Homeಮುಖಪುಟ'ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು' ಎಂದ ವಿದ್ಯಾರ್ಥಿಯ ಬಂಧನ

‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿಯ ಬಂಧನ

ವಿಷೇಶವೆಂದರೆ ಪ್ರಕರಣದಲ್ಲಿ ವಿದ್ಯಾರ್ಥಿಯು ಆರೆಸ್ಸೆಸ್ಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿದ್ದರೂ ಪೊಲೀಸರು ಧಾರ್ಮಿಕ ನಂಬಿಕೆಗಳನ್ನು ಅವಹೇಳನ ಮಾಡಲಾಗಿದೆ ಎಂದು ಕೇಸು ದಾಖಲಿಸಿದ್ದಾರೆ

- Advertisement -
- Advertisement -

ದೆಹಲಿಯ ತಬ್ಲೀಘ್ ಜಮಾತ್ ನ ನಿಜಾಮುದ್ದೀನ್ ಕೇಂದ್ರದಿಂದ ಕೊರೊನಾ ಸೋಂಕು ಹರಡಿರುವ ಕುರಿತು ಮಾಧ್ಯಮಗಳು ಉನ್ಮಾದದಲ್ಲಿದ್ದಾಗ ಬಿಜೆಪಿ ರಾಜಕಾರಣಿ ಬಬಿತಾ ಫೋಗತ್ ಮುಸಲ್ಮಾನರನ್ನು ‘ಅಜ್ಞಾನಿ ಹಂದಿಗಳು’ ಎಂದು ಟ್ವೀಟ್ ಮಾಡಿದ್ದರು.

ಈಗ ನಗರದ ಆರ್‌ಎಸ್‌ಎಸ್ ಕಛೇರಿಯಲ್ಲಿರುವ ಕಾರ್ಯಕರ್ತರಿಗೆ ಹೆಚ್ಚಾಗಿ ಸೋಂಕು ಹರಡುತ್ತಿರುವುದರ ಕುರಿತು ಜಬಲ್ ಪುರದ ಮುಸ್ಲಿಂ ಯುವಕನೊಬ್ಬ ಅದೇ ಪದವನ್ನು ಬಳಸಿದ್ದಾರೆ. ಕೋಮುದ್ವೇಷ ಹರಡುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಜುಲೈ 20 ರಂದು ಪೊಲೀಸರು ಜಬಲ್ ಪುರ್ ಜಿಲ್ಲೆಯ ಮನ್ಸೂರಾಬಾದ್ ಗೋಹಲ್ಪುರದ ನಿವಾಸಿ, ರಾಣಿ ದುರ್ಗಾವತಿ ವಿಶ್ವವಿದ್ಯಾಲಯದಲ್ಲಿ ಬಿ. ಫಾರ್ಮ್‌ನ ಅಂತಿಮ ವರ್ಷದ  ಜಿಯಾ-ಉಲ್-ಹಕ್ ಎಂಬ 23 ವರ್ಷದ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 295 (ಎ) ಅಡಿಯಲ್ಲಿ (‘ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ’) ಮತ್ತು ಭಾರತೀಯರ 505 (‘ಕಿಡಿಗೇಡಿತನಕ್ಕೆ ಕಾರಣವಾಗುವ ಸಾರ್ವಜನಿಕ ಹೇಳಿಕೆಗಳು’) ದಂಡ ಸಂಹಿತೆ ಪ್ರಕಾರ ತಕ್ಷಣ ಆತನನ್ನು ಬಂಧಿಸಲಾಯಿತು.

ಜುಲೈ 19 ರಂದು ಜಬಲ್ಪುರ ಸಂಘದ ಕಚೇರಿಯಲ್ಲಿ 12 ಆರ್‌ಎಸ್‌ಎಸ್ ಕಾರ್ಯಕರ್ತರು ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ಗಂಟೆಗಳ ನಂತರ, ಜಿಯಾ-ಉಲ್-ಹಕ್ ಅವರು  ‘NSUI Group Jabalpur VVV’ಯ ಫೇಸ್‌ಬುಕ್ ಪುಟದಲ್ಲಿ ಈ ಪೋಸ್ಟ್ ಮಾಡಿದ್ದರು.

ಸ್ಥಳೀಯ ಟಿವಿ ನ್ಯೂಸ್ ಚಾನೆಲ್‌ನಿಂದ ಸುದ್ದಿಯ ಸ್ಕ್ರೀನ್‌ಶಾಟ್ ಹಂಚಿಕೊಂಡ ಅವರು, 12 ಹಂದಿಗಳು ಇಂದು ನಮ್ಮ ನಗರದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿವೆ. ಈ ಹಂದಿಗಳು ದೇಶಾದ್ಯಂತ ಕೊರೊನಾವನ್ನು ಹರಡುತ್ತಿದ್ದಾರೆ.

ವಿದ್ಯರ್ಥಿಯ ಫೇಸ್‌ಬುಕ್ ಪೋಸ್ಟ್‌ನಿಂದ ಕೋಪಗೊಂಡ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಬಲಪಂಥೀಯ ಹಿಂದೂ ಧರ್ಮ ಸೇನಾ ಸದಸ್ಯರು ಮರುದಿನ ಜಬಲ್ಪುರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ಈ ವಿಷಯವನ್ನು ವರದಿ ಮಾಡಿದ್ದಾರೆ.

