Homeಕರ್ನಾಟಕಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ

ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ

- Advertisement -
- Advertisement -

 

ಕಾಂಗ್ರೆಸ್ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಕಾರಣಕರ್ತರು ಎನ್ನಲಾಗಿದ್ದ ಎಚ್‌. ವಿಶ್ವನಾಥ್ ಹಾಗೂ ಸಿ. ಪಿ. ಯೊಗೇಶ್ವರ್ ಸೇರಿದಂತೆ ಐವರನ್ನು ವಿಧಾನ ಪರಿಷತ್ತಿಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದೆ.

ರಾಜ್ಯ ಸರ್ಕಾರದ ಈ ಶಿಫಾರಸ್ಸಿಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ.‌ ಸಿನಿಮಾ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್, ಸಾಹಿತ್ಯ ಕ್ಷೇತ್ರದಿಂದ ವಿಶ್ವನಾಥ್, ಸಮಾಜ ಸೇವಾ ಕ್ಷೇತ್ರದಿಂದ ಭಾರತಿ ಶೆಟ್ಟಿ, ಬುಡಕಟ್ಟು ಕ್ಷೇತ್ರದಿಂದ ಶಾಂತಾರಾಮ್ ಸಿದ್ದಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಡಾ.ತಳವಾರ್ ಸಾಬಣ್ಣ ಅವರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ.

ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪನವರ ಸೂಚನೆಯಂತೆ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್, ಸಿ.ಪಿ. ಯೋಗೇಶ್ವರ್ ಅವರನ್ನು ಬಿಜೆಪಿ ಕೈಮಾಂಡ್​​​ ಪರಿಷತ್​​ಗೆ ನಾಮನಿರ್ದೇಶನ ಮಾಡಿದೆ ಎನ್ನಲಾಗಿದೆ.

2018ರ ಸಾರ್ವತ್ರಿಕ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರಕಾರದ ಪತನದ ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದರು.

ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್. ವಿಶ್ವನಾಥ್ ಪರಾಭವಗೊಂಡಿದ್ದರು. ಈಗ ವಿಧಾನಪರಿಷತ್ ಪ್ರವೇಶಿಸುವ ಮೂಲಕ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ರಾಜ್ಯಪಾಲ ವಜುಭಾಯಿ ಮೊದಲಿಗೆ ಭಾರತೀ ಶೆಟ್ಟಿ, ಸಿ. ಪಿ. ಯೋಗೀಶ್ವರ್  ಹಾಗೂ ಎಚ್. ವಿಶ್ವನಾಥ್ ನೇಮಕಕ್ಕೆ ಅನುಮೋದನೆ ನೀಡಲು ಒಪ್ಪಿಗೆ ನೀಡಿರಲಿಲ್ಲ ಎನ್ನಲಾಗಿದ್ದು, ನಂತರ ಇಂದು ಬೆಳಿಗ್ಗೆ ರಾಜಭವನಕ್ಕೆ ಭೇಟಿನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರ ಜೊತೆ ಚೆರ್ಚಿಸಿ ರಾಜಕೀಯ ವ್ಯಕ್ತಿಗಳ ನೇಮಕಕ್ಕೂ ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

ರಾಜ್ಯದ ವಿಧಾನಪರಿಷತ್​ನಲ್ಲಿ ಒಟ್ಟು 11 ಸ್ಥಾನಗಳನ್ನ ರಾಜ್ಯಪಾಲರೇ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಪ್ರಸ್ತುತ ಐದು ಸ್ಥಾನಗಳು ಖಾಲಿ ಇದ್ದವು.


ಓದಿ: ರಾಜ್ಯಸಭೆ ಚುನಾವಣೆ: ಬಿಜೆಪಿ ಬೇಗುದಿ, ಕಾಂಗ್ರೆಸ್ ಒಳಾಟ ಮತ್ತು ಜೆಡಿಎಸ್‍ನಲ್ಲಿ ಎಲ್ಲವೂ ಮಾಮೂಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...