Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...