Homeಕರೋನಾ ತಲ್ಲಣಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

ಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ‘ಆ ಭಗವಂತ’ನ ಮೇಲೆ ಬಿಟ್ಟು ಕರ್ನಾಟಕದ ಆರೋಗ್ಯ ಸಚಿವರು ತಮ್ಮ ನಿಶ್ಕ್ರಿಯತೆಯನ್ನು ತಾವೆ ಒಪ್ಪಿಕೊಂಡಂತಾಗಿದೆ. ದೇಶದಲ್ಲಿ ಕೋವಿಡ್‍ನ ಮೊದಲನೆ ಪ್ರಕರಣ ಕಂಡು ಹೆಚ್ಚು ಕಡಿಮೆ ನಾಲ್ಕು ತಿಂಗಳುಗಳು ಕಳೆದರೂ, ರಾಜ್ಯ ಸರ್ಕಾರ ಯಾವ ತಯಾರಿಯನ್ನೂ ಮಾಡಿಕೊಂಡಂತಿಲ್ಲ.

ಏಪ್ರಿಲ್ ಮತ್ತು ಮೇ ಎರಡು ತಿಂಗಳುಗಳ ಲಾಕ್‍ಡೌನಿನ ಸಮಯವಕಾಶವಿದ್ದರೂ ಸಹ, ಬರುವ ಆಪತ್ತಿಗೆ ಸರ್ಕಾರ ಯಾವ ವ್ಯವಸ್ಥೆಯನ್ನೂ ಮಾಡಲಿಲ್ಲ. ಲಾಕ್‍ಡೌನ್, ಸೀಲ್‍ಡೌನ್ ಬಿಟ್ಟು ಸರ್ಕಾರಕ್ಕೆ ಬೇರೆ ಯಾವ ಕಾರ್ಯತಂತ್ರ ತೋಚುತ್ತಿಲ್ಲವೆನಿಸುತ್ತದೆ. ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರಿ 40,000ಕ್ಕು ಹೆಚ್ಚು ತಲುಪಿದೆ. ಇಂತಹ ಸಂದರ್ಭದಲ್ಲಿ ಎಲ್ಲವೂ ಎಡವಟ್ಟಾಗಿ ನಡೆಡಿದೆ.

ಪರೀಕ್ಷೆಗಳಲ್ಲಿ ಬಹಳಷ್ಟು ಬ್ಯಾಕ್‍ಲಾಗ್ ಇದ್ದು ಪರೀಕ್ಷೆಯ ಫಲಿತಾಂಶ ಪಡೆಯಲು 7 ದಿನ ಕಾಯಬೇಕಾಗಿದೆ. ಆಸ್ಪತ್ರೆಗಳಲ್ಲಿನ ಬೆಡ್‍ಗಳ ನಿರ್ವಹಣೆಗಾಗಿ ಇರುವ ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಿಂದ ಯಾವ ಪ್ರಯೊಜನವೂ ಕಾಣಿಸುತ್ತಿಲ್ಲ. ಗಂಭೀರ ಸ್ಥಿತಿಯಲ್ಲಿರುವ ಒಬ್ಬ ರೋಗಿಯ ಪರವಾಗಿ ಬೆಡ್ ಲಭ್ಯತೆಯಿರುವ ಆಸ್ಪತ್ರೆಗೆ ಕರೆ ಮಾಡಿದಾಗ, ನಮ್ಮಲ್ಲಿ ಬೆಡ್‍ಗಳಿವೆ ಆದರೆ ಸಿಬ್ಬಂದಿಗಳ ತೀವ್ರ ಕೊರತೆಯಿಂದಾಗಿ ರೋಗಿಗಳನ್ನು ದಾಖಲಿಸಿಕೊಳ್ಳಲಾಗುತ್ತಿಲ್ಲವೆಂದು ಪ್ರತಿಕ್ರಿಯೆ ಬಂತು.

