Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...