Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...