Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...