Homeಅಂತರಾಷ್ಟ್ರೀಯಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಅಪ್ಲಿಕೇಶನ್‌ಗಳ ನಿಷೇಧದ ನಂತರ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದ ಭಾರತ

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

- Advertisement -
- Advertisement -

ಗಡಿ ಸಂಘರ್ಷದ ನಂತರ ಚೀನಾದೊಟ್ಟಿಗಿನ ವ್ಯವಹಾರಗಳನ್ನು ಹೊರಗಿಡುವುದು ಮತ್ತು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಶಿಥಿಲಗೊಳಿಸುವ ಉದ್ದೇಶದಿಂದ ಭಾರತ ತನ್ನ ನೆರೆಹೊರೆ ದೇಶಗಳ ಮೇಲೆ ಹೊಸ ವ್ಯಾಪಾರ ನಿರ್ಬಂಧಗಳನ್ನು ಹೇರಿದೆ.

ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳ ಕಂಪೆನಿಗಳು ಕೈಗಾರಿಕಾ ಇಲಾಖೆಯಲ್ಲಿ ನೋಂದಾಯಿಸುವವರೆಗೆ ಸರಕು ಮತ್ತು ಸೇವೆಗಳಿಗಾಗಿ ಸರ್ಕಾರದ ಒಪ್ಪಂದಗಳಿಗೆ ಬಿಡ್ಡಿಂಗ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ, ಟೆಂಡರ್‌ಗಳಿಗೆ ಬಿಡ್ಡಿಂಗ್ ಮಾಡುವಾಗ ಸರಬರಾಜುದಾರರು ಸರ್ಕಾರದ ಇ-ಮಾರ್ಕೆಟ್ ‌ಪ್ಲೇಸ್‌ನಲ್ಲಿ ಮೂಲದ ದೇಶವನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಿದ್ದರು.

ಭಾರತದ ಚೀನಾ ಅವಲಂಬನೆಯನ್ನು ಮುಕ್ತಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಸರಣಿಯಲ್ಲಿ ಈ ಕ್ರಮವು ಇತ್ತೀಚಿನದ್ದಾಗಿದೆ. ಇದಕ್ಕೂ ಮೊದಲು ಸರ್ಕಾರವು 59 ಚೀನೀ ಆ್ಯಪ್‌ಗಳ ಬಳಕೆಯನ್ನು ನಿಷೇಧಿಸಿತ್ತು.

ಗಡಿ ಸಂಘರ್ಷವನ್ನು ತಗ್ಗಿಸಲು ಎರಡೂ ರಾಷ್ಟ್ರಗಳು ಮಾತುಕತೆಗಳಲ್ಲಿ ತೊಡಗಿರುವ ಈ ಸಮಯದಲ್ಲಿ ಭಾರತ ಸರ್ಕಾರ ಇಂತಹ ನಿರ್ಧಾರವನ್ನು ಕೈಗೊಂಡಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೈನಿಕರ ನಿಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಚೀನಾದ ಕಡೆಯವರು ಪ್ರಾಮಾಣಿಕರಾಗಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ.

ಇತ್ತೀಚಿನ ನಡೆಯ ಇತರ ಪ್ರಮುಖ ಅಂಶಗಳು:

  • ಡಿಸೆಂಬರ್ 31 ರವರೆಗೆ ಕೊರೊನಾ ವೈದ್ಯಕೀಯ ಸಾಮಗ್ರಿಗಳನ್ನು ಖರೀದಿಸುವುದು ಸೇರಿದಂತೆ ಕೆಲವು ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ.
  • ಎಲ್ಲಾ ಹೊಸ ಟೆಂಡರ್‌ಗಳಿಗೆ ಅನ್ವಯಿಸುವ ಹೊಸ ನಿಯಮಗಳು; ಟೆಂಡರ್‌ಗಳನ್ನು ಈಗಾಗಲೇ ಆಹ್ವಾನಿಸಿರುವ ಸಂದರ್ಭಗಳಲ್ಲಿ, ಅರ್ಹತೆಯ ಮೌಲ್ಯಮಾಪನದ ಆರಂಭಿಕ ಹಂತವು ಪೂರ್ಣಗೊಳ್ಳದಿದ್ದರೆ, ನೋಂದಾಯಿಸದ ಬಿಡ್‌ದಾರರು ಅರ್ಹತೆ ಪಡೆಯುವುದಿಲ್ಲ.
  • ಭಾರತದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ರಾಷ್ಟ್ರಗಳಿಂದ ನೋಂದಾಯಿಸದ ಘಟಕಗಳಿಗೆ ಉಪ ಗುತ್ತಿಗೆ ನೀಡಲು ಕೂಡಾ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ.
  • ಮೊದಲ ಹಂತದ ಮೌಲ್ಯಮಾಪನ ಪೂರ್ಣಗೊಂಡರೆ ಟೆಂಡರ್‌ಗಳನ್ನು ರದ್ದುಗೊಳಿಸಲಾಗುತ್ತದೆ.
  • ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಸರ್ಕಾರಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಗಳಿಗೆ ಹೊಸ ನಿಯಮಗಳು ಅನ್ವಯಿಸುತ್ತದೆ.
  • ರಾಜ್ಯ ಸರ್ಕಾರಗಳು ಸಮರ್ಥ ಪ್ರಾಧಿಕಾರವನ್ನು ನೇಮಿಸಿ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದಕ್ಕಾಗಿ ರಾಜಕೀಯ ಮತ್ತು ಭದ್ರತಾ ಅನುಮತಿ ಕಡ್ಡಾಯವಾಗಿದೆ.

ಭಾರತ 2019 ರಲ್ಲಿ ಚೀನಾದಿಂದ 70 ಬಿಲಿಯನ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದ್ದು, ದ್ವಿಪಕ್ಷೀಯ ವ್ಯಾಪಾರ ಕೊರತೆಯ ನಂತರ ಸುಮಾರು 50 ಬಿಲಿಯನ್ ಆಗಿತ್ತು.


ಇದನ್ನೂ ಓದಿ: ಚೀನಾ ಕಂಪೆನಿ ಸಹಿತ 50 ಹೂಡಿಕೆಗಳನ್ನು ಪರಿಶೀಲಿಸುತ್ತಿರುವ ಕೇಂದ್ರ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...