Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...