Homeಕರೋನಾ ತಲ್ಲಣಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಒಂದೇ ದಿನಕ್ಕೆ 48,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು; ಒಟ್ಟು ಸೋಂಕಿತರ ಸಂಖ್ಯೆ 13.36 ಲಕ್ಷ!

ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ದೇಶವು ವಿಶ್ವದ 6ನೇ ಸ್ಥಾನದಲ್ಲಿದೆ.

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,916 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,36,861 ಕ್ಕೆ ಏರಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಈ ಒಂದು ದಿನದ ಅವಧಿಯಲ್ಲಿ 757 ಕೊರೊನಾ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಇದುವರೆಗೆ ಒಟ್ಟಾರೆ 31,358 ಸಾವುಗಳು ಸಂಭವಿಸಿದ್ದು, ಈಗ ಯುಎಸ್, ಬ್ರೆಜಿಲ್, ಬ್ರಿಟನ್, ಮೆಕ್ಸಿಕೊ ಮತ್ತು ಇಟಲಿಯ ನಂತರ ವಿಶ್ವದ 6ನೇ ಸ್ಥಾನದಲ್ಲಿದೆ.

ಚೇತರಿಕೆ ದರವು ಶೇಕಡಾ 63.53 ಮತ್ತು ಕೊರೊನಾ ಪಾಸಿಟೀವ್ ದರವು ಶೇಕಡಾ 11.62 ಆಗಿದೆ. ಶುಕ್ರವಾರ ಅತಿ ಹೆಚ್ಚು 4,20,898 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೊನಾ ಪ್ರಕರಣಗಳು 45,000 ಕ್ಕಿಂತ ಹೆಚ್ಚು ವರದಿಯಾಗುತ್ತಿರುವುದು ಇದು ಮೂರನೇ ಬಾರಿ.

ಕೊರೊನಾ ಬೆಳವಣಿಗೆಯ 10 ಪ್ರಮುಖ ಅಂಶಗಳು:

  1. ಭಾರತದಲ್ಲಿ ಶುಕ್ರವಾರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 13 ಲಕ್ಷ ದಾಟಿದೆ. ದೇಶದಲ್ಲಿ ಒಂದೇ ದಿನದಲ್ಲಿ ದಾಖಲೆಯ 49,310 ಹೊಸ ಪ್ರಕರಣಗಳು ದಾಖಲಾಗಿವೆ.

2. ಭಾರತದ ಕೊರೊನಾ ಪ್ರಕರಣಗಳ ಮೊತ್ತವು 13 ಲಕ್ಷ ತಲುಪಲು 177 ದಿನಗಳನ್ನು ತೆಗೆದುಕೊಂಡಿತು. ಜುಲೈ 2 ರಿಂದ ದೇಶವು ಆರು ಲಕ್ಷಗಳನ್ನು ದಾಟಿದ ನಂತರ, ಭಾರತದಲ್ಲಿ ಸುಮಾರು ಮೂರು ವಾರಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.

3. ಅತಿ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರದಲ್ಲಿ ಶುಕ್ರವಾರ 9,615 ಹೊಸ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 1,057 ಮುಂಬೈನಲ್ಲಿದೆ. ರಾಜ್ಯದ ಕೊರೊನಾ ಸೋಂಕಿತರ ಮೊತ್ತವು ಪ್ರಸ್ತುತ 3,57,117 ಆಗಿದೆ. ವೈರಸ್ ಸಂಬಂಧಿತ ಸಾವುಗಳ ಸಂಖ್ಯೆ 13,132 ಕ್ಕೆ ಏರಿಕೆಯಾಗಿದ್ದು, ಶುಕ್ರವಾರ 278 ಹೊಸ ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

4. ದೆಹಲಿಯಲ್ಲಿ ಶುಕ್ರವಾರ 1,025 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 1.28 ಲಕ್ಷ ಪ್ರಕರಣಗಳು ದಾಖಲಾಗಿವೆ. ಅಲ್ಲಿ ಈವರೆಗೆ ವೈರಸ್‌ನಿಂದ 3,777 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

5. ದೆಹಲಿಯ ಚೇತರಿಕೆಯ ಪ್ರಮಾಣವು ಶೇಕಡಾ 86 ಕ್ಕಿಂತ ಹೆಚ್ಚಾಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು 13,681 ಕ್ಕೆ ಇಳಿದಿದೆ. ಇದು ಕಳೆದ ಏಳು ವಾರಗಳಲ್ಲಿ ಅತಿ ಕಡಿಮೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ತಿಳಿಸಿದೆ.

6. ಅಸ್ಸಾಂನಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ ಶುಕ್ರವಾರ 1,130 ಹೊಸ ಪ್ರಕರಣಗಳೊಟ್ಟಿಗೆ 29,921 ಕ್ಕೆ ತಲುಪಿದೆ. ಆರು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 76 ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

7. ಒಡಿಶಾದ ಕೊರೊನಾ ಸೋಂಕಿತರ ಮೊತ್ತವು ಶುಕ್ರವಾರ ದಾಖಲೆಯ 1,594 ಪ್ರಕರಣಗಳೊಟ್ಟಿಗೆ 22,693 ಕ್ಕೆ ಏರಿದೆ. ಗಂಜಾಂ ಜಿಲ್ಲೆಯಲ್ಲಿ ಗರಿಷ್ಠ 732 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ವೈರಸ್‌ನಿಂದ 120 ಜನರು ಸಾವನ್ನಪ್ಪಿದ್ದಾರೆ.

8. ಭಾರತವು ವಿಶ್ವದ ಅತ್ಯಂತ ಕಡಿಮೆ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಹೊಂದಿದೆ” ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ಸೋಂಕಿತರು ಶೇಕಡಾ 63.45 ರಷ್ಟಿದ್ದರೆ, ಮರಣ ಪ್ರಮಾಣವು ಶೇಕಡಾ 2.3 ರಷ್ಟಿದೆ.

9. ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಜಾಗತಿಕ ಕೊರೊನಾ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಹೆಚ್ಚಳವನ್ನು ವರದಿ ಮಾಡಿದೆ. ಒಟ್ಟು 24 ಗಂಟೆಗಳಲ್ಲಿ 284,196 ರಷ್ಟು ಏರಿಕೆಯಾಗಿದೆ.

10. ಸಾಂಕ್ರಾಮಿಕ ರೋಗವು ವಿಶ್ವದಾದ್ಯಂತ 633,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 15.5 ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸುದ್ದಿ ಸಂಸ್ಥೆ AFP ತಿಳಿಸಿದೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...