ಮತ್ತೊಂದು ಆಸ್ಪತ್ರೆಗೆ ಕರೆ ಮಾಡಿದಾಗ ನಮ್ಮಲ್ಲಿ ಬೆಡ್‍ಗಳಿಲ್ಲವೆಂದು ಹೇಳಿದರು. ‘ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಲ್ಲಿ ನಿಮ್ಮ ಆಸ್ಪತ್ರೆಯಲ್ಲಿ 250 ಬೆಡ್‍ಗಳಿವೆಯೆಂದು ತೋರುಸಿತ್ತಿದೆಯಲ್ಲ’ ಎಂದು ಕೇಳಿದಾಗ, ಪ್ರತಿಕ್ರಿಯೆ ನೀಡುತ್ತಿದ್ದ ಸಿಬ್ಬಂದಿ ಹೌದಾ, ಅಂತಹದ್ದೊಂದು ಅಪ್ಲಿಕೇಶನ್ ಇದೆಯೆಂದೇ ನನಗೆ ಗೊತ್ತಿಲ್ಲ, ದಯವಿಟ್ಟು ಅದರ ಲಿಂಕ್ ಕಳುಹಿಸಿಯೆಂದರು.

ಈ ರೀತಿ ಬೆಡ್‍ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವುದು ತಪ್ಪಿಲ್ಲ. ಖಾಸಗಿ ಆಸ್ಪತ್ರೆಗಳೊಂದಿಗೆ ಮತ್ತೊಮ್ಮೆ ಚರ್ಚೆ ಮಾಡುವುದಿಲ್ಲ, ಇನ್ನೇನಿದ್ದರೂ ಕಠಿಣ ಕ್ರಮಕ್ಕೆ ಇಳಿಯುತ್ತೇವೆಯೆಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದರೂ, ಖಾಸಗಿ ಆಸ್ಪತ್ರೆಗಳಿಗೆ ಅದರ ಬಿಸಿ ತಟ್ಟಿದಂತಿಲ್ಲ. ಬದಲಿಗೆ ತಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವಂತೆ ಮತ್ತಷ್ಟು ಬಲವಾಗಿ ಪಟ್ಟುಹಿಡಿದಂತಿದೆ. ನಮಗೆ ಸರಕಾರದಿಂದ ಬಾಕಿಯಿರುವ ಹಣವನ್ನು ಪಾವಿತಿಸುವವರೆಗು ನಾವು 50% ಬೆಡ್‍ಗಳನ್ನು ಸರಕಾರದಿಂದ ರೆಫರ್ ಮಾಡಿದ ರೋಗಿಗಳಿಗೆ ಮೀಸಲಿಡುವುದಿಲ್ಲವೆಂದು ಖಾಸಗಿ ಆಸ್ಪತ್ರೆಗಳು ತಿಳಿಸಿವೆ.

ಕಳೆದ 20 ವರ್ಷಗಳಿಂದ ಖಾಸಗಿ ಆಸ್ಪತ್ರೆಗಳನ್ನು ಪೋಷಿಸಿ ಸರ್ಕಾರಗಳು ತಮ್ಮ ಜುಟ್ಟನ್ನು ಅವರ ಕೈಯಿಗೆ ಕೊಟ್ಟ ಪರಿಣಾಮವು ಈಗ ಸ್ಪಷ್ಟವಾಗಿ ಕಾಣುತ್ತಿದೆ. ಈ ಸಂದಿಗ್ಧ ಪರಿಸ್ಥಿತಿ ಮುಂದಕ್ಕೆ ಏನಾಗಬಹುದೆಂದು ಬಹುಶಃ ‘ಆ ಭಗವಂತನನ್ನೇ’ ಕೇಳಬೇಕು.

