Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...