Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...