Homeಮುಖಪುಟಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಚಾರಣೆಗೂ ಮುನ್ನ ಅಡ್ವಾಣಿಯನ್ನು ಭೇಟಿಯಾದ ಶಾ

ಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಚಾರಣೆಗೂ ಮುನ್ನ ಅಡ್ವಾಣಿಯನ್ನು ಭೇಟಿಯಾದ ಶಾ

ಅಡ್ವಾಣಿಯನ್ನು ಅಮಿತ್‌ ಷಾ ಭೇಟಿಯಾದಾಗ ಅವರೊಂದಿಗೆ ಸರ್ಕಾರಿ ವಕೀಲರು ಇದ್ದರು ಎಂದು ಸುದ್ದಿ ಸಂಸ್ಥೆ ತಿಳಿಸಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಬಿಜೆಪಿಯ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿಯನ್ನು ಭೇಟಿಯಾಗಿದ್ದಾರೆ, ಅಡ್ವಾಣಿ ಜುಲೈ 24 ಶುಕ್ರವಾರ ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

92 ವರ್ಷದ ಅಡ್ವಾಣಿಯನ್ನು ಅವರ ನಿವಾಸದಲ್ಲಿ ಅಮಿತ್ ಷಾ ಭೇಟಿಯಾದಾಗ ಅವರೊಂದಿಗೆ ಸರ್ಕಾರಿ ವಕೀಲರು ಇದ್ದರು ಎಂದು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯನ್ನು 1992 ರ ಡಿಸೆಂಬರ್ 6 ರಂದು ಹಿಂದು ಉಗ್ರಗಾಮಿಗಳು ಕೆಡವಿ ಹಾಕಿದ್ದರು.

ಬಿಜೆಪಿ ಮುಖಂಡರಾದ ಅಡ್ವಾಣಿ, ಉಮಾ ಭಾರತಿ ಮತ್ತು ಮುರುಳಿ ಮನೋಹರ್ ಜೋಶಿಯವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ವಿಶೇಷ ನ್ಯಾಯಾಧೀಶ ಎಸ್. ಕೆ. ಯಾದವ್ ಗುರುವಾರ ಮುರುಳಿ ಮನೋಹರ್‌ ಜೋಶಿ ಹೇಳಿಕೆಯನ್ನು ದಾಖಲಿಸಲಿದ್ದಾರೆ.

ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದ ವಿಚಾರಣೆಯನ್ನು ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಜುಲೈನಲ್ಲಿ ಹೇಳಿತ್ತು. ಆದಾಗ್ಯೂ, ಮೇ 8 ರಂದು ವಿಚಾರಣಾ ನ್ಯಾಯಾಲಯವು ತನ್ನ ತೀರ್ಪನ್ನು ಆಗಸ್ಟ್ 31 ರವರೆಗೆ ಘೋಷಿಸಲು ಗಡುವನ್ನು ವಿಸ್ತರಿಸಿದೆ.

ಏಪ್ರಿಲ್ 19, 2017 ರಂದು, ಉನ್ನತ ನ್ಯಾಯಾಲಯವು ಈ ಪ್ರಕರಣದಲ್ಲಿ ದಿನನಿತ್ಯದ ವಿಚಾರಣೆಗೆ ಆದೇಶಿಸಿತ್ತು. ಅದನ್ನು ಎರಡು ವರ್ಷಗಳಲ್ಲಿ ತೀರ್ಮಾನಿಸಬೇಕು ಎಂದು ಹೇಳಲಾಗಿತ್ತು. ಅಡ್ವಾಣಿ, ಜೋಶಿ, ವಿನಯ್ ಕಟಿಯಾರ್, ರಿತಂಬರ ಮತ್ತು ವಿಷ್ಣು ಹರಿ ದಾಲ್ಮಿಯಾ ವಿರುದ್ಧ ದಾಖಲಾದ ಕ್ರಿಮಿನಲ್ ಪಿತೂರಿ ಆರೋಪಗಳನ್ನು ನ್ಯಾಯಾಲಯವು ಮತ್ತೆ ವಿಚಾರಣೆಗೆ ತೆಗೆದುಕೊಂಡಿತು.

ಪ್ರಕರಣದಲ್ಲಿ ಈ ಹಿಂದೆ ಖುಲಾಸೆಗೊಂಡಿದ್ದ ಹಲವಾರು ಇತರ ಹಿಂದುತ್ವ ನಾಯಕರ ವಿರುದ್ಧದ ಆರೋಪಗಳನ್ನೂ ಸಹ ವಿಚಾರಣೆಗೆ ತೆಗೆದುಕೊಂಡಿತು. ಇತರ ಮೂವರು ಆರೋಪಿಗಳಾದ ಗಿರಿರಾಜ್ ಕಿಶೋರ್, ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮತ್ತು ವಿಷ್ಣು ಹರಿ ದಾಲ್ಮಿಯಾ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದರು ಹಾಗಾಗಿ ಅವರ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸಲಾಯಿತು.

ನವೆಂಬರ್‌ನಲ್ಲಿ ನೀಡಿದ ಮಹತ್ವದ ತೀರ್ಪಿನಲ್ಲಿ, ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಭೂಮಿಯನ್ನು ರಾಮ ಮಂದಿರ ನಿರ್ಮಾಣಕ್ಕಾಗಿ ಸರ್ಕಾರ ನಡೆಸುವ ಟ್ರಸ್ಟ್‌ಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಬಾಬರಿ ಮಸೀದಿ ನೆಲಸಮ ಮಾಡಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಹೇಳಿದ್ದು, ಮಸೀದಿ ನಿರ್ಮಿಸಲು ಪರ್ಯಾಯ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅಯೋಧ್ಯೆಯ ರಾಮ ದೇವಾಲಯದ ಅಡಿಪಾಯ ಹಾಕುವ ಸಮಾರಂಭ ಆಗಸ್ಟ್ 5 ರಂದು ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ. ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...