Homeಕರ್ನಾಟಕಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

- Advertisement -
- Advertisement -

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ನರಸಿಂಹರಾಜು ಅವರ ಜನ್ಮದಿನವಿಂದು. ನಟಿ ಆರ್. ಟಿ. ರಮಾ ಅವರು ನರಸಿಂಹರಾಜು ಅವರ ಜೋಡಿಯಾಗಿ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮ್ಮ ನೆಚ್ಚಿನ ಹಾಸ್ಯನಟನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಚಿತ್ರೀಕರಣ ಸಂದರ್ಭದ ಕೆಲವು ಸ್ವಾರಸ್ಯಕರ ಘಟನೆಗಳನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

ಪಾಂಡುರಂಗ ಪ್ರೊಡಕ್ಷನ್ಸ್ ಅವರ ‘ಅನುರಾಧ’; ಚಿತ್ರೀಕರಣದ ಸಂದರ್ಭ. ರಾಜಾಶಂಕರ್, ಪಂಢರೀಬಾಯಿ, ಅಶ್ವಥ್ ಇತರರು ಪ್ರಮುಖ ಪಾತ್ರಗಳಲ್ಲಿದ್ದರು. ನರಸಿಂಹರಾಜು ಮತ್ತು ನಾನು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದೆವು. ಈ ಚಿತ್ರಕ್ಕಾಗಿ ನಾನು ಸೈಕಲ್ ಕಲಿಯುವ ಅನಿವಾರ್ಯತೆ ಎದುರಾಗಿತ್ತು. ಮದ್ರಾಸ್‍ನಲ್ಲಿ ನಟ ಬೆಂಗಳೂರು ನಾಗೇಶ್ ಸಹಕಾರದಲ್ಲಿ ಲೇಡಿಸ್ ಸೈಕಲ್ ಹೊಡೆಯುವುದನ್ನು ಕಲಿತಿದ್ದೆ. ಆದರೆ ‘ಅನುರಾಧ’ ಚಿತ್ರಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿತ್ತು. ಸೈಕಲ್ ಬರುತ್ತದೆಂದು ನಿರ್ದೇಶಕರಿಗೆ ಧೈರ್ಯದಿಂದ ಭರವಸೆ ಕೊಟ್ಟಿದ್ದೆ. ದುರದೃಷ್ಟವತಾಶ್ ಮೈಸೂರಿನಲ್ಲಿ ನನಗೆ ಲೇಡೀಸ್ ಸೈಕಲ್ ಸಿಗಲಿಲ್ಲ! ಕೊನೆಗೆ ಗಂಡಸರ ಸೈಕಲ್ ಅನ್ನೇ ಹೊಡೆಯುವುದೆಂದು
ನಿರ್ಧಾರವಾಯಿತು.

ಚಿತ್ರದಲ್ಲಿ ನರಸಿಂಹರಾಜು ಕಾರು ಡ್ರೈವ್ ಮಾಡುತ್ತಾರೆ. ಸನ್ನಿವೇಶವೊಂದರಲ್ಲಿ ನಾನು ಸೈಕಲ್‍ನಲ್ಲಿ ಅವರ ಕಾರಿಗೆ ಡ್ಯಾಷ್ ಹೊಡೆಯಬೇಕು. ಗಂಡಸರ ಸೈಕಲ್ ಆದ್ದರಿಂದ ಕುಳ್ಳಿಯಾದ ನನಗೆ ಪೆಡಲ್ ಸಿಗುತ್ತಲೇ ಇರಲಿಲ್ಲ. ಅಲ್ಲದೆ ಬ್ರೇಕ್ ಹಿಡಿಯೋದನ್ನು ಕೂಡ ಮದ್ರಾಸ್‍ನಲ್ಲಿ ಸರಿಯಾಗಿ ಕಲಿತಿರಲಿಲ್ಲ. ಆಗ ಈ ಸನ್ನಿವೇಶದ ಚಿತ್ರೀಕರಣದುದ್ದಕ್ಕೂ ತಮಾಷೆಗಳು ನಡೆದವು. ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೊ ಒಬ್ಬರು ಎತ್ತರದ ಪ್ರದೇಶದಿಂದ ದಬ್ಬುತ್ತಿದ್ದರು. ಶಾಟ್ ಮುಗಿಯುತ್ತಿದ್ದಂತೆ ಮತ್ತಿಬ್ಬರು ಓಡಿಬಂದು ಸೈಕಲ್
ಹಿಡಿದುಕೊಳ್ಳಬೇಕಿತ್ತು!

