Homeಅಂಕಣಗಳುಶಾರದೆ ಪೂಜೆ ಸಂವಿಧಾನದಲ್ಲೇ ಅದೆ ಕಂಡ್ರಿ !

ಶಾರದೆ ಪೂಜೆ ಸಂವಿಧಾನದಲ್ಲೇ ಅದೆ ಕಂಡ್ರಿ !

- Advertisement -
- Advertisement -

ದಷ್ಟಪುಷ್ಟವಾಗಿ ಬೆಳೆದ ಹಳ್ಳಿಕಾರ ಹೋರಿಯ ಬೀಜದಂತೆ ಕಾಣುವ ಈ ಸರಕಾರವನ್ನು ನೋಡಿದ ಬಿಜೆಪಿ ನರಿಗಳು ಖುಷಿಯಿಂದ ಊಳಿಡುತ್ತಿರಬೇಕಾದರೆ, ಅತ್ತ ದೇವೇಗೌಡರು ಮತ್ತು ಕುಮಾರಣ್ಣನವರು ಶೃಂಗೇರಿಯ ಶಾರದಾಂಬೆಯ ಆವರಣದಲ್ಲಿ ರವಿಕೆ ಹಾಕದ ವಡ್ಡರಂತೆ ಕುಳಿತು ಅದೇನೇನೋ ಮಾಡುತ್ತಿರುವ ದೃಶ್ಯ ನೋಡಿ ಫೋನು ಮಾಡಿ ಕೇಳಬೇಕೆನಿಸಿತ್ತಲ್ಲಾ. ಕೂಡಲೇ ಫೋನ್ ಮಾಡಲಾಗಿ ಕುಮಾರಣ್ಣನ ಫೋನ್ ರಿಂಗಾಯ್ತು.
ರಿಂಗ್ ಟೋನ್- “ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ ನೋಡಲೆರಡು ಕಣ್ಣು ನಮಗೆ ಸಾಲದಮ್ಮ…………..

ಹಲೋ ಯಾರ್ರಿ ಮಾತಾಡದು”
“ತಾವ್ಯಾರು ಸಾರ್”
“ನಾನು ಭೋಜೆಗೌಡ.”
“ಭೋಜೆಗೌಡ್ರೆ ಕುಮಾರಣ್ಣನಿಗೆ ಫೋನ್ ಕೊಡಿ ನಾನು ಯಾಹೂ.”
“ಕೊಟ್ಟೆ ಮಾತಾಡಿ.”
“ನಮಸ್ಕಾರ ಕುಮಾರಣ್ಣರಿಗೆ ನಾನು ಯಾಹೂ.”
“ಏನೇಳ್ರಿ ಯಾಹೂ ಟೈಮಿಲ್ಲ.”
“ಒಂದೆರಡು ಮಾತು ಸಾರ್.”
“ಕೇಳಿ.”
“ಶೃಂಗೇರಿಲಿ ನಿಮ್ಮನ್ನ ಅಂಥ ಆಕಾರದಲ್ಲಿ ನೋಡಿ ಬಾಳ ಖುಷಿಯಾಯ್ತು ಸಾರ್. ಪೂಜೆ ಚೆನ್ನಾಗಿತ್ತಾ?”
“ಚೆನ್ನಾಗಿತ್ತು ಕಂಡ್ರಿ, ಕರ್ನಾಟಕ ಸರಕಾರದ ಕೆಲಸ ಮಾಡದರ ಜೊತೆಗೆ ಆಗಾಗ್ಗೆ ಬಂದು ಶಾರದಾಂಬೆ ಪೂಜೆ ಮಾಡತಕ್ಕಂತ ಪರಿಪಾಠವನ್ನ ಇಟ್ಟುಗೊಬೇಕು ಅಂತ ಅನ್ನಸ್ತು.”
“ಅದು ಸಹಜ ಸಾರ್, ವಿದ್ಯೆ ಬುದ್ಧಿಯ ಕೊರತೆ ಇದ್ದೋರು ಶಾರದೆ ಪೂಜೆ ಮಾಡ್ತಾರೆ.”
