Homeನ್ಯಾಯ ಪಥಪೊಲೀಸರಿಗೆ ವಿಪಾಸನಾ ಧ್ಯಾನ ತರಬೇತಿ ಅಗತ್ಯ

ಪೊಲೀಸರಿಗೆ ವಿಪಾಸನಾ ಧ್ಯಾನ ತರಬೇತಿ ಅಗತ್ಯ

- Advertisement -
- Advertisement -

ಕೊರೊನಾ ವೈರಾಣು ದಾಂಗುಡಿಯಿಟ್ಟ ಮೇಲೆ ಜಗತ್ತು ಅಲ್ಲೋಲ ಕಲ್ಲೋಲವಾಗಿದೆ ಮತ್ತು ಬದುಕಿನ ಲಯವೇ ಬದಲಾಗಿದೆ. ಇದು ಹೊಸ ರೋಗಲಕ್ಷಣವಾದ್ದರಿಂದ, ಚುಚ್ಚುಮದ್ದು ಅಥವಾ ಗುಳಿಗೆಗಳನ್ನು ಇನ್ನೂ ಕಂಡು ಹಿಡಿದಿಲ್ಲವಾದ್ದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೇ ಅದನ್ನು ತಡೆಯುವ ಸುಲಭೋಪಾಯವೆಂದಾಯಿತು. ಆದ್ದರಿಂದ ‘ಮನೆಯ ಒಳಗಿರು’ ಎಂಬುದು ಬೀಜಮಂತ್ರವಾಯಿತು.

ಬಹುತೇಕ ದೇಶಗಳಲ್ಲಿ ಸರ್ಕಾರಗಳು ಲಾಕ್‌ಡೌನ್ ಘೋಷಿಸಿದವು. ನಮ್ಮ ದೇಶವೂ ಅದನ್ನೇ ಮಾಡಿತು. ಆದರೆ ಜನರು ಕೇಳಬೇಕಲ್ಲ. ಹೊಸದರಲ್ಲಿ ಸಣ್ಣಪುಟ್ಟ ನೆಪವೊಡ್ಡಿ ಕಾರು, ಬೈಕುಗಳಲ್ಲಿ ಬೀದಿಗಿಳಿಯಲಾರಂಭಿಸಿದರು. ಆಶ್ಚರ್ಯವೆಂದರೆ ಜಗತ್ತಿನ ಬೇರೆಲ್ಲೂ ಕಾಣಿಸದಂತಹ ದೃಶ್ಯಗಳು ಭಾರತದ ನಗರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದವು. ನಮ್ಮ ಪೊಲೀಸರು ಬೀದಿಯಲ್ಲಿ ಕಂಡಕಂಡವರನ್ನು ತಮ್ಮ ಲಾಠಿಗಳಿಂದ ಥಳಿಸುತ್ತಿದ್ದರು.

ಎಷ್ಟರಮಟ್ಟಿಗೆಂದರೆ, ಕಚೇರಿಗೆಂದು ಹೊರಟಿದ್ದ ಆರೋಗ್ಯ ಇಲಾಖೆಯಂಥ ತುರ್ತುಸೇವೆಯ ಅಧಿಕಾರಿಯನ್ನು ಗುರುತಿನ ಚೀಟಿ ತೋರಿಸಿದರೂ ಬಿಡದೆ ಮನಬಂದಂತೆ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದರು.

ಹೀಗೆ ಸಾರ್ವಜನಿಕವಾಗಿ ಹೊಡೆಯುವುದು ಕಾನೂನುಬದ್ಧವಲ್ಲ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅವರಿಗೂ ತಿಳಿದಿದೆ. ಆದರೂ ಹೊಡೆಯುತ್ತಿದ್ದಾರೆ. ಜನರು ಹೊರಬರದಂತೆ ಭಯ ಹುಟ್ಟಿಸುವ ಉದ್ದೇಶದಿಂದಲೇ ಪೊಲೀಸರು ಹಾಗೆ ಮಾಡಿದ್ದರೂ ಹಿಂಸೆ ಅಲ್ಲಿ ತಾಂಡವವಾಡಿದೆ. ಅನೇಕರು ದೈಹಿಕ ನ್ಯೂನತೆಗೆ ಒಳಗಾಗಿರುವ ಸಾಧ್ಯತೆಗಳಿವೆ. ಕೆಲವರು ಎಷ್ಟು ರಭಸದಿಂದ ಹೊಡೆಯುತ್ತಿದ್ದರೆಂದರೆ ತಮ್ಮೆಲ್ಲ ಬಿರುಸನ್ನೂ ಒಟ್ಟುಗೂಡಿಸಿಕೊಂಡು ಲಾಠಿಯನ್ನು ಬೀಸುತ್ತಿದ್ದರು. ಹೀಗೆ ಹೇಳದೆ ಕೇಳದೆ, ಮುಖವನ್ನೂ ನೋಡದೆ ಬಾರಿಸುತ್ತಿದ್ದರು ಎಂದರೆ ವಿಕೃತಾನಂದವನ್ನು ಪಡೆಯುತ್ತಿದ್ದರು ಎಂದೇ ಅರ್ಥೈಸಬೇಕಾಗುತ್ತದೆ.

