Homeಮುಖಪುಟಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

- Advertisement -
- Advertisement -

ಅಸ್ಸಾಂ, ಬಿಹಾರ, ಉತ್ತರಾಖಂಡ, ಮತ್ತು ಉತ್ತರ ಪ್ರದೇಶದ ಪ್ರವಾಹ ಪರಿಸ್ಥಿತಿ ಗುರುವಾರ (ಜುಲೈ 23) ಹದಗೆಟ್ಟಿದ್ದು, ಅಸ್ಸಾಂ ಮತ್ತು ಬಿಹಾರದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ಒಟ್ಟು 16 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಅಸ್ಸಾಂ ಮತ್ತು 20 ಬಿಹಾರದಲ್ಲಿ ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್. ಎನ್. ಪ್ರಧಾನ್ ತಿಳಿಸಿದ್ದಾರೆ.

ಅಸ್ಸಾಂನ 26 ಜಿಲ್ಲೆಗಳಲ್ಲಿನ 26 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರವಾಹದಲ್ಲಿ 89 ಜನರು ಹಾಗೂ ಭೂಕುಸಿತದಲ್ಲಿ 26 ಸಾವುಗಳು ಸೇರಿದಂತೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತದಲ್ಲಿ ರಾಜ್ಯದಾದ್ಯಂತ ಪ್ರಾಣ ಕಳೆದುಕೊಂಡ ಒಟ್ಟು ಜನರ ಸಂಖ್ಯೆ 115 ಕ್ಕೆ ಏರಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ನೀಡಿರುವ ಬುಧವಾರದ ವರದಿಯ ಪ್ರಕಾರ, ಮೊರಿಗಾಂವ್ ಜಿಲ್ಲೆಯ ಬಾರ್‌ಪೆಟಾದ ಬಾಗ್‌ಬೋರ್ ಮತ್ತು ಮೊರಿಗಾಂವ್ ವಲಯದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗೋಲ್ಪಾರವು 4.68 ಲಕ್ಷಕ್ಕೂ ಹೆಚ್ಚು ಪ್ರವಾಹ ಪೀಡಿತ ಜನರಿರುವ ಜಿಲ್ಲೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಬಾರ್‌ಪೆಟಾದಲ್ಲಿ 3.82 ಲಕ್ಷ ಜನರು ಮತ್ತು ಮೊರಿಗಾಂವ್ ನಲ್ಲಿ 3.08 ಲಕ್ಷ ಜನರು ಭಾಧಿತರಾಗಿದ್ದಾರೆ. ಗೋವಾ ಮೌಜಾದ ಮೇಘಾಲಯದಿಂದ ಹರಿಯುವ ನದಿಯ ನೀರಿನ ಮಟ್ಟ ಹಠಾತ್ ಹೆಚ್ಚಳವಾಗಿದ್ದರಿಂದ ರಾತ್ರಿಯಿಡೀ ನೂರಾರು ಜನರು ನಿರಾಶ್ರಿತರಾದರು.

“ಇದು ಹಠಾತ್ತನೆ ಬಂದೆರಗಿದ ಪ್ರವಾಹವಾಗಿದ್ದು. ನಾವು ಸಧ್ಯಕ್ಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸ್ತುತ ಇಲ್ಲಿ ನೀರು ಕಡಿಮೆಯಾಗಿದೆ ಆದರೆ ಇನ್ನೊಂದು ತುದಿಯಲ್ಲಿ ಹೆಚ್ಚುತ್ತಿದೆ” ಎಂದು ಪ್ರವಾಹದಿಂದ ಬದುಕುಳಿದ ರಂಜಿತ್ ಬೈಶ್ನಾಬ್ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ವೃದ್ಧರು, ಮಕ್ಕಳೂ ಸೇರಿದಂತೆ ಸ್ಥಳಾಂತರಿಸಲ್ಪಟ್ಟವರೆಲ್ಲರೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ವರದಿಯಾಗಿದೆ.

ಮೊರಿಗಾಂವ್ ಜಿಲ್ಲೆಯ 300 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಪೀಡಿತವಾಗಿವೆ. ಮೊರಿಗಾಂವ್‌ನ ಮಾಯೊಂಗ್ ವೃತ್ತವು ಹೆಚ್ಚು ಪೀಡಿತ ಗ್ರಾಮಗಳಲ್ಲಿ ಒಂದಾಗಿದೆ.

ಬುಧವಾರ ರಾತ್ರಿಯ ಹೊತ್ತಿಗೆ, ಅಸ್ಸಾಂನಾದ್ಯಂತ 2,525 ಹಳ್ಳಿಗಳು ನೀರಿನಲ್ಲಿ ಮುಳುಗಿದ್ದು, 1.15 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಬೆಳೆ  ನಾಶವಾಗಿದೆ ಎಂದು ASDMA ತಿಳಿಸಿದೆ.

ಪ್ರವಾಹವು ಇಲ್ಲಿಯವರೆಗೆ 120 ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಾದ್ಯಂತ 23,89,401 ಸಾಕು ಪ್ರಾಣಿಗಳು ಮತ್ತು ಕೋಳಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಆರಂಭಿಕ ಅನುದಾನವಾಗಿ ಕೇಂದ್ರವು ಶೀಘ್ರದಲ್ಲೇ 346 ಕೋಟಿ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಅವರು ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಅದು ಹೇಳಿದೆ.

ಆದರೆ ಈ ದೀರ್ಘಕಾಲಿಕ ಸಮಸ್ಯೆಯನ್ನು ನಿಭಾಯಿಸಲು ಹಿಂದೆ ಘೋಷಿಸಿದ ಹಣವನ್ನೇ ಬಿಡುಗಡೆ ಮಾಡದಿರುವ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ, ಬಿಹಾರದ 10 ಜಿಲ್ಲೆಗಳಲ್ಲಿ 4.6 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ ಎಂದು ರಾಜ್ಯ ಸರ್ಕಾರ ವರದಿ ಬಿಡುಗಡೆ ಮಾಡಿದೆ. ಬುಧವಾರದವರೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...