“ಅಂಗೇನು ಇಲ್ಲ. ನಮಿಗೆಲ್ಲಾ ಬುದ್ಧಿ ಕೊಡತಕ್ಕಂತ ಶಾರದೆ ನನ್ನ ಸರಕಾರದ ವಿರುದ್ಧ ಏನು ಅಪಸ್ವರಗಳಿಂದ ಮಾತನಾಡ್ತಾರೆ, ಅಂತವರಿಗೆಲ್ಲಾ ಒಳ್ಳೆ ಬುದ್ಧಿ ಕೊಡ್ಲಿ ಅಂತ ಹೇಳಿ ನಾನು ನಮ್ಮ ತಂದೆಯವರ ಸಲಹೆ ಮೇರೆಗೆ ಇಲ್ಲಿಗೆ ಬಂದು ಪೂಜೆ ಮಾಡಿ ಬೆಳಗಾವಿಗೆ ಹೋದೆ.”
“ಕುಮಾರಣ್ಣಂಗೆ ಬುದ್ಧಿ ಕೊಡುವವನು ಗಣೇಶ, ವಿದ್ಯೆ ಕೊಡೋಳು ಸರಸ್ವತಿ, ದುಡ್ಡು ಕೊಡೋಳು ಲಕ್ಷ್ಮಿ. ನಿಮಗೆ ಲಕ್ಷ್ಮಿ ಕೊರತೆ ಇಲ್ಲ ವಿದ್ಯೆ ಬುದ್ದಿ ಕೊರತೆ ಎದ್ದು ಕಾಣ್ತಾಯಿದೆ ಅಂತ ಕರ್ನಾಟಕದ ಜನ ಆಡಿಕೊಳ್ತ ಅವುರೆ.”
“ಆಡಿಕೊಳ್ತಕಂತ ಜನಗಳಿಗೆ ನಾವು ತಲೆ ಕೆಡಿಸಿಕೋಬೇಕಾಗಿಲ್ಲ ಅವರು ಸುಮ್ಮನಿದ್ರು ಆಡಿಕೊಳ್ತಾರೆ ಹೀಗೆ ಪೂಜೆ ಮಾಡಿದ್ರು ಆಡಿಕೊಳ್ತಾರೆ.”
“ಅಲ್ಲ ಸಾರ್, ಆ ಶೃಂಗೇರಿ ಬಿಜೆಪಿ ಪಾರ್ಟಿಯ ಬ್ರಾಂಚ್ ತರ ಕೆಲಸ ಮಾಡುತ್ತೆ. ಅವುರು ಏನೇ ಮಾಡಿದ್ರು ಅದು ಶ್ರೇಣೀಕೃತ ಸಮಾಜದ ಕಳಸದಂಗಿರೊ ಬ್ರಾಹ್ಮಣರಿಗಾಗಿ ಇರೊ ಮಠ ಗೊತ್ತ.”
“ನಿಮ್ಮ ಆಪಾದನೆ ನಾನು ಅಲ್ಲಗಳೀತಿನಿ.”
“ನೀವು ಅಲ್ಲಗಳೆಯೋದು ಸಹಜ. ದೇವಸ್ಥಾನದ ಹೊಸಿಲಲ್ಲೇ ಮೂರು ಕಮಲದ ಚಿತ್ರ ಕೆತ್ತಿದಾರೆ. ಆ ಕಮಲ ಬಿಜೆಪಿ ಸಿಂಬಲ್ಲು ಗೊತ್ತ.”
“ನಾನು ಹೊಸಲು ದಾಟಿಕೊಂಡೋದೆ ನೋಡಲಿಲ್ಲ.”
“ವಿದ್ಯೆ ಬುದ್ಧಿ ಕೊರತೆ ಇದ್ದಾಗ ಅಂಥವು ಅರಿವಿಗೇ ಬರದಿಲ್ಲ ಇರ್ಲಿ. ಈ ಹಿಂದೆ ಶಾರದಾಂಬೆನ ಬಂಡೆ ಮೇಲೆ ಕೂರಿಸಿದ ಚಿತ್ರ ಬರಿತಿದ್ರು.”
“ಹೌದೆ.”