ಖಾಸಗಿ ವ್ಯವಸ್ಥೆಯನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವುದಿರಲಿ, ತನ್ನದೇ ಸಾರ್ವಜನಿಕ ವ್ಯವಸ್ಥೆಯನ್ನೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸಿಬ್ಬಂದಿಗಳ ಕೊರತೆಯಿರುವ ಕಾರಣ ಇತರ ಇಲಾಖೆಗಳಿಂದ ಸಿಬ್ಬಂದಿಗಳನ್ನು ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗಿದೆ. ಆದರೆ, ಎಷ್ಟೋ ಕೇಂದ್ರಗಳಲ್ಲಿ ನಿಯೋಜಿಸಲಾದ ಸಿಬ್ಬಂದಿಗಳು ಹಾಜರಾಗಿಲ್ಲ. ಈಗ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ತಕ್ಕ ಬೆಂಬಲ ವ್ಯವಸ್ಥೆಯೂ ಇಲ್ಲ. ಉದಾಹರಣೆಗೆ, ದಿನನಿತ್ಯ ಅಪಾಯವನ್ನು ಎದುರಿಸಿ ಇಡೀ ಆರೋಗ್ಯ ವ್ಯವಸ್ಥೆಯ ಅಡಿಪಾಯವಾಗಿರುವ ಆಶಾ ಕಾರ್ಯಕರ್ತರಿಗೆ ವಿಶೇಷ ಬೆಂಬಲ ನೀಡಿ ಅವರನ್ನು ರಕ್ಷಿಸಿ ಪ್ರೋತ್ಸಾಹಿಸುವ ಬದಲು ಅವರಿಗೆ ಕಳೆದ ಮೂರು ತಿಂಗಳುಗಳಿಂದ ‘ಗೌರವ’ ಧನವೂ ನೀಡಿಲ್ಲ. ಅದೇ ರೀತಿ ಯಾವುದೇ ರಕ್ಷಣಾ ಕವಚಗಳನ್ನು ನೀಡದೇ, ಕ್ರಮಬದ್ದವಾಗಿ ಅವರನ್ನು ಕೋವಿಡ್ ಪರಿಕ್ಷಿಗೆ ಒಳಪಡಿಸದೇ, ಚಿಕಿತ್ಸೆಗಾಗಿ ವಿಮೆ ಸೌಲಭ್ಯ ಮತ್ತು ಇತರ ಭದ್ರತೆಗಳನ್ನು ನೀಡದೇ ಸರ್ಕಾರ ಪೌರಕಾರ್ಮಿಕರನ್ನು ಅಪಾಯದ ಅಂಚಿಗೆ ತಲ್ಲಿದೆ. ಈ ರೀತಿ ಕೋವಿಡ್ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿ ವರ್ಗದೊಂದಿಗೆ ರಾಜ್ಯ ಸರ್ಕಾರ ತುಚ್ಛವಾಗಿ ನಡೆದುಕೊಂಡಿದೆ.

ಸಮುದಾಯಗಳು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಕೇಂದ್ರಬಿಂದು ಎಂಬುದು ಎಲ್ಲಾ ತಜ್ಞರಿಗೆ ತಿಳಿದಿರುವ ವಿಷಯ. ಆದರೂ ಕಳೆದ ನಾಲ್ಕು ತಿಂಗಳುಗಳಿಂದ ಈ ದಿಕ್ಕಿನಲ್ಲಿ ಯಾವ ವಿಧದ ತಯಾರಿಯೂ ಮಾಡಲಾಗಿಲ್ಲ. ಬೆಂಕಿ ಹೊತ್ತಿ ಉರಿಯುವಾಗ ಬಾವಿ ತೋಡಿದಂತೆ, ಬಿಬಿಎಂಪಿ ಈಗ ಬೆಂಗಳೂರಿನ ಎಲ್ಲಾ ವಾರ್ಡ್ ಸಮಿತಿಗಳನ್ನು ಪುನರ್ಚೇತನಗೊಳಿಸಲು ಹೊರಟಿದೆ. ತಡವಾಗಿಯಾದರೂ ಈ ಕ್ರಮ ಕೈಗೊಂಡಿರುವುದು ಬಹಳ ಉತ್ತಮ ಬೆಳವಣಿಗೆ.

ವಾರ್ಡ್ ಸಮಿತಿಗಳು ಕೇವಲ ಕೋವಿಡ್ ರೋಗ ನಿಯಂತ್ರಣ ಮಾತ್ರವಲ್ಲದೇ, ಕೋವಿಡ್ ಸಂಬಂಧಿತ ಕಳಂಕ, ತಾರತಮ್ಯ, ಭಯ, ಆತಂಕವನ್ನು ಕಡಿಮೆ ಮಾಡಲು ವಿಶೇಷ ಕಾಳಜಿವಹಿಸಬೇಕಿದೆ. ಹಾಗೆಯೇ ಸುಳ್ಳು ಮಾಹಿತಿ, ಭಯ ಹುಟ್ಟಿಸುವ ವದಂತಿಗಳನ್ನು ತಡೆಗಟ್ಟುವಲ್ಲಿಯೂ ವಾರ್ಡ್ ಸಮಿತಿಗಳು ಮುಖ್ಯ ಪಾತ್ರ ವಹಿಸಬೇಕಿವೆ. ಕೋವಿಡ್ ರೋಗಿಗಳು ಮಾತ್ರವಲ್ಲದೇ, ಇತರ ರೋಗಗಳಿಂದ ಬಳಲುತ್ತಿರುವವರಿಗು ಆರೋಗ್ಯ ಸೇವೆಗಳು ಕೈಗೆಟುವಂತೆ ಮಾಡುವುದು, ನೀರು, ಚರಂಡಿ ಮುಂತಾದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಬಿಬಿಎಂಪಿಯ ಗಮನ ಸೆಳೆಯುವುದು, ಸ್ಥಳೀಯ ನಾಯಕರನ್ನು, ಚುನಾಯಿತ ಪ್ರತಿನಿಧಿಗಳನ್ನು ಸಂಪರ್ಕಿಸಿ ಅವರ ಬೆಂಬಲ ಪಡೆಯುವುದು ಮುಂತಾದ ಜವಾಬ್ದಾರಿಗಳನ್ನು ವಾರ್ಡ್ ಸಮಿತಿಗಳು ನಿರ್ವಹಿಸಬೇಕಿದೆ.

