Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...