“ಹೌದು ಸಾರ್ ವಿದ್ಯೆ ಬಂಡೆ ಇದ್ದಂಗೆ ನಾವು ಸಾಯೋವರಿಗೂ ಆ ಬಂಡೆ ಮೇಲೆ ಕೂತಗಂಡು ದೇಶ ಆಳಬಹುದು ಅನ್ನೊ ಸಂಕೇತ ಆ ಬಂಡೆ.”
“ಹೌದೆ.”
“ಈಗ ಬಿಜೆಪಿ ಆರ್ಟಿಸ್ಟುಗಳು ಏನು ಮಾಡ್ಯವುರೆ ಗೊತ್ತ ಸಾರ್, ಶೃಂಗೇರಿ ಶಾರದಾಂಬೆನ ಕಮಲದ ಮೇಲೆ ಕೂರಿಸಿದಾರೆ. ಅಷ್ಟೇ ಅಲ್ಲ, ಪೀಠದ ಮೇಲಿದ್ದ ಗಣಪತಿನೂ ಕಮಲದ ಮೇಲೆ ಕೂರಿಸಿದಾರೆ, ಇನ್ನು ಲಕ್ಷ್ಮಿಯಂತೂ ಯಾವಾಗ್ಲೂ ಕಮಲದ ಮೇಲಿದ್ಲು. ಅವುಳ ಅಂಗೇ ಬರದವುರೆ. ಇನ್ನ ಮುಂದೆ ಈ ಚೆಡ್ಡಿ ಕಲಾವಿದರು ನಮ್ಮ ಎಲ್ಲಾ ದೇವರುಗಳನ್ನ ಕಮಲದ ಮೇಲೆ ಕೂರುಸ್ತಾರೆ ಸಾರ್.”
“ಕೂರುಸ್ಲಿ ಬಿಡಿ.”
“ಅಲ್ಲ ಸಾರ್, ಈಗಾಗ್ಲೆ ಕಾರಿನ ಹಿಂಬದಿ ಗಾಜಿನಲ್ಲಿ ಮೆಡ್ಡಗಣ್ಣಿನ ಆಂಜನೇಯನ ಫೋಟಾ ಬರ್ಯೆಕತ್ತಾ ಅವುರೆ. ಪಾಪ ಆಂಜನೇಯನ ಆಕಾರನ ಹಾಳು ಮಾಡಿದ ಜನ, ಮುಂದೆ ಏನಾದ್ರೂ ಮಾಡ್ತಾರೆ. ನೀವು ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದಿರಬೇಕು.”
“ಎಚ್ಚರಿಕೆ ಅಂದ್ರೆ.”
“ಆ ಶೃಂಗೇರಿಗ್ಯಾಕೊಯ್ತಿರಿ ಅದರ ಬದ್ಲು ಜಾರಕಿಹೊಳಿ ಮಾತಾಡಿಸಿ. ಎಂ.ಬಿ ಪಾಟೀಲ, ಬಿ.ಸಿ ಪಾಟೀಲನ ಮಾತಾಡಿಸಿ. ಅವುರ ಕೈಗೊಂದು ಉಂಗುರ ಕೊಡಿ, ಮುತ್ತು ಕೊಡಿ ಅದು ಬುಟ್ಟು ಆ ಶೃಂಗೇರಿ ಬ್ರಾಹ್ಮಣರಿಗೆ ಕೇಳಿದಷ್ಟು ಒಡವೆ ವಸ್ತ್ರ ಕೊಡ್ತಿರಲ್ಲಾ ಟಿಪ್ಪು ಸುಲ್ತಾನ್ ತರ, ನಿಮ್ಮ ಸರಕಾರ ಉಳಿತಾದ ಸಾರ್”
“ನಮ್ಮ ತಂದೆಯವರು ಹೇಳಿದ ಪ್ರಕಾರ ಶೃಂಗೇರಿ ಶಾರದಾಂಬೆ ಕೃಪೆಯಿಂದ ನಮ್ಮ ಸರಕಾರ ರಚನೆಯಾಯ್ತಂತೆ. ಆಕೆಯ ಅನುಗ್ರಹ ಇದ್ರೆ ಮುಂದೆ ಅವುಳೆ ಸರಕಾರನ ಕಾಪಾಡ್ತಳೆ ಅಂತ ಪೂಜೆ ಮಾಡಿಸಿದ್ದು. ಪೂಜೆ ಮಾಡದÀು ತಪ್ಪಾ.”
