Homeಮುಖಪುಟಓಟಿಟಿಯಲ್ಲಿ ಬಿಡುಗಡೆಯಾದ ‘ಲಾ’ ಸೃಷ್ಟಿಸಿದ ಚರ್ಚೆಗಳ ಸುತ್ತ...!

ಓಟಿಟಿಯಲ್ಲಿ ಬಿಡುಗಡೆಯಾದ ‘ಲಾ’ ಸೃಷ್ಟಿಸಿದ ಚರ್ಚೆಗಳ ಸುತ್ತ…!

- Advertisement -
- Advertisement -

ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ನಿರ್ಮಾಣದ ‘ಲಾ’ ಸಿನಿಮಾ ಕಳೆದವಾರವಷ್ಟೇ ಓಟಿಟಿ (ಓವರ್ ದ ಟಾಪ್) ಪ್ಲಾಟ್‌ಫಾರ್ಮ್ನಲ್ಲಿ ರಿಲೀಸ್ ಅಗಿದೆ. ಓಟಿಟಿಯಲ್ಲಿ ಬಿಡುಗಡೆಯಾದ ಕನ್ನಡದ ಮೊದಲ ಸಿನಿಮಾಗಳಲ್ಲಿ ಇದೂ ಒಂದು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. (ಹಿಂದೆ ಆದರ್ಶ್ ಈಶ್ವರಪ್ಪ ನಿರ್ದೇಶನದ ಭಿನ್ನ ಕೂಡ ಓಟಿಟಿಯಲ್ಲಿ ಬಿಡುಗಡೆಯಾಗಿ ಸದ್ದು ಮಾಡಿತ್ತು). ಈಗ ‘ಲಾ’ ಸಿನಿಮಾ ಅಮೆಜಾನ್  ಪ್ರೈಂನಲ್ಲಿ ಬಿಡುಗಡೆಯಾದ ಮೇಲೆ ಎರಡು ರೀತಿಯ ಚರ್ಚೆಯನ್ನು ಹುಟ್ಟುಹಾಕಿದೆ.

ಒಂದು, ಈ ಸಿನಿಮಾ ಚಿತ್ರಿಸಿರುವ ಕತೆಯ ಚಿತ್ರಣದ ಅಂಕುಡೊಂಕುಗಳಿಂದಾಗಿ, ಥಿಯೇಟರ್‌ಗಳಲ್ಲಿ ಹಣ ಮಾಡಲಾಗದ ಇಂತಹ ಸಿನಿಮಾಗಷ್ಟೇ ಓಟಿಟಿ ಪ್ಲಾಟ್‌ಫಾರ್ಮ್ನಲ್ಲಿ ರಿಲೀಸ್ ಆಗುತ್ತವೆ ಅನ್ನುವುದು.. ಮತ್ತೊಂದು, ಸಿನಿಮಾಗಳನ್ನು ಓಟಿಟಿಗಳಲ್ಲಿ ನೋಡುವುದು ನಿರ್ದೇಶಕರಿಗೆ ಮಾಡುವ ಅವಮಾನ ಎಂಬಂತಹ ಭ್ರಮೆ..

ಮೊನ್ನೆ ಮೊನ್ನೆಯಷ್ಟೇ ಆರಂಭಗೊಂಡ ಎಫ್‌ಯುಸಿ (ಫಿಲ್ಮ್ಮೇರ‍್ಸ್ ಯುನೈಟೆಡ್ ಕ್ಲಬ್) ಎಂಬ ತಂಡ ತಮ್ಮ ವೆಬ್‌ಸೈಟ್‌ನಲ್ಲಿ ಅಂಕಣವೊಂದನ್ನು ಪ್ರಕಟಿಸಿದೆ. ಜನರು ಓಟಿಟಿಗಳಲ್ಲಿ ಸಿನಿಮಾ ನೋಡುವುದರ ಬಗ್ಗೆ ಆ ಅಂಕಣ ಪ್ರಶ್ನೆ ಎತ್ತಿದೆ. ಮನೆಯಲ್ಲಿ ಕುಳಿತು ಸಿನಿಮಾ ನೋಡುವುದರಿಂದಾಗುವ ಸಮಸ್ಯೆಗಳ ಜೊತೆಗೆ, ಸಿನಿಮಾಗಳನ್ನು ಓಟಿಟಿಯಲ್ಲಿ ನೋಡುವುದೇ ನಿರ್ದೇಶಕರಿಗೆ ಮಾಡುವ ಅವಮಾನವೆಂದು ಹೇಳಿದೆ.

