Homeಚಳವಳಿಕೊರೊನಾ ಸುತ್ತ ಸುಳ್ಳು ಹರಡುವವರ ವಿರುದ್ದ AIDWA-AIPSN ಅಭಿಯಾನ

ಕೊರೊನಾ ಸುತ್ತ ಸುಳ್ಳು ಹರಡುವವರ ವಿರುದ್ದ AIDWA-AIPSN ಅಭಿಯಾನ

- Advertisement -
- Advertisement -

ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ) ಮತ್ತು ಅಖಿಲ ಭಾರತ ಪೀಪಲ್ಸ್ ಸೈನ್ಸ್ ನೆಟ್‌ವರ್ಕ್ (ಎಐಪಿಎಸ್ಎನ್) ಜುಲೈ 23 ರಿಂದ ಕೊರೊನಾವನ್ನು ಗುಣಪಡಿಸುತ್ತೇವೆ ಎನ್ನುವ ವಿವಿಧ ಮೂಡನಂಬಿಕೆಗಳು ಮತ್ತು ಸುಳ್ಳು ಚಿಕಿತ್ಸೆಗಳ ವಿರುದ್ಧ ಜಂಟಿ ಅಭಿಯಾನವನ್ನು ನಡೆಸಲಿವೆ.

ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಎಐಡಿಡಬ್ಲ್ಯೂಎ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಡಾ. ಲಕ್ಷ್ಮಿ ಸೆಹಗಲ್ ನಿಧನ ದಿನವಾದ ಗುರುವಾರ ಈ ಅಭಿಯಾನ ಪ್ರಾರಂಭವಾಗಲಿದೆ. ಮೂಡನಂಬಿಕೆ ವಿರೋಧಿ ಪ್ರಚಾರಕ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಬಲಪಂಥೀಯ ಶಕ್ತಿಗಳು ಹತ್ಯೆ ಮಾಡಿದ ದಿನಾಂಕವಾದ ಆಗಸ್ಟ್ 20 ರಂದು ಇದರ ಸಮಾರೋಪ ನಡೆಯಲಿದೆ ಎಂದು ಪ್ರಚಾರ ಪ್ರಕಟನೆ ತಿಳಿಸಿದೆ.

ಪರೀಕ್ಷಿಸಲ್ಪಡದ ಆಯುರ್ವೇದ ಔಷಧಿಗಳನ್ನು ಪ್ರತಿರೋಧಕಗಳಾಗಿ ಅಥವಾ ಕೊರೊನಾ ವೈರಸ್‌ಗೆ ಪರಿಹಾರವೆಂದು ಹೇಳಲಾಗುತ್ತಿರುವ ಈ ಸಮಯದಲ್ಲಿ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ.

“ಕೊರೊನಾವನ್ನು ಗುಣಪಡಿಸುತ್ತದೆ ಹಾಗೂ ತಡೆಗಟ್ಟುತ್ತದೆ ಎಂದು ಯಾವುದೇ ಸಾಬೀತಾಗದ ಅನೇಕ ಸಾಂಪ್ರದಾಯಿಕವಾದಿ ಔಷಧಿಳನ್ನು ಪ್ರತಿಪಾದಿಸಲಾಗುತ್ತಿದೆ. ಸಾಂಕ್ರಾಮಿಕದ ಹೆಸರಲ್ಲಿ ಸಾಮಾಜದಲ್ಲಿ ಸಂಪ್ರದಾಯವಾದವನ್ನು, ಕೋಮು ಪೂರ್ವಾಗ್ರಹಗಳನ್ನು ಮತ್ತು ಪುರುಷ ಪ್ರಧಾನ ಕಲ್ಪನೆಗಳನ್ನು ಹೆಚ್ಚಿಸಲು ಸಂಘ ಪರಿವಾರ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ಪ್ರಗತಿಪರ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಗ್ಗಟ್ಟಿನಿಂದ ವಿರೋಧಿಸಬೇಕು” ಎಂದು ಜಂಟಿ-ಪ್ರಚಾರ ಪ್ರಕಟನೆ ಕೋರಿದೆ.

“ಈ ಅಭಿಯಾನವು ನಮ್ಮನ್ನು ಹಿಂದಕ್ಕೆ ಕರೆದೊಯ್ಯುವ ಸರ್ಕಾರ ಮತ್ತು ಅಸ್ಪಷ್ಟವಾದಿ ಶಕ್ತಿಗಳ ಪ್ರಯತ್ನಗಳನ್ನು ವಿರೋಧಿಸುತ್ತದೆ. ಜಾತ್ಯತೀತತೆ, ಲಿಂಗ ಸಮಾನತೆ, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೌಲ್ಯಗಳನ್ನು ಈ ಅಭಿಯಾನವು ಎತ್ತಿಹಿಡಿಯುತ್ತದೆ, ಇವೆಲ್ಲವು ಪ್ರಜಾಪ್ರಭುತ್ವ ಸಮಾಜವನ್ನು ನಿರ್ಮಿಸಲು ಅವಶ್ಯಕವಾಗಿದೆ” ಪ್ರಕಟನೆ ಹೇಳಿದೆ.


ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...