Homeಮುಖಪುಟನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

- Advertisement -
- Advertisement -

ಸ್ವಂತಂತ್ರ ಮಾಧ್ಯಮ ಸಂಸ್ಥೆ ಗೌರಿ ಮೀಡಿಯಾ ಟ್ರಸ್ಟ್ ನಡೆಸುತ್ತಿರುವ ನಾನುಗೌರಿ.ಕಾ ವೆಬ್‌ಸೈನ್‌ನ ಅಧಿಕೃತ ಫೇಸ್‌ಬುಕ್ ಪುಟವನ್ನು ಫೇಸ್‌ಬುಕ್ ಗುರುವಾರ ನಿರ್ಭಂಧಿಸಿದೆ. ಯಾವುದೇ ನಿರ್ದಿಷ್ಠ ಕಾರಣಗಳನ್ನು ನೀಡದ ಫೇಸ್‌ಬುಕ್, ಸಮುದಾಯ ನಿಯಮಗಳನ್ನು ಮುರಿದಿದ್ದಾರೆ ಎಂದಷ್ಟೇ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗೌರಿ ಮೀಡಿಯಾ ತಂಡ ಖಂಡನಾ ಹೇಳಿಕೆ ಬಿಡುಗಡೆ ಮಾಡಿದೆ. ಅದರ ಪೂರ್ಣಪಾಠ ಇಲ್ಲಿದೆ.

ಗೆಳೆಯರೇ,
ಪ್ರಜಾಸತ್ತಾತ್ಮಕ ಮೌಲ್ಯಗಳೊಂದಿಗೆ ಸುದ್ದಿ ಅಂತರ್ಜಾಲ ಪತ್ರಿಕೆಯನ್ನು ಬಹಳ ಪರಿಣಾಮಕಾರಿಯಾಗಿ ನಾನುಗೌರಿ.ಕಾಂ ನಡೆಸಿಕೊಂಡು ಬರುತ್ತಿರುವುದನ್ನು ನೀವು ಗಮನಿಸಿದ್ದೀರಿ. ಪ್ರಭುತ್ವ ಆಗಲೀ, ದೈತ್ಯ ಟೆಕ್ ಸಂಸ್ಥೆ ಆಗಲೀ, ಅವುಗಳಿಂದ ಇವೇ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನಿರೀಕ್ಷಿಸುವುದು ನ್ಯಾಯವಲ್ಲವೇ?

ನೆನ್ನೆ ಇಂದ ಫೇಸ್‌ಬುಕ್ ನಾನುಗೌರಿ.ಕಾಮ್ ನ ಯಾವುದೇ ಸುದ್ದಿ ಲಿಂಕ್ ಗಳನ್ನು ಶೇರ್ ಮಾಡಲು ಬಿಡುತ್ತಿಲ್ಲ. ಎಫ್ ಬಿಯ ಸಮುದಾಯ ನಿಯಮಗಳನ್ನು ಮುರಿದಿದ್ದೇವೆ ಎಂಬ ಒಂದು ಸಾಮಾನ್ಯ ಸಂದೇಶವನ್ನು ಪ್ರತಿ ಬಾರಿಯೂ ನಮ್ಮೆಡೆಗೆ ಅದು ಎಸೆಯುತ್ತಿದೆಯೇ ಹೊರತು, ಹಲವು ಬಾರಿ ಅದನ್ನು ನಿರಾಕರಿಸಿ ಮನವರಿಕೆ ಮಾಡಲು ಪ್ರಯತ್ನಿಸಿದ ನಂತರವೂ, ಅವರ ಸಪೋರ್ಟ್ ತಂಡಕ್ಕೆ ಪತ್ರ ಬರೆದು ಬಿನ್ನವಿಸಿಕೊಂಡ ನಂತರವೂ ಅದು ನಮಗೆ ನಿರ್ದಿಷ್ಟ ಕಾರಣಗಳನ್ನು ನೀಡದೆ ವೃತ್ತಿಪರತೆಯನ್ನು ಮರೆತುಬಿಟ್ಟಿದೆ.

