Homeಅಂಕಣಗಳುಶಾರದೆ ಪೂಜೆ ಸಂವಿಧಾನದಲ್ಲೇ ಅದೆ ಕಂಡ್ರಿ !

ಶಾರದೆ ಪೂಜೆ ಸಂವಿಧಾನದಲ್ಲೇ ಅದೆ ಕಂಡ್ರಿ !

- Advertisement -
- Advertisement -

ದಷ್ಟಪುಷ್ಟವಾಗಿ ಬೆಳೆದ ಹಳ್ಳಿಕಾರ ಹೋರಿಯ ಬೀಜದಂತೆ ಕಾಣುವ ಈ ಸರಕಾರವನ್ನು ನೋಡಿದ ಬಿಜೆಪಿ ನರಿಗಳು ಖುಷಿಯಿಂದ ಊಳಿಡುತ್ತಿರಬೇಕಾದರೆ, ಅತ್ತ ದೇವೇಗೌಡರು ಮತ್ತು ಕುಮಾರಣ್ಣನವರು ಶೃಂಗೇರಿಯ ಶಾರದಾಂಬೆಯ ಆವರಣದಲ್ಲಿ ರವಿಕೆ ಹಾಕದ ವಡ್ಡರಂತೆ ಕುಳಿತು ಅದೇನೇನೋ ಮಾಡುತ್ತಿರುವ ದೃಶ್ಯ ನೋಡಿ ಫೋನು ಮಾಡಿ ಕೇಳಬೇಕೆನಿಸಿತ್ತಲ್ಲಾ. ಕೂಡಲೇ ಫೋನ್ ಮಾಡಲಾಗಿ ಕುಮಾರಣ್ಣನ ಫೋನ್ ರಿಂಗಾಯ್ತು.
ರಿಂಗ್ ಟೋನ್- “ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ ನೋಡಲೆರಡು ಕಣ್ಣು ನಮಗೆ ಸಾಲದಮ್ಮ…………..

ಹಲೋ ಯಾರ್ರಿ ಮಾತಾಡದು”
“ತಾವ್ಯಾರು ಸಾರ್”
“ನಾನು ಭೋಜೆಗೌಡ.”
“ಭೋಜೆಗೌಡ್ರೆ ಕುಮಾರಣ್ಣನಿಗೆ ಫೋನ್ ಕೊಡಿ ನಾನು ಯಾಹೂ.”
“ಕೊಟ್ಟೆ ಮಾತಾಡಿ.”
“ನಮಸ್ಕಾರ ಕುಮಾರಣ್ಣರಿಗೆ ನಾನು ಯಾಹೂ.”
“ಏನೇಳ್ರಿ ಯಾಹೂ ಟೈಮಿಲ್ಲ.”
“ಒಂದೆರಡು ಮಾತು ಸಾರ್.”
“ಕೇಳಿ.”
“ಶೃಂಗೇರಿಲಿ ನಿಮ್ಮನ್ನ ಅಂಥ ಆಕಾರದಲ್ಲಿ ನೋಡಿ ಬಾಳ ಖುಷಿಯಾಯ್ತು ಸಾರ್. ಪೂಜೆ ಚೆನ್ನಾಗಿತ್ತಾ?”
“ಚೆನ್ನಾಗಿತ್ತು ಕಂಡ್ರಿ, ಕರ್ನಾಟಕ ಸರಕಾರದ ಕೆಲಸ ಮಾಡದರ ಜೊತೆಗೆ ಆಗಾಗ್ಗೆ ಬಂದು ಶಾರದಾಂಬೆ ಪೂಜೆ ಮಾಡತಕ್ಕಂತ ಪರಿಪಾಠವನ್ನ ಇಟ್ಟುಗೊಬೇಕು ಅಂತ ಅನ್ನಸ್ತು.”
“ಅದು ಸಹಜ ಸಾರ್, ವಿದ್ಯೆ ಬುದ್ಧಿಯ ಕೊರತೆ ಇದ್ದೋರು ಶಾರದೆ ಪೂಜೆ ಮಾಡ್ತಾರೆ.”