ನರಸಿಂಹರಾಜು (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಮೊದಲ ಟೇಕ್‍ನಲ್ಲಿ ಸೈಕಲ್ ಮೇಲೆ ಕುಳಿತಿದ್ದ ನನ್ನನ್ನು ಯಾರೋ ದಬ್ಬಿದರು. ಪೆಡಲ್ ಸಿಗದೆ ನಾನು ಪರದಾಡುತ್ತಾ ಗಾಬರಿಗೊಂಡೆ. ಬ್ರೇಕ್ ಹಿಡಿಯಲು ಗೊತ್ತಾಗದೆ ರಸ್ತೆ ಬಿಟ್ಟು ಪಕ್ಕದ ಮಣ್ಣಿನ ಗುಂಡಿಯಲ್ಲಿ ಸೈಕಲ್ ಜತೆಗೇ ಬಿದ್ದೆ! ನರಸಿಂಹರಾಜು ಕಾರಿನಿಂದಿಳಿದು ಕೂಗುತ್ತಾ ಓಡಿ ಬಂದರು. ಕೈ-ಕಾಲು ಪರಚಿಕೊಂಡ ನನ್ನನ್ನು ಮೆಲ್ಲಗೆ ನಡೆಸಿಕೊಂಡು ಬಂದರು. ನೋವು ತೋರಿಸಿಕೊಳ್ಳದೆ ಮತ್ತೊಂದು ಟೇಕ್‍ಗೆ ರೆಡಿಯಾದೆ. ನಾನು ಸೈಕಲ್ ಓಡಿಸುವ ಪರಿಯಿಂದ ಕಾರಿನ ಡ್ರೈವರ್ ಸೀಟಿನಲ್ಲಿದ್ದ ನರಸಿಂಹರಾಜು ನನಗಿಂತಲೂ ಹೆಚ್ಚು ಗಾಬರಿಗೊಂಡಿದ್ದರು! ಎರಡನೇ ಟೇಕ್‍ನಲ್ಲಿ ನಾಲ್ಕೈದು ಸಹಾಯಕರೊಂದಿಗೆ
ಅಂತೂ ಶಾಟ್ ಓಕೆ ಆಯ್ತು.

ಹಂಡೆಯೊಳಗೆ ನರಸಿಂಹರಾಜು!

‘ಕನ್ಯಕಾಪರಮೇಶ್ವರಿ’ ಸಿನಿಮಾ ಚಿತ್ರೀಕರಣದ ಒಂದು ಸನ್ನಿವೇಶ. ನರಸಿಂಹರಾಜು ನನ್ನ ಪತಿ ಹಾಗೂ ನಟಿ ರಮಾದೇವಿ ನನ್ನ ಅಮ್ಮನಾಗಿ ನಟಿಸುತ್ತಿದ್ದರು. ನನ್ನಮ್ಮನಿಗೆ ಅಳಿಯ ನರಸಿಂಹರಾಜು ಅವರನ್ನು ಕಂಡರಾಗದು. ಆಕೆ ಇಲ್ಲದ ವೇಳೆ ನೋಡಿಕೊಂಡು ನರಸಿಂಹರಾಜು ನಮ್ಮ ಮನೆಗೆ ಬರುತ್ತಾರೆ. ಅಷ್ಟರಲ್ಲಿ ಹೊರಗೆ ಹೋಗಿದ್ದ ಅಮ್ಮ, ಬೆಕ್ಕು ಅಡ್ಡ ಬಂದು ಅಪಶಕುನವಾಯ್ತೆಂದು ಮರಳಿ ಮನೆಗೆ ಬರುತ್ತಾಳೆ. ನಾನು ಅವಸರಕ್ಕೆ ಪತಿ ನರಸಿಂಹರಾಜು ಅವರನ್ನು ದೊಡ್ಡ ನೀರಿನ ಹಂಡೆಯಲ್ಲಿ ಮುಚ್ಚಿಡುತ್ತೇನೆ. ಬೆಕ್ಕು ಅಡ್ಡ ಬಂದು ಮೈಲಿಗೆಯಾಗಿದೆ ಎಂದು ಅಮ್ಮ ಸ್ನಾನ ಮಾಡಲು ಅಣಿಯಾಗುತ್ತಾಳೆ.

ನಾನು ನೀರಿನ ಹಂಡೆಯನ್ನು ಒಲೆ ಮೇಲಿಟ್ಟು ಬೆಂಕಿ ಹಾಕಬೇಕು. ಹಂಡೆ ಒಳಗೆ ನರಸಿಂಹರಾಜು! ಎರಡು ಟೇಕ್‍ನಲ್ಲೂ ಓಕೆಯಾಗದ್ದರಿಂದ ಹಿತ್ತಾಳೆಯ ಹಂಡೆ ಸಿಕ್ಕಾಪಟ್ಟೆ ಬಿಸಿಯಾಗಿತ್ತು. ಒಳಗಿದ್ದ ನರಸಿಂಹರಾಜು ಕೂಗು ಹಾಕತೊಡಗಿದ್ದರು. ಶಾಟ್ ಓಕೆಯಾಗುತ್ತಿದ್ದಂತೆಯೇ ನರಸಿಂಹರಾಜು ಒಮ್ಮೆಗೇ ಹಂಡೆಯಿಂದ ಹೊರಜಿಗಿದದದ್ದು ಈಗಲೂ ಕಣ್ಣಿಗೆ ಕಟ್ಟಿದಂತಿದೆ!