ಹಿಂದೂ ಧರ್ಮ ಸೇನಾದ ರಾಜ್ಯ ಉಪಾಧ್ಯಕ್ಷ ಮತ್ತು ತನ್ನನ್ನು ಆರ್‌ಎಸ್‌ಎಸ್ ಕಾರ್ಯಕರ್ತ ಎಂದು ಬಣ್ಣಿಸಿಕೊಂಡಿರುವ ನೀರಜ್ ರಜಪೂತ್ ಅವರ ದೂರಿನ ಆಧಾರದ ಮೇಲೆ, ಒಂದು ಗುಂಪಿನ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ್ದಕ್ಕಾಗಿ ಜಬಲ್ಪುರ್ ಪೊಲೀಸರು ಜಿಯಾ-ಉಲ್-ಹಕ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಹಕ್, “ಅಸಭ್ಯ, ನಾಚಿಕೆಗೇಡು ಮತ್ತು ಅಸಹನೀಯ” ಹೇಳಿಕೆಗಳನ್ನು ನೀಡಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದೂರುದಾರರು ಆರೋಪಿಸಿದ್ದಾರೆ.

ಮುಸ್ಲಿಂ ಯುವಕ “ರಾಷ್ಟ್ರೀಯವಾದಿ ಸಂಘಟನೆಯ” ವಿರುದ್ಧದ ಇಂತಹ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ಹೇಳಿದರು. “ಆರ್‌ಎಸ್‌ಎಸ್ ದೇಶಭಕ್ತಿ ಮತ್ತು ಸಾಮಾಜಿಕ ಕಾರ್ಯ ಸಂಸ್ಥೆಯಾಗಿದ್ದು, ಈ ದೇಶದಲ್ಲಿ ಕೋಟ್ಯಂತರ ಸದಸ್ಯರನ್ನು ಹೊಂದಿದೆ. ಅಂತಹ ಸಂಘಟನೆಯ ಬಗ್ಗೆ ಮುಸ್ಲಿಂ ಯುವಕನ ಅಸಭ್ಯ ಉಲ್ಲೇಖವು ಸಾಮಾಜಿಕ ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ.”

“ಈತ ಮಾಡಿದ ನಿಂದನೀಯ ಉಲ್ಲೇಖವು ರಾಷ್ಟ್ರೀಯವಾದಿ ಮತ್ತು ಸಾಮಾಜಿಕ ಸೇವೆಯ ನನ್ನ ಭಾವನೆಗಳನ್ನು ಘಾಸಿಗೊಳಿಸಿದೆ” ಎಂದು ದೂರುದಾರ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

“ಮುಸ್ಲಿಂ ಯುವಕರ” ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಆತನನ್ನು ಬಂಧಿಸುವಂತೆ ಆಗ್ರಹಿಸಿದ ಅವರು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದುಎಂದು ಎಚ್ಚರಿಕೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಮುಸ್ಲಿಂ ಯುವಕ, ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಇದ್ದರೂ, ಪೊಲೀಸರು ಐಪಿಸಿಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕವಾಗಿ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಲಾಗಿದೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದರ ಕುರಿತು ಪ್ರಶ್ನೆಯನ್ನು ಪೊಲೀಸ್ ಅಧೀಕ್ಷಕ ಸಿದ್ಧಾರ್ಥ್ ಬಹುಗುನಾಗೆ ಕೇಳಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಮತ್ತು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಮಾತನಾಡಲು ಸಲಹೆ ನೀಡಿದರು ಎಂದು ದಿ ವೈರ್‌ಗೆ ವರದಿ ಮಾಡಿದೆ.

ಅಷ್ಟೇ ಅಲ್ಲದೆ, ಜಿಯಾ-ಉಲ್-ಹಕ್ ಪರ ವಕೀಲ ವಿಕಾಶ್ ರಾಥೌರ್ ಜುಲೈ 21 ರಂದು ಜಬಲ್ಪುರ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದಾಗ, ಅಪರಾಧವು ಗಂಭೀರವಾಗಿದೆ ಎಂದು ಆರೋಪಿಸಿ ಜಾಮೀನು ನಿರಾಕರಿಸಿದ ನ್ಯಾಯಾಲಯ ಅವರನ್ನು ಜುಲೈ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಜಿಯಾ-ಉಲ್-ಹಕ್ ಪರವಾಗಿ ಮಧ್ಯಪ್ರದೇಶದ ಹೈಕೋರ್ಟ್ ವಕೀಲ ನಯೀಮ್ ಖಾನ್, ಈ ವಿಷಯವು ಮಾನಹಾನಿಗೆ ಸಂಬಂಧಿಸಿದೆ ಮತ್ತು ಯಾರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದ್ದಾರೆ.

“ಹಿಂದಿನ ವಕೀಲರು ಈ ಪ್ರಕರಣವನ್ನು ಸರಿಯಾಗಿ ಸಮರ್ಥಿಸಲಿಲ್ಲ. ಆದ್ದರಿಂದ, ಜುಲೈ 24 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...