Homeಮುಖಪುಟಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ, ಅದಕ್ಕಾಗಿ ತನಿಖೆ: ಭೂಷಣ್ ಪರ ನಿಂತ ಸಾಮಾಜಿಕ ಕಾರ್ಯಕರ್ತರು

ಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ, ಅದಕ್ಕಾಗಿ ತನಿಖೆ: ಭೂಷಣ್ ಪರ ನಿಂತ ಸಾಮಾಜಿಕ ಕಾರ್ಯಕರ್ತರು

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ. ಹಾಗಾಗಿ ಅವರ ಮೇಲೆ ಸುಪ್ರೀಂ ಕೋರ್ಟ್‌ ತನಿಖೆ ನಡೆಸುತ್ತಿದೆ ಎಂದು ದೇಶದ ಹಲವಾರು ಚಿಂತಕರು ಆರೋಪಿಸಿದ್ದಾರೆ.

ನ್ಯಾಯಾಂಗ ನಿಂದನೆ ಆರೋಪದಲ್ಲಿ ಪ್ರಶಾಂತ್ ಭೂಷಣ್ ಮತ್ತು ಟ್ವಿಟ್ಟರ್ ಇಂಡಿಯಾದ ಮೇಲೆ ಸ್ವಯಂ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್‌‌ನ ಕ್ರಮಕ್ಕೆ ದೇಶದ ಹಲವು ಚಿಂತಕರು, ಹೋರಾಟಗಾರರು, ರಾಜಕಾರಣಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾವಿರಾರು ಸಾಮಾಜಿಕ ಕಾರ್ಯಕರ್ತರು ನಿನ್ನೆ I Stand With Prashant Bhushan ಎಂಬ ಹ್ಯಾಸ್ ಟ್ಯಾಗ್ ಬಳಸಿ ಸುಪ್ರೀಂ ಕೋರ್ಟ್‌‌ನ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಪ್ರಶಾಂತ್ ಭೂಷಣ್‌ರವರ ಪರ ಐಕ್ಯಮತ್ಯ ಪ್ರದರ್ಶಿಸಿದ್ದಾರೆ.

ಸ್ವರಾಂಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಸರಣಿ ಟ್ವೀಟ್‌ಗಳನ್ನು ಮಾಡಿ, ಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ. ಹಾಗಾಗಿ ಅವರನ್ನು ಗುರಿ ಮಾಡಲಾಗುತ್ತಿದೆ ಎಂದು ಪ್ರಶಾಂತ್ ಭೂಷಣ್‌ರವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದಾರೆ.

ಈ ದೇಶದಲ್ಲಿ ಸಾವಿರಾರು ಕೋಮುಗಲಭೆಗಳಿಗೆ, ಸಾವುನೋವುಗಳಿಗೆ ಕಾರಣವಾದ ಪ್ರಚೋದನಾಕಾರಿ ಭಾಷಣಗಳು, ಸಂದೇಶಗಳನ್ನು ಸುಪ್ರೀಂ ಕೋರ್ಟ್‌ ನಿರ್ಲಕ್ಷಿಸಿದೆ. ಆದರೆ ಜನಪರ ಚಿಂತಕ ಪ್ರಶಾಂತ್ ಭೂಷಣ್‌ರವರ ಮೇಲೆ ತನಿಖೆ ನಡೆಸುತ್ತಿದೆ. ನ್ಯಾಯಾಂಗ ಎಂದೂ ಪಕ್ಷಪಾತಿಯಾಗಬಾರದೆಂದು ನಾವು ಭಾರತೀಯರು ಸಂಘಟನೆ ಟ್ವೀಟ್ ಮಾಡಿದೆ.

ನ್ಯಾಯಾಂಗವೂ ವಿಮರ್ಶೆಗೆ ಅತೀತವಲ್ಲ. ಎಲ್ಲಕ್ಕೂ ಮಿಗಿಲು ನಮ್ಮ ಸಂವಿಧಾನ. ಆಳುವ ಶಕ್ತಿಗಳನ್ನು ಪ್ರಶ್ನಿಸುವ ಹಕ್ಕನ್ನು ಅದು ನೀಡಿದೆ ಎಂದು ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರನ್ನು ದ್ವೇಷಿಸುತ್ತದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಅವರನ್ನು ದ್ವೇಷಿಸುತ್ತದೆ. ಅಧಿಕಾರದಲ್ಲಿರುವವರು ಅವರನ್ನು ದ್ವೇಷಿಸುವಂತೆ ಅವರು ಮಾಡುವುದಾದರೂ ಏನನ್ನು? ಅವರು ಬಡವರು ಮತ್ತು ದನಿಯಿಲ್ಲದವರ ಪರವಾಗಿ ಅಧಿಕಾರವನ್ನು ನಿರ್ಭೀತಿಯಿಂದ ಪ್ರಶ್ನಿಸುತ್ತಾರೆ ಎಂದು ಅವಿಕ್ ಶಾ ಹೇಳಿದ್ದಾರೆ.


ಇದನ್ನೂ ಓದಿ; ಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...