ಹಾಗೆಂದ ಮಾತ್ರಕ್ಕೆ ಹೊಡೆಯುತ್ತಿದ್ದವರು ಕೆಟ್ಟವರೆಂದೇನೂ ಅಲ್ಲ. ಮನಸ್ಸನ್ನು ಸ್ಥಿಮಿತದಲ್ಲಿಟ್ಟುಕೊಳ್ಳಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಕೋಪವನ್ನು ಉದ್ದೀಪಿಸಲು ಕೆಲವರಿಗೆ ಒಂದು ಸಣ್ಣ ಕಾರಣ ಸಾಕು. ವಸ್ತುಸ್ಥಿತಿಯನ್ನು ನೋಡಿ, ವಿಚಾರ ಮಾಡುವಷ್ಟು ತಾಳ್ಮೆ ಕೆಲವರಲ್ಲಿರುವುದಿಲ್ಲ. ಮನುಷ್ಯನೊಳಗಿರುವ ರಾಗ, ದ್ವೇಷಾದಿಗಳನ್ನು ಹತೋಟಿಯಲ್ಲಿಟ್ಟುಕೊಳ್ಳಲು ತರಬೇತಿಯ ಅಗತ್ಯವಿದೆ. ಅದನ್ನು ವಿಪಸ್ಸನಾ ಧ್ಯಾನ ನೀಡುತ್ತದೆ. ಸಾರ್ವಜನಿಕ ಸೇವೆಯಲ್ಲಿರುವವರಿಗೆ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ಅದರ ಅಗತ್ಯ ಹೆಚ್ಚು. ಯಾಕೆಂದರೆ ಅವರು ಯಾವಾಗಲೂ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ.

ಪಾಶ್ಚಾತ್ಯ ದೇಶಗಳಲ್ಲಿ ಇತ್ತೀಚೆಗೆ ಒಂದು ಹೊಸ ಟ್ರೆಂಡ್ ಶುರುವಾಗಿದೆ. ಒತ್ತಡ ನಿವಾರಣೆಗೆ ಅವರು ವಿಪಸ್ಸನಾ ಧ್ಯಾನದ ಮೊರೆ ಹೋಗುತ್ತಿದ್ದಾರೆ. ಕೆನಡಾ ದೇಶದ ಪೊಲೀಸರಿಗೆ ಹತ್ತು ದಿನಗಳ ಅವಧಿಯ ವಿಪಸ್ಸನಾ ಕಲಿಸಲಾಗುತ್ತಿದೆ. ಅಮೇರಿಕಾದಲ್ಲಿ ಜೈಲಿನಲ್ಲಿರುವ ಖೈದಿಗಳಿಗೂ ವಿಪಸ್ಸನಾ ಧ್ಯಾನ ಕಲಿಸುತ್ತಿದ್ದಾರೆ.

ಇತ್ತೀಚೆಗೆ ಒಂದು ಸಣ್ಣ ವೀಡಿಯೊ ನೋಡಿ ಅಚ್ಚರಿಗೊಂಡೆ. ಅದು ಬ್ರೆಜಿಲ್ ದೇಶದ ಒಂದು ಜೈಲಿನಲ್ಲಿ ಖೈದಿಗಳು ವಿಪಸ್ಸನಾ ಧ್ಯಾನ ಮಾಡುತ್ತಿರುವ ಕಿರುಚಿತ್ರ. ದಕ್ಷಿಣ ಅಮೆರಿಕಾದ ಹೆಚ್ಚಿನ ದೇಶಗಳು ಕ್ಷಿಪ್ರಕ್ರಾಂತಿಗಳಿಂದ ಸರ್ಕಾರ ರಚಿಸುತ್ತವೆ. ಮಾಫಿಯಾಗಳಿವೆ, ಡ್ರಗ್ಸ್ನ ಹಾವಳಿಯಿದೆ. ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ ಅಲ್ಲಿ ಮಾಮೂಲು ಘಟನೆಗಳು. ಈ ಎಲ್ಲ ಕಾರಣಗಳಿಂದ ಅಲ್ಲಿನ ಜೈಲುಗಳು ತುಂಬಿ ತುಳುಕುತ್ತವೆ. ಹೆಚ್ಚಿನ ಜೈಲುಗಳನ್ನು ಸೇನೆಗಳು ನೋಡಿಕೊಳ್ಳುತ್ತವೆ. ಆದರೂ ಜೈಲಿನ ಒಳಗೂ ಅದೇ ಕತೆ. ಕೊಲೆ, ಸುಲಿಗೆ, ಮಾಫಿಯಾ ಚಟುವಟಿಕೆ, ಡ್ರಗ್ಸ್ ಇತ್ಯಾದಿ. ಖೈದಿಗಳನ್ನು ತಹಬದಿಗೆ ತರಲು ಅವರಿಗೆ ವಿಪಸ್ಸನಾ ಧ್ಯಾನವನ್ನು ಕಲಿಸುತ್ತಿದ್ದಾರೆ!

