Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...