“ಅಂಗೇನು ಇಲ್ಲ. ನಮಿಗೆಲ್ಲಾ ಬುದ್ಧಿ ಕೊಡತಕ್ಕಂತ ಶಾರದೆ ನನ್ನ ಸರಕಾರದ ವಿರುದ್ಧ ಏನು ಅಪಸ್ವರಗಳಿಂದ ಮಾತನಾಡ್ತಾರೆ, ಅಂತವರಿಗೆಲ್ಲಾ ಒಳ್ಳೆ ಬುದ್ಧಿ ಕೊಡ್ಲಿ ಅಂತ ಹೇಳಿ ನಾನು ನಮ್ಮ ತಂದೆಯವರ ಸಲಹೆ ಮೇರೆಗೆ ಇಲ್ಲಿಗೆ ಬಂದು ಪೂಜೆ ಮಾಡಿ ಬೆಳಗಾವಿಗೆ ಹೋದೆ.”
“ಕುಮಾರಣ್ಣಂಗೆ ಬುದ್ಧಿ ಕೊಡುವವನು ಗಣೇಶ, ವಿದ್ಯೆ ಕೊಡೋಳು ಸರಸ್ವತಿ, ದುಡ್ಡು ಕೊಡೋಳು ಲಕ್ಷ್ಮಿ. ನಿಮಗೆ ಲಕ್ಷ್ಮಿ ಕೊರತೆ ಇಲ್ಲ ವಿದ್ಯೆ ಬುದ್ದಿ ಕೊರತೆ ಎದ್ದು ಕಾಣ್ತಾಯಿದೆ ಅಂತ ಕರ್ನಾಟಕದ ಜನ ಆಡಿಕೊಳ್ತ ಅವುರೆ.”
“ಆಡಿಕೊಳ್ತಕಂತ ಜನಗಳಿಗೆ ನಾವು ತಲೆ ಕೆಡಿಸಿಕೋಬೇಕಾಗಿಲ್ಲ ಅವರು ಸುಮ್ಮನಿದ್ರು ಆಡಿಕೊಳ್ತಾರೆ ಹೀಗೆ ಪೂಜೆ ಮಾಡಿದ್ರು ಆಡಿಕೊಳ್ತಾರೆ.”
“ಅಲ್ಲ ಸಾರ್, ಆ ಶೃಂಗೇರಿ ಬಿಜೆಪಿ ಪಾರ್ಟಿಯ ಬ್ರಾಂಚ್ ತರ ಕೆಲಸ ಮಾಡುತ್ತೆ. ಅವುರು ಏನೇ ಮಾಡಿದ್ರು ಅದು ಶ್ರೇಣೀಕೃತ ಸಮಾಜದ ಕಳಸದಂಗಿರೊ ಬ್ರಾಹ್ಮಣರಿಗಾಗಿ ಇರೊ ಮಠ ಗೊತ್ತ.”
“ನಿಮ್ಮ ಆಪಾದನೆ ನಾನು ಅಲ್ಲಗಳೀತಿನಿ.”
“ನೀವು ಅಲ್ಲಗಳೆಯೋದು ಸಹಜ. ದೇವಸ್ಥಾನದ ಹೊಸಿಲಲ್ಲೇ ಮೂರು ಕಮಲದ ಚಿತ್ರ ಕೆತ್ತಿದಾರೆ. ಆ ಕಮಲ ಬಿಜೆಪಿ ಸಿಂಬಲ್ಲು ಗೊತ್ತ.”
“ನಾನು ಹೊಸಲು ದಾಟಿಕೊಂಡೋದೆ ನೋಡಲಿಲ್ಲ.”
“ವಿದ್ಯೆ ಬುದ್ಧಿ ಕೊರತೆ ಇದ್ದಾಗ ಅಂಥವು ಅರಿವಿಗೇ ಬರದಿಲ್ಲ ಇರ್ಲಿ. ಈ ಹಿಂದೆ ಶಾರದಾಂಬೆನ ಬಂಡೆ ಮೇಲೆ ಕೂರಿಸಿದ ಚಿತ್ರ ಬರಿತಿದ್ರು.”
“ಹೌದೆ.”