ಹಾಗೆ ನೋಡಿದರೆ, ವಿಶ್ವದ ಮೂಲೆಮೂಲೆಗೂ ಸಿನಿಮಾಗಳಿಗೆ ಹೆದ್ದಾರಿ ಮಾಡಿಕೊಡುವ ಓಟಿಟಿಯ ಹಾದಿಗೆ ಕನ್ನಡ ಚಿತ್ರರಂಗ ಈಗಷ್ಟೇ ಕಾಲ್ನಡಿಗೆಯ ಹಾದಿಯನ್ನು ಹುಡುಕುತ್ತಿದೆ. ಹಲವು ವರ್ಷಗಳಿಂದ ಚಾಲ್ತಿಯಲ್ಲಿರುವ ಓಟಿಟಿಗಳಲ್ಲಿ ಕನ್ನಡ ಚಿತ್ರಗಳಿಗೆ ಇತ್ತೀಚೆಗಷ್ಟೇ ಅವಕಾಶಗಳು ಸಿಗುತ್ತಿವೆ. ಆಗಲೇ ಅದರ ವಿರುದ್ಧ ಅಭಿಪ್ರಾಯ ಮೂಡಿಸುವ ಹೊಸ ತಂತ್ರವೂ ಹೆಣೆದುಕೊಳ್ಳುತ್ತಿದೆ.

ಇಡೀ ಜಗತ್ತೇ ಡಬ್ಬಿಂಗ್‌ಗೆ ಓಕೆ ಎಂದಿದ್ದ ಸಂದರ್ಭದಲ್ಲಿಯೂ ಸ್ಯಾಂಡಲ್‌ವುಡ್‌ನ ಕೆಲವರದ್ದು ಇಂತದ್ದೇ ತಗಾದೆ ಇತ್ತು. ಅದೆಲ್ಲವನ್ನು ಬದಿಗೊತ್ತಿ, ಈಗ ಡಬ್ಬಿಂಗ್ ದುನಿಯಾ ಕನ್ನಡ ಚಿತ್ರರಂಗದಲ್ಲಿ ಪಸರಿಸುತ್ತಿದೆ. ಅಂತೆಯೇ ಓಟಿಟಿಯೂ ಈಗಷ್ಟೇ ಕನ್ನಡದಲ್ಲಿ ಚಿಗುರೊಡೆಯಲಾರಂಭಿಸಿದೆ.

‘ಕನ್ನಡ ಚಿತ್ರರಂಗದಲ್ಲಿ ಓಟಿಟಿಗೆ ನೆಲೆಯಿಲ್ಲ – ಓಟಿಟಿಯಲ್ಲಿ ಕನ್ನಡ ಚಿತ್ರಗಳಿಗೂ ಸ್ಥಾನ ಉಳಿಯುವುದಿಲ್ಲ’ ಇದು ಸದ್ಯಕ್ಕೆ ಕನ್ನಡ ಚಿತ್ರರಂಗದ ಯಥಾಸ್ಥಿತಿವಾದಿಗಳ ಅಭಿಪ್ರಾಯ. ಇದಕ್ಕೆ ಹೌದು ಎಂಬಂತೆ, ಕನ್ನಡದಲ್ಲಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲಿಯೇ ಯಾವ ಸ್ಟಾರ್ ನಟನ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲಿ ರಿಲೀಸ್ ಮಾಡಲು ಪ್ರೊಡ್ಯೂಸರ್‌ಗಳು, ಸ್ಟಾರ್ ಆಕ್ಟರ್‌ಗಳೂ ಮುಂದೆ ಬರುತ್ತಿಲ್ಲ. ಬಿಗ್ ಬಜೆಟ್‌ನ ಸಿನಿಮಾಗಳು ಓಟಿಟಿಯಲ್ಲಿ ಬಿಡುಗಡೆಯಾದರೆ ಹಾಕಿರುವ ಬಂಡವಾಳವನ್ನು ಲಾಭದ ಸಮೇತ ವಾಪಸ್ ಕೊಡುತ್ತವೆ ಎಂಬ ಭರವಸೆ ಯಾರಿಗೂ ಇಲ್ಲ. ಸದ್ಯಕ್ಕೆ ಅದು ಸತ್ಯವೂ ಹೌದು.

