Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...