ಆರ್. ಟಿ. ರಮಾ (ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ)

ಕಾಪಾಡಿ ಕಾಪಾಡಿ!

ನರಸಿಂಹರಾಜು ಅವರೊಂದಿಗಿನ ಚಿತ್ರವೊಂದರಲ್ಲಿ ಪಜೀತಿ ಎದುರಾಗಿತ್ತು. ಶ್ರೀರಂಗಪಟ್ಟಣದ ಬಳಿಯ ಪಶ್ಚಿಮವಾಹಿನಿ ಹೊಳೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಹೊಳೆಯಲ್ಲಿ ಬಿದ್ದ ನರಸಿಂಹರಾಜು ಅವರನ್ನು ನಾನು ಕಾಪಾಡುವ ಸನ್ನಿವೇಶ. ಹೊಳೆಯಲ್ಲಿ ನೀರು ಹರಿಯುತ್ತಿದ್ದು ಸೆಳವು ಕೊಂಚ ಹೆಚ್ಚಾಗಿಯೇ ಇತ್ತು. ನರಸಿಂಹರಾಜು ಅವರಿಗೇನೋ ಈಜು ಬರುತ್ತಿತ್ತು. ಅವರನ್ನು ಕಾಪಾಡಬೇಕಿದ್ದ ಈಜಲು ಬಾರದ ನಾನು ಭಯದಿಂದ ನಡುಗತೊಡಗಿದೆ!

ನನ್ನ ಪಡಿಪಾಟಲು ನೋಡಿ ನಿರ್ದೇಶಕರು ಹೊಳೆಯಲ್ಲಿ ಮೂರಡಿ ಆಳವಿದ್ದ ಪ್ರದೇಶದಲ್ಲಿ ಶೂಟಿಂಗ್ ನಡೆಸಲು ಸಜ್ಜಾದರು. ನರಸಿಂಹರಾಜು ಅವರೇನೋ ಸಲೀಸಾಗಿ ಹೊಳೆ ಮಧ್ಯೆ ಹೋಗಿ ನಿಂತು, ನಿರ್ದೇಶಕರ ಅಣತಿಯಂತೆ `ಕಾಪಾಡಿ ಕಾಪಾಡಿ’ ಎಂದು ಕೂಗು ಹಾಕಿದರು. ಅವರನ್ನು ಕಾಪಾಡಬೇಕಿದ್ದ ನಾನು ನೀರಿಗಿಳಿದು ಕೊಂಚ ದೂರ ಹೋಗುತ್ತಿದ್ದಂತೆ ಕೂಗತೊಡಗಿದೆ!

ಕೊನೆಗೆ ನರಸಿಂಹರಾಜು ಅವರೇ ನನ್ನ ಬಳಿ ಬಂದರು. ನೀರೊಳಗೇ ನನ್ನ ಕೈ ಹಿಡಿದುಕೊಂಡು, ತಾವೇ ಮುಳುಗುತ್ತಿರುವಂತೆ `ಆ್ಯಕ್ಷನ್’ ಮಾಡಿದರು. ನಾನು ಧೈರ್ಯ ಮಾಡಿ ಅವರನ್ನು ಕಾಪಾಡುವವಳಂತೆ ನಟಿಸಿದೆ(!). ಅಂತೂ ಇಂತೂ ನಿರ್ದೇಶಕರು ಶಾಟ್ ಓಕೆ ಮಾಡಿದರು. ಇಲ್ಲಿ ಯಾರನ್ನು ಯಾರು ಕಾಪಾಡಿದರು ಎನ್ನುವ ಗೊಂದಲದಿಂದ ನರಸಿಂಹರಾಜು ಮತ್ತು ನಾನು ಇಬ್ಬರೂ ಮನಸಾರೆ ನಕ್ಕೆವು.

ನಿರೂಪಣೆ: ಶಶಿಧರ ಚಿತ್ರದುರ್ಗ


ಓದಿ: ವಿಲನ್‍ಗೆ ಡ್ಯೂಪ್ ಆದ ಆಪತ್ಭಾಂಧವ ಶಿವರಾಜ್‌ಕುಮಾರ್‌ಗೆ ಜನ್ಮದಿನದ ಶುಭಾಶಯಗಳು: ಚಿ.ಗುರುದತ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...