ಕಾರಣ, ಓಟಿಟಿ ವೇದಿಕೆಗಳು ಭಾರತೀಯರಿಗೆ ಹೆಚ್ಚಾಗಿ ಪರಿಚಿತವಾಗಿಲ್ಲ. ಬಹುಸಂಖ್ಯಾತ ಜನರನ್ನು ಓಟಿಟಿ ಇನ್ನೂ ರೀಚ್ ಆಗಿಲ್ಲ. ಅಲ್ಲದೆ, ಥಿಯೇಟರ್‌ಗಳಲ್ಲಿ ಸಿನಿಮಾ ನೋಡುವ ಜನರ  ಕ್ರೇಜ್ ಓಟಿಟಿ ಎಡೆಗೆ ಇನ್ನೂ ತಿರುಗಿದಂತೆ ಕಾಣುತ್ತಿಲ್ಲ. ಹಾಗೆಂದ ಮಾತ್ರಕ್ಕೆ ಓಟಿಟಿ ಕೇವಲ ಕಡಿಮೆ ಬಜೆಟ್‌ನ ಹಾಗೂ ಡಬ್ಬಾ ಸಿನಿಮಾಗಳಿಗಷ್ಟೇ ಸೀಮಿತವೂ ಆಗಿಲ್ಲ. ಹಾಲಿವುಡ್‌ನ ಜನಪ್ರಿಯ ಸಿನಿಮಾಗಳೂ ಕೂಡ ಓಟಿಟಿಯಲ್ಲಿ ರಿಲೀಸ್ ಆಗುತ್ತಿವೆ. ಅಂತಹ ಸಿನಿಮಾಗಳಲ್ಲಿ ಸ್ನೈಡರ್ ಕಟ್ ಕೂಡ ಒಂದು. ಈ ಸಿನಿಮಾದ  ಟ್ರೈಲರ್ ಯೂಟ್ಯೂಬ್ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದು, ಸದ್ಯದಲ್ಲೇ ಬಿಡುಗಡೆಗೆ
ರೆಡಿಯಾಗಿದೆ.

ಸಿನಿಮಾ ನೋಡುವಾಗ ಥಿಯೇಟರ್‌ಗಳಲ್ಲಿ ಸಿಗುವ ಮಜಾ ಓಟಿಟಿಯಲ್ಲಿ ಸಿಗುವುದಿಲ್ಲ ಎನ್ನುವ ಮಾತೂ ಇದೆ. ಜೋಷ್ ಇರುವುದಿಲ್ಲ. ಸಿನಿಮಾಗಳನ್ನು ಸಮೂಹದಲ್ಲಿ ನೋಡುವ ಆನಂದವೇ ಬೇರೆ ರೀತಿಯದ್ದು. ಸಿನಿಮಾ ಮುಗಿದು ಥಿಯೇಟರ್‌ನಿಂದ ಹೊರಬರುವಾಗ ಎಂಥದ್ದೂ ಒಂದು ಫೀಲ್ ಮನಸ್ಸಲ್ಲಿ ಮೂಡುತ್ತದೆ. ಅಂತಹ ಫೀಲ್ ಓಟಿಟಿಯಲ್ಲಿ ಹುಟ್ಟಲಾರದು ಎಂಬ ಮಾತುಗಳು. ಆದರೆ, ಸದ್ಯ ಓಟಿಟಿಯಲ್ಲಿ ಸಿಗುತ್ತಿರುವ ಕಂಟೆಂಟ್ (ಗುಣಮಟ್ಟ ಹಾಗೂ ಅದು ಲಭ್ಯವಿರುವ ಮಾದರಿ) ಥಿಯೇಟರ್‌ಗಳಲ್ಲಿ ಸಿಗುತ್ತಿಲ್ಲ ಎಂಬುದು ಅಷ್ಟೇ ಸತ್ಯ.

ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಂನಂತಹ ಜಗತ್ತಿನಾದ್ಯಂತ ಹರಡಿರುವ ಓಟಿಟಿ ಪ್ಲಾಟ್‌ಫಾರ್ಮ್ಗಳಲ್ಲಿ ಈಗಷ್ಟೆ ಕನ್ನಡ ಸಿನಿಮಾಗಳಿಗೆ ಸ್ಥಾನ ಸಿಗುತ್ತಿದೆ. ಕನ್ನಡ ಸಿನಿಮಾಗಳು ಎಲ್ಲೆಡೆ ಹರಡುವ ಅವಕಾಶವನ್ನೂ ಉಂಟು ಮಾಡಿದೆ. ಆದರೆ, ಕನ್ನಡ ಚಿತ್ರರಂಗವೇ ಇದಕ್ಕೆ ಇನ್ನೂ ಸಿದ್ದವಾಗಿಲ್ಲ.