ಅವರ ಅನುಭವಗಳನ್ನು ಅವರವರ ಬಾಯಲ್ಲಿಯೇ ಕೇಳಬೇಕು. ಒಬ್ಬ ಹೇಳುತ್ತಿದ್ದ; ಕೋಪ ಹೇಗೆ ಶಮನವಾಗುತ್ತದೆ? ನಮ್ಮೊಳಗಿರುವ ಕಲ್ಮಶವನ್ನು ತೆಗೆದುಹಾಕುವುದರಿಂದ. ಅದರ ಕಾರಣ ಮತ್ತು ಪರಿಣಾಮಗಳನ್ನು ಅರಿಯುವುದರಿಂದ ಅದು ಸಾಧ್ಯ. ಎಲ್ಲ ಕೆಡುಕುಗಳ ಮೂಲ ದ್ವೇ಼ಷ. ಅದನ್ನು ಸ್ವಲ್ಪಸ್ವಲ್ಪವಾಗಿ, ನಿಧನಿಧಾನವಾಗಿ ಹೊರಹಾಕಬೇಕು. ಲೋಭದಿಂದ ಬಿಡುಗಡೆ ಪಡೆಯಬೇಕು. ಆಗ ಅವಿದ್ಯೆ ತಂತಾನೆ ದೂರವಾಗುತ್ತದೆ. ಇವುಗಳನ್ನು ಇತರ ಧರ್ಮಗಳು ಹೇಳುವುದಿಲ್ಲವೆಂದಲ್ಲ.

ಆದರೆ ಬುದ್ಧ ಅವುಗಳ ಅನುಷ್ಠಾನಕ್ಕೆಂದು ಒಂದು ಪ್ರಯೋಗವನ್ನು ಕಂಡುಹಿಡಿದಿದ್ದಾನೆ. ಅದೇ ವಿಪಸ್ಸನಾ ಧ್ಯಾನ. ಬರ್ಮಾ ಮೂಲದ ಎಸ್. ಎನ್. ಗೊಯೆಂಕಾರವರು ಈ ಧ್ಯಾನಮಾರ್ಗವನ್ನು ಧರ್ಮದ ಆಚೆಗೆ ನಿಂತು ಜಗತ್ತಿನಾದ್ಯಂತ ಪ್ರಚುರಪಡಿಸಿದ್ದಾರೆ. ಬೌದ್ಧಧರ್ಮದ ಹಂಗಿಲ್ಲದೆ ಜನರು ಇದನ್ನು ಕಲಿಯುತ್ತಿದ್ದಾರೆ. ಇಲ್ಲಿ ಮತಾಂತರದ ಪ್ರಶ್ನೆಯಿಲ್ಲ. ದೇವರ ಗೊಡವೆಯಿಲ್ಲ. ಆದ್ದರಿಂದ ದೈವನಿಂದನೆಯ ಆರೋಪವಿಲ್ಲ. ಕೊನೆಗೆ ಬುದ್ಧನನ್ನು ಸ್ಮರಿಸದಿದ್ದರೂ ಆಕ್ಷೇಪವಿಲ್ಲ. ವಿಪಸ್ಸನಾ ಮನಸ್ಸನ್ನು ತಿಳಿಗೊಳಿಸುತ್ತದೆ ಮತ್ತು ಇರುವುದನ್ನು ಇರುವ ಹಾಗೆ ನೋಡುವುದನ್ನು ಕಲಿಸುತ್ತದೆ.

ಬಹುತೇಕ ಎಲ್ಲ ರಾಷ್ಟ್ರಗಳಲ್ಲಿಯೂ ಈಗ ವಿಪಸ್ಸನಾ ಧ್ಯಾನ ಕೇಂದ್ರಗಳಿವೆ. ಒತ್ತಡದಲ್ಲಿ ಕೆಲಸ ಮಾಡುವ ಎಲ್ಲ ಸಾರ್ವಜನಿಕ ಸೇವೆಯ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ವಿಶೇಷವಾಗಿ ಪೊಲೀಸರಿಗೆ ಸರ್ಕಾರಗಳೇ ಭಾರತ ಮೂಲವಾದ ಈ ಧ್ಯಾನ ಮಾರ್ಗವನ್ನು ಕಲಿಸಲು ಮುಂದಾಗಬೇಕು.

-ಡಾ. ಮೂಡ್ನಾಕೂಡು ಚಿನ್ನಸ್ವಾಮಿ


ಓದಿ:

ಪ್ರಜಾಪ್ರಭುತ್ವ v/s ಜಾತಿಪ್ರಭುತ್ವ Democracy v/s Castocracy : ಡಾ. ಮೂಡ್ನಾಕೂಡು ಚಿನ್ನಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...