ತುತ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಮಾರ್ಚ್‌ನಲ್ಲಿ ಅಧಿಕಾರಕ್ಕೆ ಬಂದಿದೆಯಾರೂ ಪರಿಸ್ಥಿತಿ ಬದಲಾಗಿಲ್ಲ ಎನ್ನಲಾಗಿದೆ.

ಸಂತ್ರಸ್ತ ಅನಿಲ ಪೀಡಿತರಿಗೆ ಸಾಮಾಜಿಕ ಪುನರ್ವಸತಿ ಅಡಿಯಲ್ಲಿ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಪ್ರತಿ ತಿಂಗಳು 1,000 ರೂ. ನೀಡಲು, ಈ ಯೋಜನೆಗಾಗಿ ಕೇಂದ್ರ ಸರ್ಕಾರ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2011 ರ ಮೇ ತಿಂಗಳಲ್ಲಿ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ತಮ್ಮ ಪಿಂಚಣಿಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ, ವಿಧವೆಯರ ಒಂದು ಸಣ್ಣ ಗುಂಪು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮನೆಯ ಬಳಿ ಜುಲೈ 17 ರಂದು ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತ್ತು.

ಫೋಟೋ ಕೃಪೆ: ನ್ಯೂಸ್ ಕ್ಲಿಕ್

ವಯಸ್ಸು ಮತ್ತು ಕಾಯಿಲೆಗಳಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಪಿಂಚಣಿ ಮಾತ್ರವೇ ಬದುಕುಳಿಯುವ ಏಕೈಕ ಜೀವಸೆಲೆ ಎಂದು 60 ವರ್ಷದ ಈ ವಿಧವೆಯರು ಹೇಳಿದ್ದಾರೆ.

1984 ರ ಡಿಸೆಂಬರ್ 2-3 ರಂದು ವಿಷಕಾರಿ ಮೀಥೈಲ್ ಐಸೊಸೈನೈಡ್‌ಗೆ ಸೋರಿಕೆಯಾಗಿ ಹೆಚ್ಚಿನ ವಿಧವೆಯರು ರೋಗಗಳಿಂದ ಬಳಲುತ್ತಿದ್ದಾರೆ.

“ನಾನು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಮತ್ತು ದಶಕಗಳಿಂದ ನಿರಂತರ ಚಿಕಿತ್ಸೆಯಲ್ಲಿದ್ದೇನೆ. ನಾನು ಬಟ್ಟೆಗಳನ್ನು ಹೊಲಿಯುತ್ತಿದ್ದೆ, ಆದರೆ ಈಗ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಪಿಂಚಣಿ ಮತ್ತು ಮಾಸಿಕ ಪಡಿತರವು ಬದುಕುಳಿಯುವ ಏಕೈಕ ಆಶಯವಾಗಿದೆ, ಆದರೆ 2019 ರ ಡಿಸೆಂಬರ್‌ನಿಂದ ನನಗೆ ಯಾವುದೇ ಹಣ ಬಂದಿಲ್ಲ” ಎಂದು 65 ವರ್ಷದ ಸಂತ್ರಸ್ತೆ ಸಾವಿತ್ರಿ ಬಾಯಿ ಹೇಳಿದ್ದಾರೆ.

2010 ರಲ್ಲಿ ಸಿಎಂ ಚೌಹಾನ್ ಮತ್ತು 2018 ರಲ್ಲಿ ಅನಿಲ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಸ್ ಸಾರಂಗ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಿಂಚಣಿ ಜೀವಿತಾವಧಿಯವರೆಗೂ ಮುಂದುವರಿಯುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಸ್ಥಗಿತಗೊಳಿಸಲಾಗಿದೆ ಎಂದು 67 ವರ್ಷದ ಇಂದಿರಾ ಹೇಳಿದ್ದಾರೆ.

ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಇದರ ಅಧ್ಯಕ್ಷ, ಬಾಲಕ್ರಿಶನ್ ನಾಮ್ಡಿಯೊ, ಬೀಜೆಪಿ ನೇತೃತ್ವದ ಸರ್ಕಾರ ಕೊರೊನಾ ಸಾಂಕ್ರಮಿಕ್ಕ ಹಣಕಾಸಿನ ನೆರವು ಉಚಿತ ಆಹಾರ ಪೂರೈಸುತ್ತಿರುವಾಗ ಅನಿಲ ಪೀಡಿತ ವಿಧವೆಯರತ್ತ ಗಮನ ಹರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಅನೇಕ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ, ಏಕೆಂದರೆ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವ ಬದಲು ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ” ಎಂದು ನಾಮ್ಡಿಯೊ ಹೇಳಿದ್ದಾರೆ.

“ನಾವು ಸಿಎಂ ಚೌಹಾನ್ ಅವರ ಖಾಸಗಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶರ್ಮಾ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಿಎಂಗೆ ರವಾನಿಸುವುದಾಗಿ ಅವರು ಭರವಸೆ ನೀಡಿದರು” ಎಂದು ಅವರು ಹೇಳಿದ್ದಾರೆ.

2016 ರಿಂದ 2017 ರ ನಡುವೆ, ಇಲಾಖೆಯು ಸುಮಾರು ಒಂದು ವರ್ಷದಿಂದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು, ಆದರೆ ಪ್ರತಿಭಟನೆಯ ನಂತರ ಅದನ್ನು ಪುನರಾರಂಭಿಸಲಾಯಿತು.

ಅನಿಲ ಪರಿಹಾರ ಮತ್ತು ಪುನರ್ವಸತಿ ವಿಭಾಗದ ನಿರ್ದೇಶಕ ಬಸಂತ್ ಕುರ್ರೆ ಅವರನ್ನು ಸಂಪರ್ಕಿಸಿದಾಗ, “ಪಿಂಚಣಿ ಯೋಜನೆಯ ಅವಧಿ ಐದು ವರ್ಷಗಳಾಗಿದೆ. ಆದರೆ ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ಅದರ ಅನುದಾನದ ಹಣ ಮುಗಿದು ಹೋಗಿದೆ” ಎಂದು ಅವರು ಹೇಳಿದರು.

“ನಾವು ಪ್ರಸ್ತಾವನೆಯನ್ನು ಮುಖ್ಯಂತ್ರಿಯ ಅನುಮೋದನೆಗಾಗಿ ಸಿದ್ಧಪಡಿಸಿ ಕಳುಹಿಸುತ್ತೇವೆ. ಮುಖ್ಯಮಂತ್ರಿ ಅದಕ್ಕೆ ಅನುಮೋದನೆ ನೀಡಿ ನಿಧಿಯನ್ನು ಹಂಚಿದರೆ, ನಾವು ಪಿಂಚಣಿಯನ್ನು ಪುನರಾರಂಭಿಸುತ್ತೇವೆ” ಎಂದು ಅವರು ಹೇಳಿದ್ದಾರೆ.


ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ-ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...