Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...