Homeಮುಖಪುಟಕೆಂಪುಕೋಟೆ: ಸ್ವಾತಂತ್ರೋತ್ಸವಕ್ಕೆ 250 ಗಣ್ಯರಿಗೆ ಮಾತ್ರ ಅವಕಾಶ

ಕೆಂಪುಕೋಟೆ: ಸ್ವಾತಂತ್ರೋತ್ಸವಕ್ಕೆ 250 ಗಣ್ಯರಿಗೆ ಮಾತ್ರ ಅವಕಾಶ

ಕೊರೊನಾ ಸಾಂಕ್ರಮಿಕದಿಂದಾಗಿ ಹಲವು ನಿಬಂಧನೆಗಳ ಮೇರೆಗೆ 74 ನೇ ಸ್ವಾತಂತ್ರೋತ್ಸವ ನಡೆಯಲಿದೆ.

- Advertisement -
- Advertisement -

ಕೆಂಪು ಕೋಟೆಯಲ್ಲಿ ನಡೆಯುವ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೇವಲ 250 ಗಣ್ಯರಿಗೆ ಮಾತ್ರ ಭಾಗವಹಿಸಿವ ಅವಕಾಶವಿದ್ದು, ಇದುವರೆಗೆ ಆಹ್ವಾನಿತರ ಪಟ್ಟಿಯಲ್ಲಿ 900-1,000 ಜನ ಇರುತ್ತಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ಈ ಬದಲಾವಣೆಯಾಗಿದೆ ಎನ್ನಲಾಗಿದೆ.

ಇಂತಹ ಹಲವು ನಿಬಂಧನೆಗಳ ಮೇರೆಗೆ 74 ನೇ ಸ್ವಾತಂತ್ರೋತ್ಸವ ನಡೆಯಲಿದೆ. ಜಗತ್ತಿಗೆ ಆವರಿಸಿರುವ ಕೊರೊನ ಸಾಂಕ್ರಾಮಿಕವೇ ಇದಕ್ಕೆ ಪ್ರಮುಖ ಕಾರಣವಾಗಿದ್ದು. ಹಾಗಾಗಿ ಈ ಉತ್ಸವದಲ್ಲಿ ಶಾಲಾಮಕ್ಕಳು ಭಾಗವಹಿಸಲು ಅವಕಾಶವಿಲ್ಲ. ಪೋಲೀಸ್ ಮತ್ತು ಇತರೆ ಸಿಬ್ಬಂದಿಗಳು ಪಿಪಿಇ ಧರಿಸಿರಬೇಕು. ಅಲ್ಲದೆ ಗಣ್ಯರು ಕೂರುವ ಆಸನಗಳನ್ನು ಸಾಮಾಜಿಕ ಅಂತರದೊಟ್ಟಿಗೆ ಬೇರೆ ಬೇರೆ ಸ್ಥಳಗಳಲ್ಲಿ ಹಾಕಲು ನಿಯೋಜಿಸಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಭೆಯಲ್ಲಿ, ಆಚರಣೆಗೆ ಕೊರೊನಾ ವಾರಿಯರ್‍ಸ್ ಗಳನ್ನು ಗಮನದಲ್ಲಿಟ್ಟುಕೊಂಡು, ಅವರನ್ನೇ ಅತಿಥಿಗಳಾಗಿ ಆಹ್ವಾನಿಸುವ ಸಾದ್ಯತೆಯಿದೆ ಎಂದು ತಿಳಿದು ಬಂದಿದೆ.

ಪ್ರತಿ ವರ್ಷವೂ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡುವಾಗ 900-1,000 ಜನ ಇರುತ್ತಿದ್ದರು. ಆದರೆ ಈ ವರ್ಷ ಕೇವಲ 250 ಜನರಷ್ಟೇ ಇರಲಿದ್ದಾರೆ ಎಂದು ಭಾರತೀಯ ಪುರಾತತ್ವ ಇಲಾಖೆ ಹೇಳಿದೆ. ಹಾಗೆಯೇ ಈ ವರ್ಷದ ಅತಿಥಿಗಳ ಪಟ್ಟಿಯನ್ನು ರಕ್ಷಣಾ ಸಚಿವಾಲಯ ಸಿದ್ಧಪಡಿಸುತ್ತದೆ ಎಂದು ತಿಳಿಸಿದರು.

“ಈ ವರ್ಷ, ಎನ್‌ಸಿಸಿ ಕೆಡೆಟ್‌ಗಳನ್ನು ಹೊರತುಪಡಿಸಿ ಮಕ್ಕಳು ಭಾಗವಹಿಸುವುದಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುವುದು. ಸಿಬ್ಬಂದಿಗಳು ಪಿಪಿಇ ಕಿಟ್‌ಗಳಲ್ಲಿರುತ್ತಾರೆ. ಹಾಗೆಯೇ ಹಲವಾರು ನೈರ್ಮಲ್ಯೀಕರಣ ಕೇಂದ್ರಗಳು ಇರುತ್ತವೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಮೋನಿಕಾ ಭರದ್ವಾಜ್ ಹೇಳಿದರು.

ಇದರ ಕಾರ್ಯರೂಪವನ್ನು ಅಂತಿಮಗೊಳಿಸಲಾಗುವುದು. ಆದರೆ ಇದು ಆಗಸ್ಟ್ ಮಧ್ಯದಲ್ಲಿ ಕೊರೊನಾ ಮತ್ತು ಸ್ಥಳದ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ.

ದಿನಾಚರಣೆಯ ಕಾರಣದಿಂದ ಆಗಸ್ಟ್ 1 ರಿಂದ ಕೆಂಪು ಕೋಟೆಯನ್ನು ಸಾರ್ವಜನಿಕರಿಗೆ ನಿರ್ಭಂದಿಸಲಾಗುತ್ತದೆ. ಇದಕ್ಕೂ ಮೊದಲು ಆಗಸ್ಟ್ 7 ರವರೆಗೆ ಇದು ತೆರೆದಿರುತ್ತಿತ್ತು ಎಂದು ಸಭೆಯಲ್ಲಿ ಭಾಗಿಯಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ಹಾಸ್ಯಚಕ್ರವರ್ತಿ ನರಸಿಂಹರಾಜು ಜನ್ಮದಿನ; ಒಂದು ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...