ಈವರೆಗೆ ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸಲು ಭಗವಂತ ಏನು ಮಾಡಿದನೋ ಗೊತ್ತಿಲ್ಲ. ಆದರೇ ಈ ನಾಡಿನ ಜನಸಾಮಾನ್ಯರು ತಮ್ಮವರಿಗಾಗಿ ಬಹಳ ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ರೇಶನ್ ಕಿಟ್‍ಗಳನ್ನು ಹೊಂದಿಸಿಕೊಂಡು ವಿತರಿಸುವುದು, ವಲಸೆ ಕಾರ್ಮಿಕರಿಗಾಗಿ ಊಟದ ವ್ಯವಸ್ಥೆ, ಅವರು ಮನೆಗೆ ತೆರೆಳಲು ಸಹಾಯ ಇವೆಲ್ಲವನ್ನು ಜನಸಾಮಾನ್ಯರೇ ನಿಭಾಯಿಸಿದ್ದಾರೆ.

ಜನಸಾಮಾನ್ಯರು ಕೇವಲ ಶ್ರಮಿಸುವುದಲ್ಲದೇ ಸರ್ಕಾರದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಗಾಗಿ ಒತ್ತಾಯಿಸಬೇಕಿದೆ. ಸರ್ಕಾರದ ಕ್ರಮಗಳು ಸೂಕ್ತವಿಲ್ಲದಿದ್ದಲ್ಲಿ, ಅವುಗಳನ್ನು ಪ್ರಶ್ನಿಸಬೇಕಿದೆ. ಮುಂಬೈಯಿನ ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಇವತ್ತು ನಿಯಂತ್ರಣದಲ್ಲಿರುವುದು ಯಾವುದೋ ದೊಡ್ಡ ಮಟ್ಟದ ತಾಂತ್ರಿಕ ಶಕ್ತಿಯಿಂದಲ್ಲ. ಅಲ್ಲಿನ ಸಮುದಾಯ ಕೋವಿಡ್ ನಿಯಂತ್ರಣದಲ್ಲಿ ಪಾಲ್ಗೊಂಡು ಜನರಿಗೆ ಮಾಹಿತಿ ನೀಡಿ, ಅವರಲ್ಲಿ ಭಯ ಆತಂಕವನ್ನು ತಡೆಗಟ್ಟಿ, ಅಗತ್ಯ ಆರೋಗ್ಯ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಕೈಗೆಟುಕುವಂತೆ ಮಾಡಿದ ಪರಿಣಾಮ ಇಂದು ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಸಮಸ್ಯೆ ನಿಯಂತ್ರಣದಲ್ಲಿದೆ. “ಭಗವಂತನ” ಮೇಲೆ ಈ ಬಿಕ್ಕಟ್ಟಿನ ಹೊರೆ ಹಾಕುವ ಬದಲು, ಸಂವಿಧಾನಬದ್ಧವಾಗಿ ಪ್ರಜಾಸತಾತ್ಮಕವಾದ ನಮ್ಮ ನಾಗರಿಕತ್ವದ ಹಕ್ಕುಗಳನುಸಾರವಾಗಿ ಈ ಬಿಕಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ.

-ಡಾ.ಅಖಿಲಾ ವಾಸನ್


ಇದನ್ನು ಓದಿ: ದುಬೆ ಹತ್ಯೆ ಪ್ರಕರಣದ ತನಿಖಾ ತಂಡವನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...