“ತಪ್ಪು ಸಾರ್, ನಿಮ್ಮ ಸರಕಾರ ರಚನೆ ಮಾಡಂಗೆ ಮಾಡಿದೋರು ಒಕ್ಕಲಿಗರು. ಅವುರು ಸಾಮೂಹಿಕವಾಗಿ ನಮ್ಮ ಕುಮಾರಣ್ಣನ ಮುಖ್ಯಮಂತ್ರಿ ಮಾಡಬೇಕು ಅಂತ ಓಟು ಮಾಡಿದ್ರು, ಶೃಂಗೇರಿ ಬ್ರಾಹ್ಮಣರಲ್ಲ. ನೀವು ಕೃತಜ್ಞತೆ ಸಲ್ಲಿಸಬೇಕಾದ್ದು ಜನಾಂಗದ ಮತದಾರರಿಗೆ, ಅದು ಬಿಟ್ಟು ಪುರೋಹಿತರ ದೇವರಿಗಲ್ಲ.”
“ಶಾರದಾಂಬೆ ಎಲ್ಲರಿಗೂ ದೇವರು ಗೊತ್ತ.”
“ಗೋಪಾಲಗೌಡ್ರು ಗೊತ್ತ ಸಾರ್”
“ಗೊತ್ತು ಅದೇ ಜಡಜು ಗೋಪಾಲಗೌಡ್ರು.”
“ಅವುರಲ್ಲ ಸಾರ್ ತೀರ್ಥಹಳ್ಳಿ-ಸಾಗರದಿಂದ ಮೂರು ಸಾರಿ ಗೆದ್ದು ಶಾಸಕರಾಗಿದ್ರು.”
“ಕೇಳಿದ್ದಿನಿ.”
“ಅವುರು ಮೂರು ಬಾರಿ ಶಾಸಕರಾಗಿದ್ರು ತೀರಿಕೊಂಡಾಗ ಒಂದು ಮನೆ ಇರಲಿಲ್ಲ, ಒಂದು ಸೈಟು ಇರಲಿಲ್ಲ, ಬ್ಯಾಂಕ್ ಅಕವುಂಟೇ ಇರಲಿಲ್ಲ.”
“ಪಾಪ ಯಾಕಂಗಿದ್ರು.”
“ಸೋಷಲಿಸ್ಟ್ ಪಾರ್ಟಿ ಕಟ್ಟೋರ ಸಿದ್ಧಾಂತ ಫಾಲೊ ಮಾಡಿ ಅಂಗಿದ್ರು. ಅವುರು ಹೇಳಿದ ಪ್ರಕಾರ ಕಾಗದವನ್ನ ಸರಸ್ವತಿ ಅನ್ನಕ್ಕಾಗಲ್ಲಾ ಈ ಬ್ರಾಹ್ಮಣರು ಹೊಟ್ಟೆಪಾಡಿಗೆ ಎಲ್ಲದಕ್ಕೂ ಒಂದು ಆಕಾರ ಕೊಟ್ಟು, ವಿಗ್ರಹ ಮಾಡಿ ಗರ್ಭಗುಡಿ ಮಾಡಿಕೊಂಡು ದಕ್ಷಿಣೆ ದತ್ತೀಲಿ ಜೀವನ ಮಾಡ್ತ ಅವುರಂತೆ, ಅಂತ ಜಾಗಕ್ಕೋಗಿ ಸರಕಾರ ಉಳಿಸಕ್ಕೆ ಪೂಜೆ ಮಾಡ್ತಾ ಸಮಯ ಹಾಳು ಮಾಡ್ತ ಕುಂತಿದ್ದೀರಲ್ಲಾ ಇದು ಸಂವಿಧಾನ ವಿರೋಧಿ ಕೆಲಸ ಅಲ್ಲವೆ?”
“ಪೂಜೆ ಮಾಡ್ತಕಂತ ವಿಷಯ ಏನಿದೆ ಅದು ನಮ್ಮ ಸಂವಿಧಾನದಲ್ಲೇ ಅದೆ ಕಂಡ್ರಿ.”
ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...