ಕಳೆದ ವಾರ ಪ್ರಸಕ್ತ ರಾಜ್ಯ ಸರ್ಕಾರವನ್ನು ಮೌಲ್ಯಮಾಪನ ಮಾಡಿ ಬರೆದ ಎರಡು ಮೂರು ಪರಿಣಾಮಕಾರಿ ಲೇಖನಗಳ, ಬಿಜೆಪಿ ಶಾಸಕರೊಬ್ಬರ ಹಗರಣದ ಕುರಿತು ವಿಡಿಯೋ ಸಾಕ್ಷ್ಯದೊಂದಿಗೆ ಮಾಡಿದ ವರದಿಯ ಬೆನ್ನಲ್ಲಿಯೇ ಇದು ನಡೆದಿರುವುದು ಆತಂಕಕಾರಿಯಾಗಿದೆ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆಲವು ಹಿತಾಸಕ್ತಿಗಳ ಕೈವಾಡವು ಈ ಬ್ಲಾಕಿಂಗ್ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ. ಅವರೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ನಮ್ಮ ಲಿಂಕ್ ಗಳ ಬಗ್ಗೆ ಸುಳ್ಳು ಸುಳ್ಳೇ ಅರೋಪ ಮಾಡಿ ಫೇಸ್ಬುಕ್ ಗೆ ರಿಪೋರ್ಟ್ ಮಾಡಿರುವ ಸಾಧ್ಯತೆಯೂ ದೊಡ್ಡದಾಗಿದೆ. ಆದರೆ ಇಂತಹ ಹುರುಳಿಲ್ಲದ ಆರೋಪಗಳ ಬಗ್ಗೆ ಸಣ್ಣ ಕ್ರಾಸ್ ಚೆಕ್ ಮಾಡುವ ಸೌಲಭ್ಯ ಫೇಸ್ಬುಕ್ ಹೊಂದಿರಬಾರದೇ? ಅಂತ ಅಪೇಕ್ಷೆ ನಮಗೆ ಇರಬಾರದೇ? ಅಷ್ಟು ಕೂಡ ವೆರಿಫೈ ಮಾಡದೆ ಸುಳ್ಳು ಆರೋಪಗಳಿಗೆ ಬಲಿಯಾಗಿ ನಮ್ಮ ಜಾಲತಾಣದ ಲಿಂಕ್ ಗಳನ್ನು ಶೇರ್ ಮಾಡದಂತೆ ನಿಷೇಧಿಸಿರುವ ಫೇಸ್ಬುಕ್ ನಡೆಯನ್ನು ಗೌರಿ ಮೀಡಿಯಾ ತೀವ್ರವಾಗಿ ಖಂಡಿಸುತ್ತದೆ.

ಈ ಸಮಯದಲ್ಲಿ ಬೇರೆ ಉಪಾಯ ಕಾಣದೆ ನಿಮ್ಮ ಬೆಂಬಲಕ್ಕೆ ಮೊರೆ ಇಡುತ್ತಿದ್ದೇವೆ. ದಯವಿಟ್ಟು ಈ ಪೋಸ್ಟ್ ಅನ್ನು ವ್ಯಾಪಕವಾಗಿ ಶೇರ್ ಮಾಡಿ, ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಫೇಸ್ಬುಕ್ ಮೇಲೆ ಒತ್ತಡ ಹೇರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಎಲ್ಲರ ಧ್ವನಿಯೂ ನಮಗೆ ಮುಖ್ಯ – ಅದು ಹಳ್ಳವಾಗಿ ನಂತರ ಸಮುದ್ರವಾಗಿ ಒಂದು ದಿನ ಭೋರ್ಗರೆಯುತ್ತದೆ ಎಂಬ ನಂಬಿಕೆ ಇದ್ದೇ ಇದೆ. ಕನಿಷ್ಟ ಫೇಸ್ಬುಕ್ ನಾವು ಉಲ್ಲಂಘಿಸಿರುವ ನಿಯಮಗಳೆಡೆಗೆ ಬೊಟ್ಟು ಮಾಡಲಿ. ನಾವು ತಿದ್ದಿಕೊಳ್ಳುವುದಕ್ಕೂ ಸಿದ್ಧ. ಆದರೆ ಬ್ಲಾಕ್ ಮಾಡುವ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ವಿರೋಧಿಸದೆ ನಮಗೆ ಮಾರ್ಗವಿಲ್ಲ. ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಇಂತಹ ಸಣ್ಣ ಸಂಗತಿಗಳಲ್ಲಿ ನ್ಯಾಯ ಪಡೆಯುವುದರಲ್ಲಿಯೂ ಅಡಗಿದೆ ಎಂಬುದು ನಮ್ಮ ಬಲವಾದ ನಂಬಿಕೆ.

– ಗೌರಿ ಮೀಡಿಯಾ ತಂಡ

***

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...