“ಹೌದು ಸಾರ್ ವಿದ್ಯೆ ಬಂಡೆ ಇದ್ದಂಗೆ ನಾವು ಸಾಯೋವರಿಗೂ ಆ ಬಂಡೆ ಮೇಲೆ ಕೂತಗಂಡು ದೇಶ ಆಳಬಹುದು ಅನ್ನೊ ಸಂಕೇತ ಆ ಬಂಡೆ.”
“ಹೌದೆ.”
“ಈಗ ಬಿಜೆಪಿ ಆರ್ಟಿಸ್ಟುಗಳು ಏನು ಮಾಡ್ಯವುರೆ ಗೊತ್ತ ಸಾರ್, ಶೃಂಗೇರಿ ಶಾರದಾಂಬೆನ ಕಮಲದ ಮೇಲೆ ಕೂರಿಸಿದಾರೆ. ಅಷ್ಟೇ ಅಲ್ಲ, ಪೀಠದ ಮೇಲಿದ್ದ ಗಣಪತಿನೂ ಕಮಲದ ಮೇಲೆ ಕೂರಿಸಿದಾರೆ, ಇನ್ನು ಲಕ್ಷ್ಮಿಯಂತೂ ಯಾವಾಗ್ಲೂ ಕಮಲದ ಮೇಲಿದ್ಲು. ಅವುಳ ಅಂಗೇ ಬರದವುರೆ. ಇನ್ನ ಮುಂದೆ ಈ ಚೆಡ್ಡಿ ಕಲಾವಿದರು ನಮ್ಮ ಎಲ್ಲಾ ದೇವರುಗಳನ್ನ ಕಮಲದ ಮೇಲೆ ಕೂರುಸ್ತಾರೆ ಸಾರ್.”
“ಕೂರುಸ್ಲಿ ಬಿಡಿ.”
“ಅಲ್ಲ ಸಾರ್, ಈಗಾಗ್ಲೆ ಕಾರಿನ ಹಿಂಬದಿ ಗಾಜಿನಲ್ಲಿ ಮೆಡ್ಡಗಣ್ಣಿನ ಆಂಜನೇಯನ ಫೋಟಾ ಬರ್ಯೆಕತ್ತಾ ಅವುರೆ. ಪಾಪ ಆಂಜನೇಯನ ಆಕಾರನ ಹಾಳು ಮಾಡಿದ ಜನ, ಮುಂದೆ ಏನಾದ್ರೂ ಮಾಡ್ತಾರೆ. ನೀವು ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದಿರಬೇಕು.”
“ಎಚ್ಚರಿಕೆ ಅಂದ್ರೆ.”
“ಆ ಶೃಂಗೇರಿಗ್ಯಾಕೊಯ್ತಿರಿ ಅದರ ಬದ್ಲು ಜಾರಕಿಹೊಳಿ ಮಾತಾಡಿಸಿ. ಎಂ.ಬಿ ಪಾಟೀಲ, ಬಿ.ಸಿ ಪಾಟೀಲನ ಮಾತಾಡಿಸಿ. ಅವುರ ಕೈಗೊಂದು ಉಂಗುರ ಕೊಡಿ, ಮುತ್ತು ಕೊಡಿ ಅದು ಬುಟ್ಟು ಆ ಶೃಂಗೇರಿ ಬ್ರಾಹ್ಮಣರಿಗೆ ಕೇಳಿದಷ್ಟು ಒಡವೆ ವಸ್ತ್ರ ಕೊಡ್ತಿರಲ್ಲಾ ಟಿಪ್ಪು ಸುಲ್ತಾನ್ ತರ, ನಿಮ್ಮ ಸರಕಾರ ಉಳಿತಾದ ಸಾರ್”
“ನಮ್ಮ ತಂದೆಯವರು ಹೇಳಿದ ಪ್ರಕಾರ ಶೃಂಗೇರಿ ಶಾರದಾಂಬೆ ಕೃಪೆಯಿಂದ ನಮ್ಮ ಸರಕಾರ ರಚನೆಯಾಯ್ತಂತೆ. ಆಕೆಯ ಅನುಗ್ರಹ ಇದ್ರೆ ಮುಂದೆ ಅವುಳೆ ಸರಕಾರನ ಕಾಪಾಡ್ತಳೆ ಅಂತ ಪೂಜೆ ಮಾಡಿಸಿದ್ದು. ಪೂಜೆ ಮಾಡದÀು ತಪ್ಪಾ.”
