Homeಅಂತರಾಷ್ಟ್ರೀಯಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

- Advertisement -
- Advertisement -

ಗಡಿ ಸಂಘರ್ಷದ ನಂತರ ಚೀನಾದೊಟ್ಟಿಗಿನ ವ್ಯವಹಾರಗಳನ್ನು ಹೊರಗಿಡುವುದು ಮತ್ತು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಶಿಥಿಲಗೊಳಿಸುವ ಉದ್ದೇಶದಿಂದ ಭಾರತ ತನ್ನ ನೆರೆಹೊರೆ ದೇಶಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದೆ.

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ, ಟೆಂಡರ್‌ಗಳಿಗೆ ಬಿಡ್ಡಿಂಗ್ ಮಾಡುವಾಗ ಸರಬರಾಜುದಾರರು ಸರ್ಕಾರದ ಇ-ಮಾರ್ಕೆಟ್ ‌ಪ್ಲೇಸ್‌ನಲ್ಲಿ ಮೂಲದ ದೇಶವನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದ್ದರು.

ಭಾರತದ ಚೀನಾ ಅವಲಂಬನೆಯನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಸರಣಿಯಲ್ಲಿ ಈ ಕ್ರಮವು ಇತ್ತೀಚಿನದ್ದಾಗಿದೆ. ಇದಕ್ಕೂ ಮೊದಲು ಸರ್ಕಾರವು 59 ಚೀನೀ ಆ್ಯಪ್‌ಗಳ ಬಳಕೆಯನ್ನು ನಿಷೇಧಿಸಿತ್ತು.

ಗಡಿ ಸಂಘರ್ಷವನ್ನು ತಗ್ಗಿಸಲು ಎರಡೂ ರಾಷ್ಟ್ರಗಳು ಮಾತುಕತೆಗಳಲ್ಲಿ ತೊಡಗಿರುವ ಈ ಸಮಯದಲ್ಲಿ ಭಾರತ ಸರ್ಕಾರ ಇಂತಹ ನಿರ್ಧಾರವನ್ನು ಕೈಗೊಂಡಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನಿಕರ ನಿಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಚೀನಾದ ಕಡೆಯವರು ಪ್ರಾಮಾಣಿಕರಾಗಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ.

ಇತ್ತೀಚಿನ ನಡೆಯ ಇತರ ಪ್ರಮುಖ ಅಂಶಗಳು:

  • ಡಿಸೆಂಬರ್ 31 ರವರೆಗೆ ಕೊರೊನಾ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸುವುದು ಸೇರಿದಂತೆ ಕೆಲವು ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ.
  • ಎಲ್ಲಾ ಹೊಸ ಟೆಂಡರ್‌ಗಳಿಗೆ ಅನ್ವಯಿಸುವ ಹೊಸ ನಿಯಮಗಳು; ಟೆಂಡರ್‌ಗಳನ್ನು ಈಗಾಗಲೇ ಆಹ್ವಾನಿಸಿರುವ ಸಂದರ್ಭಗಳಲ್ಲಿ, ಅರ್ಹತೆಯ ಮೌಲ್ಯಮಾಪನದ ಆರಂಭಿಕ ಹಂತವು ಪೂರ್ಣಗೊಳ್ಳದಿದ್ದರೆ, ನೋಂದಾಯಿಸದ ಬಿಡ್‌ದಾರರು ಅರ್ಹತೆ ಪಡೆಯುವುದಿಲ್ಲ.
  • ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳಿಂದ ನೋಂದಾಯಿಸದ ಘಟಕಗಳಿಗೆ ಉಪ ಗುತ್ತಿಗೆ ನೀಡಲು ಕೂಡಾ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ.
  • ಮೊದಲ ಹಂತದ ಮೌಲ್ಯಮಾಪನ ಪೂರ್ಣಗೊಂಡರೆ ಟೆಂಡರ್‌ಗಳನ್ನು ರದ್ದುಗೊಳಿಸಲಾಗುತ್ತದೆ.
  • ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಸರ್ಕಾರಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ.
  • ರಾಜ್ಯ ಸರ್ಕಾರಗಳು ಸಮರ್ಥ ಪ್ರಾಧಿಕಾರವನ್ನು ನೇಮಿಸಿ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದಕ್ಕಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಕಡ್ಡಾಯವಾಗಿದೆ.

ಭಾರತ 2019 ರಲ್ಲಿ ಚೀನಾದಿಂದ 70 ಬಿಲಿಯನ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದು, ದ್ವಿಪಕ್ಷೀಯ ವ್ಯಾಪಾರ ಕೊರತೆಯ ನಂತರ ಸುಮಾರು 50 ಬಿಲಿಯನ್ ಆಗಿತ್ತು.


ಇದನ್ನೂ ಓದಿ: ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...