ಇದೆಲ್ಲದರ ನಡುವೆ, ಓಕೆ (ಓನ್ಲೀ ಕನ್ನಡ) ಎಂಬ ಕನ್ನಡ ಸಿನಿಮಾಗಳಿಗಷ್ಟೇ ಸೀಮಿತವಾದ ಹೊಸ ಓಟಿಟಿ ಪ್ಲಾಟ್‌ಫಾರ್ಮ್ ಕೂಡ ಆರಂಭವಾಗುತ್ತಿದೆ. ಕನ್ನಡದ ನಾಟಕ, ಸಿನಿಮಾ, ವೆಬ್ ಸೀರಿಸ್‌ಗಳ ನಿರ್ಮಾಣ ಮತ್ತು ಬಿಡುಗಡೆಗಾಗಿ ಇದು ಆರಂಭಗೊಳ್ಳುತ್ತಿದೆ. ಕನ್ನಡದಲ್ಲಿ ಹೊಸದೊಂದು ಪ್ಲಾಟ್‌ಫಾರ್ಮ್ ಕ್ರಿಯೇಟ್ ಮಾಡುವ ಸದಭಿರುಚಿಯೊಂದಿಗೆ ಪ್ರಯೋಗ್ ಸ್ಟುಡಿಯೂ ಮತ್ತು ಮಯೂರ್ ಮೋಷನ್ ಪಿಕ್ರ‍್ಸ್ ಇದಕ್ಕೆ ಮುಂದಾಗಿವೆ.

ಸದ್ಯದ ಪರಿಸ್ಥಿತಿಯಲ್ಲಿ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್ಗಳು, ಮಾಲ್‌ಗಳು ಮುಚ್ಚಿರುವುದರಿಂದಾಗಿ ಒಂದಷ್ಟು ಪ್ರಮಾಣದ ಜನರು ಓಟಿಟಿಗಳ ಮೊರೆ ಹೋಗಿದ್ದಾರೆ. ಅದು ಹೀಗೆಯೇ ಇರಲಾರದು. ಹೆಚ್ಚು ಬಂಡವಾಳ ಹಾಕಿ ನಿರ್ಮಾಣ ಮಾಡಿದ ಸಿನಿಮಾಗಳು ಥಿಯೇಟರ್‌ನಲ್ಲಿ ರಿಲೀಸ್ ಅಗಿಯೇ ಬಂಡವಾಳವನ್ನು ಮರಳಿ ತರುವಲ್ಲಿ ಪೈಪೋಟಿ ಎದುರಿಸುತ್ತಿವೆ. ಹೀಗಿರುವಾಗ ಓಟಿಟಿಗಳು ಸಿನಿಮಾಗೆ ಸುರಿದ ಬಂಡವಾಳವನ್ನು ವಾಪಸ್ ನೀಡಬಲ್ಲವೇ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಈ ದೆಸೆಯಲ್ಲಿ ಓಟಿಟಿ ಕಂಪ್ಲೀಟ್ಲಿ ಕಡ್ಳೆಪುರಿ ವ್ಯಾಪಾರವಿದ್ದಂತೆ, ಅದಕ್ಕೆ ಎಂದೂ ಭವಿಷ್ಯವಿಲ್ಲ ಎಂಬುದು ಸದ್ಯಕ್ಕೆ ಕನ್ನಡ ಸಿನಿಮಾ ರಂಗದ ಅಭಿಪ್ರಾಯ.

ಆದರೆ, ಡಿಜಿಟೈಸ್ ಆಗುತ್ತಿರುವ ಜನರು ಓಟಿಟಿಗಳೆಡೆಗೆ ಮುಖ ಮಾಡಿದ್ದಾರೆ. ಮುಂದಿನ ಸಿನಿಮಾಗಳ ಭವಿಷ್ಯ ಓಟಿಟಿಯೇ ಎಂಬುದು ಡಿಜಿಟಲ್ ಕ್ಷೇತ್ರದವರ ಅಭಿಪ್ರಾಯ.
ಇದೆಲ್ಲದರ ನಡುವೆ, ಓಟಿಟಿಯಲ್ಲಿ ರಿಲೀಸ್ ಆದ ‘ಲಾ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಓಟಿಟಿ ಬಗೆಗೆ ಒಂದು ನೆಗೆಟಿವ್ ಅಪ್ರೋಚ್ ಕಟ್ಟಿಕೊಟ್ಟಿದೆ. ನಿರೀಕ್ಷಿತ ಗುಣಮಟ್ಟದಲ್ಲಿ ಸಿನಿಮಾ ಮೂಡದೆ ಇದ್ದದ್ದೂ ಕಾರಣ ಇರಬಹುದು. ಏನೇ ಇರಿಲಿ, ಕನ್ನಡದ ಮಟ್ಟಿಗೆ ಓಟಿಟಿ ಹವಾ ಈಗಷ್ಟೇ ಹಬ್ಬುತ್ತಿದೆ. ಕನ್ನಡ ಸಿನಿಮಾ ಮತ್ತು ಕನ್ನಡದಲ್ಲಿ ಓಟಿಟಿಯ ಭವಿಷ್ಯ ಏನಾಗಲಿದೆ ಎಂಬುದನ್ನು ಸಿನಿಪ್ರೇಮಿಗಳೇ ಮುಂದೆ ತೆರೆದಿಡಲಿದ್ದಾರೆ.

– ಸೋಮಶೇಖರ್ ಚಲ್ಯ


ಓದಿ:

ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...