“ತಪ್ಪು ಸಾರ್, ನಿಮ್ಮ ಸರಕಾರ ರಚನೆ ಮಾಡಂಗೆ ಮಾಡಿದೋರು ಒಕ್ಕಲಿಗರು. ಅವುರು ಸಾಮೂಹಿಕವಾಗಿ ನಮ್ಮ ಕುಮಾರಣ್ಣನ ಮುಖ್ಯಮಂತ್ರಿ ಮಾಡಬೇಕು ಅಂತ ಓಟು ಮಾಡಿದ್ರು, ಶೃಂಗೇರಿ ಬ್ರಾಹ್ಮಣರಲ್ಲ. ನೀವು ಕೃತಜ್ಞತೆ ಸಲ್ಲಿಸಬೇಕಾದ್ದು ಜನಾಂಗದ ಮತದಾರರಿಗೆ, ಅದು ಬಿಟ್ಟು ಪುರೋಹಿತರ ದೇವರಿಗಲ್ಲ.”
“ಶಾರದಾಂಬೆ ಎಲ್ಲರಿಗೂ ದೇವರು ಗೊತ್ತ.”
“ಗೋಪಾಲಗೌಡ್ರು ಗೊತ್ತ ಸಾರ್”
“ಗೊತ್ತು ಅದೇ ಜಡಜು ಗೋಪಾಲಗೌಡ್ರು.”
“ಅವುರಲ್ಲ ಸಾರ್ ತೀರ್ಥಹಳ್ಳಿ-ಸಾಗರದಿಂದ ಮೂರು ಸಾರಿ ಗೆದ್ದು ಶಾಸಕರಾಗಿದ್ರು.”
“ಕೇಳಿದ್ದಿನಿ.”
“ಅವುರು ಮೂರು ಬಾರಿ ಶಾಸಕರಾಗಿದ್ರು ತೀರಿಕೊಂಡಾಗ ಒಂದು ಮನೆ ಇರಲಿಲ್ಲ, ಒಂದು ಸೈಟು ಇರಲಿಲ್ಲ, ಬ್ಯಾಂಕ್ ಅಕವುಂಟೇ ಇರಲಿಲ್ಲ.”
“ಪಾಪ ಯಾಕಂಗಿದ್ರು.”
“ಸೋಷಲಿಸ್ಟ್ ಪಾರ್ಟಿ ಕಟ್ಟೋರ ಸಿದ್ಧಾಂತ ಫಾಲೊ ಮಾಡಿ ಅಂಗಿದ್ರು. ಅವುರು ಹೇಳಿದ ಪ್ರಕಾರ ಕಾಗದವನ್ನ ಸರಸ್ವತಿ ಅನ್ನಕ್ಕಾಗಲ್ಲಾ ಈ ಬ್ರಾಹ್ಮಣರು ಹೊಟ್ಟೆಪಾಡಿಗೆ ಎಲ್ಲದಕ್ಕೂ ಒಂದು ಆಕಾರ ಕೊಟ್ಟು, ವಿಗ್ರಹ ಮಾಡಿ ಗರ್ಭಗುಡಿ ಮಾಡಿಕೊಂಡು ದಕ್ಷಿಣೆ ದತ್ತೀಲಿ ಜೀವನ ಮಾಡ್ತ ಅವುರಂತೆ, ಅಂತ ಜಾಗಕ್ಕೋಗಿ ಸರಕಾರ ಉಳಿಸಕ್ಕೆ ಪೂಜೆ ಮಾಡ್ತಾ ಸಮಯ ಹಾಳು ಮಾಡ್ತ ಕುಂತಿದ್ದೀರಲ್ಲಾ ಇದು ಸಂವಿಧಾನ ವಿರೋಧಿ ಕೆಲಸ ಅಲ್ಲವೆ?”
“ಪೂಜೆ ಮಾಡ್ತಕಂತ ವಿಷಯ ಏನಿದೆ ಅದು ನಮ್ಮ ಸಂವಿಧಾನದಲ್ಲೇ ಅದೆ ಕಂಡ್ರಿ.”
ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...